ಆರ್ಡಿನೋ ಹೆಕಾಥಾನ 6 ಗಂಟೆಗಳಲ್ಲಿ ನೈಜ ಪ್ರೋಜೆಕ್ಟಗಳನ್ನು ಸೃಷ್ಠಿಸಿದ ವಿದ್ಯಾರ್ಥಿಗಳು

ಕಲಬುರಗಿ: ಇದೇ ತಿಂಗಳ 26 ರಂದು ಇಲ್ಲಿನ ಪಿ.ಡಿ.ಎ. ತಾಂತ್ರಿಕ ಮಹಾವಿದ್ಯಲಯದ ವಿದ್ಯುನ್ಮಾನ ಮತ್ತು ದೂರಸಂಪರ್ಕ ವಿಭಾಗದಲ್ಲಿ ಚಾಲನೆಗೊಂಡ ಟೆಕ್ಯೂಪ-೩ ಪ್ರಾಯೋಜಿತ ಐದು ದಿನಗಳ ರೋಬೋಟಿಕ್ಸ ಮತ್ತು ಆರ್ಡಿನೋ ಕಾರ್ಯಾಗಾರಕ್ಕೆ ಇಂದು ತೆರೆ ಎಳೆಯಲಾಯಿತು.

ಸತತ 2 ದಿನಗಳ ಆರ್ಡಿನೋ ಪ್ರೋಜೆಕ್ಟಗಳ ಮೇಲೆ ತರಬೇತಿಯನ್ನು ಪಡೆದ ವಿವಿಧ ವಿಭಾಗದ ಹಾಗೂ ವಿವಿಧ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಇಂದು ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸತತ ೬ ಗಂಟೆಗಳ ಕಾಲ ನಡೆದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಕೌಶಲ್ಯವನ್ನು ಬಳಸಿ ವಿವಿಧ ರೀತಿಯ ನೈಜ ಪ್ರಾಜೆಕ್ಟಗಳನ್ನು ತಯಾರಿಸಿದರು. ತೀರ್ಪುಗಾರರಾಗಿ ಆಗಮಿಸಿದ ವಿಭಾಗದ ಪ್ರಾಧ್ಯಾಪಕರುಗಳು ಬೆಳಿಗ್ಗೆಯಿಂದ ವಿದ್ಯಾರ್ಥಿಗಳ ಕಾರ್ಯವನ್ನು ಗಮನಿಸಿ ಸೂಕ್ತವಾದಂತಹ ಮೂರು ವಿದ್ಯಾರ್ಥಿಗಳ ಗುಂಪುಗಳಿಗೆ ಪ್ರಶಸ್ತಿಯನ್ನು ನೀಡಿದರು.

ಬಹುತೇಕ ಕಾರ್ಯಾಗಾರಗಳಲ್ಲಿ ಉನ್ನತ ಮಟ್ಟದ ಸಂಪನ್ಮೂಲ ವ್ಯಕ್ತಿಗಳು ಬಂದು ಕಾರ್ಯಾಗಾರವನ್ನು ನಡೆಯಿಸಿಕೊಡುವುದು ಸರ್ವೇಸಾಮಾನ್ಯ ಅದರೆ ಇಂದು ನಡೆದ ಈ ಕಾರ್ಯಗಾರಕ್ಕೆ ಹಿರಿಯ ವಿದ್ಯಾರ್ಥಿಗಳು ಸಂಪನ್ಮೂಲವ್ಯಕ್ತಿಯಾಗಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿ ಅವರನ್ನು ಸ್ಪರ್ಧೆಗೆ ಅರ್ಹರನ್ನಾಗಿ ಮಾಡಿದ್ದರು. ಈ ತರಹದ ಕಾರ್ಯಾಗಾರ ಪಿ.ಡಿ.ಎ. ಇತಿಹಾಸದಲ್ಲಿಯೇ ಮೊದಲಬಾರಿಗೆ ನಡೆದಿದ್ದು ತಮಗೆ ಹೆಮ್ಮೆ ಎನಿಸಿದೆ ಎಂದು ವಿಭಾಗದ ಮುಖ್ಯಸ್ಥರಾದ ಡಾ. ರಾಜು ಯಾನಮಶೆಟ್ಟಿ ತಮ್ಮ ಸಂತಹ ವ್ಯಕ್ತಪಡಿಸಿದರು.

ಮುಕ್ತಾಯ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಟೆಕ್ಯೂಪ್-೩ ರ ಸಂಚಾಲಕರು ಮಾತನಾಡಿ ವಿದ್ಯುನ್ಮಾನ ಮತ್ತು ದೂರಸಂಪರ್ಕ ವಿಭಾಗದ ವಿದ್ಯಾರ್ಥಿಗಳು ಹಾಗೂ ಶಿಕ್ಷರು ತಮ್ಮ ನೂತನ ಪದ್ದತಿಯನ್ನು ಅನುಸರಿಸಿ ಆರ್ಡಿನೋ ಹೆಕಾಥಾನಗೆ ಪರಿಪೂರ್ಣ ಅರ್ಥವನ್ನು ನೀಡಿದ್ದಾರೆಂದು ತಮ್ಮ ಹೆಮ್ಮೆಯನ್ನು ವ್ಯಕ್ತಪಡಿಸಿದರು.

ವಿಭಾಗದ ಹಿರಿಯ ವಿದ್ಯಾರ್ಥಿಗಳು ಆರ್ಡಿನೋ ತರಬೇತಿಯನ್ನು ಹೊಂದಿ ಪರಿಣಿತಿಯನ್ನು ಪಡೆದುಕೊಂಡು ಅದನ್ನು ತಮ್ಮ ಕಿರಿಯ ವಿದ್ಯಾರ್ಥಿಗಳಿಗೆ ಕೊಡುವ ನಿಟ್ಟಿನಲ್ಲಿ ಸುಮಾರು ಮೂರು ತಿಂಗಳುಗಳ ಕಾಲ ವಿಭಾಗದ ಡಾ. ರಾಜು ಯಾನಮಶೆಟ್ಟಿ ಮತ್ತು ಪ್ರೊ. ಪದ್ಮಪ್ರೀಯಾ ಪಾಟೀಲ ಅವರ ಮಾರ್ಗದರ್ಶನದಲ್ಲಿ ವಿವಿಧ ರೀತಿಯ ಪ್ರೋಜೆಕ್ಟಗಳನ್ನು ಮಾಡಿ ನೂತನ ರೀತಿಯ ಕಾರ್ಯಾಗಾರಕ್ಕೆ ಅಣಿಯಾಗಿದ್ದರು ಅವರ ಈ ಶ್ರಮಕ್ಕೆ ಫಲದೊರಕಿದೆ ಎಂದು ವಿಭಾಗದ ಹಿರಿಯ ಪ್ರಾಧ್ಯಾಪಕರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಪ್ರಥಮ ಮತ್ತು ದ್ವೀತಿಯ ಪ್ರಶಸ್ತಿಯನ್ನು ವಿದ್ಯುನ್ಮಾನ ಮತ್ತು ದೂರಸಂಪರ್ಕ ವಿಭಾಗದ ವಿದ್ಯಾರ್ಥಿಗಳಿಗೆ ಲಭಿಸಿದ್ದು ತೃತಿಯ ಸ್ಥಾನವನ್ನು ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ದೊರಕಿದೆ ಎಂದು ಕಾರ್ಯಾಗಾರದ ಪ್ರಮುಖ ಸಂಚಾಲಕರಾದ ಪ್ರೊ.ಪದ್ಮಪ್ರೀಯಾ ಪಾಟೀಲ ಅವರು ತಿಳಿಸಿದರು.

ಐದು ದಿನಗಳ ಈ ಕಾರ್ಯಾಗಾರದಲ್ಲಿ ಮೊದಲ ಎರಡು ದಿನಗಳು ರೋಬೋಟಿಕ್ಸ್ ವಿಚಾರ ಸಂಕಿರಣವಿದ್ದು  ನಂತರದ ಮೂರು ದಿನಗಳು ಆರ್ಡಿನೋ ಕಾರ್ಯಾಗಾರಕ್ಕೆ ಮೀಸಲಿಡಲಾಗಿತ್ತು. ಇದರಲ್ಲಿ ಎರಡು ದಿನಗಳು ’ಬೂಟ್ ಕ್ಯಾಂಪ್ ತರಬೇತಿ ನಡೆಯಿಸಿ ವಿದ್ಯಾರ್ಥಿಗಳಿಗೆ ಪರಿಣಿತಿಯನ್ನು ಕೊಡಲಾಗಿತ್ತು. ಕೊನೆಯ ದಿನವಾದ ಇಂದು ವಿದ್ಯಾರ್ಥಿಗಳಿಗೆ ಹೆಕಾಥಾನ ಸ್ಪರ್ಧೇಯನ್ನು ಎರ್ಪಡಿಸಿ ಅವರ ತಾಂತ್ರಿಕ ಜ್ಞಾನವನ್ನು ಅಳಿಯಲಾಗಿತ್ತು ಎಂದು ವಿದ್ಯಾರ್ಥಿ ತರಬೇತುದಾರರು ತಿಳಿಸಿದರು.

ವಿಭಾಗದ ಮುಖ್ಯಸ್ಥರಾದ ಡಾ. ರಾಜು ಯಾನಮಶೆಟ್ಟಿ ಈ ಕಾರ್ಯಾಗಾರದ ಸಂಯೋಜಕರಾಗಿದ್ದು, ಪ್ರೊ. ಶ್ರೀಧರ ಕೆ. ಮತ್ತು ಪ್ರೊ. ಪದ್ಮಪ್ರೀಯಾ ಪಾಟೀಲ ಇವರು ಸಂಚಾಲಕರಾಗಿ ಕಾರ್ಯನಿರ್ವಹಿಸುವರು. ವಿಭಾಗದ ಪ್ರಾಧ್ಯಾಪಕರು, ಉಪ ಪ್ರಾಧ್ಯಾಪಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ಡೀನ್ ಹಾಗೂ ವಿದ್ಯಾರ್ಥಿಗಳು ಈ ಮುಕ್ತಾಯ ಸಮಾರಂಭದಲ್ಲಿ ಭಾಗವಹಿಸಿದ್ದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

1 hour ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

2 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

3 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

3 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

3 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420