ಶಹಾಬಾದ: ಕಾದಂಬರಿಕಾರ, ಪರಿಸರವಾದಿ, ಪ್ರಗತಿಶೀಲ ಚಿಂತಕ, ಯಕ್ಷಗಾನ ತಜ್ಞ, ಸ್ವಾತಂತ್ರ್ಯ ಹೋರಾಟಗಾರ, ಚಿತ್ರ ನಿರ್ದೇಶಕ ಹೀಗೆ ಹತ್ತು ಹಲವು ಕ್ಷೇತ್ರಗಳ ಮೂಲಕ ಜ್ಞಾನಪೀಠ ಪ್ರಶಸ್ತಿ ಪುರಷ್ಕøತ ಮೇರು ಸಾಹಿತಿ ಡಾ.ಕೆ.ಶಿವರಾಮ ಕಾರಂತ ಅವರು ಕನ್ನಡ ನಾಡು-ನುಡಿಗೆ ಅನನ್ಯವಾದಕೊಡುಗೆಯನ್ನು ನೀಡಿದ್ದಾರೆ ಎಂದು ಗುವಿವಿ ವಿಶ್ರಾಂತ ಪ್ರಾಧ್ಯಾಪಕ, ಸಾಹಿತಿ ಡಾ.ವಾಸುದೇವ ಸೇಡಂ ಎಚ್. ಹೇಳಿದರು.
ಅವರು ಸಮೀಪದ ನಂದೂರ(ಕೆ)ಯ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗುತ್ತಿರುವ ಸುವರ್ಣ ಕರ್ನಾಟಕ ರಾಜ್ಯೋತ್ಸವ ಸರಣಿ ಕಾರ್ಯಕ್ರಮ-8 ರಲ್ಲಿ ಮಂಗಳವಾರ ಜರುಗಿದ ‘ಕನ್ನಡ ನಾಡು-ನುಡಿಗೆ ಡಾ.ಶಿವರಾಮ ಕಾರಂತರ ಕೊಡುಗೆ’ ಎಂಬ ಉಪನ್ಯಾಸವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರಂತರು ‘ಮೂಕಜ್ಜಿಯ ಕನಸುಗಳು’, ‘ಮರಳಿ ಮಣ್ಣಿಗೆ’ ಎಂಬ ಮೇರು ಕೃತಿಗಳು, 47 ಕಾದಂಬರಿಗಳು ಒಳಗೊಂಡಂತೆ ಒಟ್ಟು 417 ಗ್ರಂಥಗಳನ್ನು ರಚಿಸಿದ್ದಾರೆ. ತಮ್ಮ ಕಾದಂಬರಿಯಲ್ಲಿ ಸಮಾಜದ ಬಗ್ಗೆ ತಮ್ಮ ಕಳಕಳಿಯನ್ನು ಎತ್ತಿ ತೋರಿಸಿದ್ದಾರೆ. ಎಲ್ಲಾ ಜನರು ಓದುವ, ತಿಳಿಯುವ ಹಾಗೆ ಸರಳವಾದ ಭಾಷೆಯಲ್ಲಿ ಸಾಹಿತ್ಯ ರಚಿಸಿದ್ದು ಅವರ ವೈಶಿಷ್ಟ್ಯತೆಯಾಗಿದೆ ಎಂದರು.
ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ.ಪಾಟೀಲ ಮಾತನಾಡಿ, ಪ್ರಸಿದ್ದ ಇತಿಹಾಸಕಾರರಾದ ರಾಮಚಂದ್ರ ಗುಹಾ ಅವರು ಹೇಳಿರುವಂತೆ, “ಸ್ವಾತಂತ್ರೋತ್ತರ ಭಾರತದ ರವೀಂದ್ರನಾಥ ಟ್ಯಾಗೋರ” ಎಂದು ಶಿವರಾಮ ಕಾರಂತರನ್ನು ವರ್ಣಿಸಿದ್ದು, ಕಾರಂತರ ಮೇರು ವ್ಯಕ್ತಿತ್ವಕ್ಕೆ ಸಾಕ್ಷಿಯಾಗಿದೆ. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕøತಿ ಜಗತ್ತಿನ ಶ್ರೀಮಂತಿಕೆಯಲ್ಲಿ ಒಂದಾಗಲು ಶಿವರಾಮ ಕಾರಂತರ ಕೊಡುಗೆ ಅನನ್ಯವಾಗಿದೆ.
ಕಾರಂತರಿಗೆ ‘ಕಡಲ ತೀರದ ಭಾರ್ಗವ’ ಎಂಬ ಬಿರುದಾಂಕಿತವಿತ್ತು. ಬಾಲ್ಯದಿಂದಲೇ ದೇಶ ಸೇವೆ ಮಾಡಬೇಕು, ಸಮಾಜದ ಬಗ್ಗೆ ಸದಾ ಕಳಕಳಿ ತುಡಿಯುತ್ತಿತ್ತು. ಗಾಂಧಿಜೀಯವರ ಪ್ರಭಾವಕ್ಕೆ ಒಳಗಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದರು. ದೇಶ ಸೇವೆಯ ಜೊತೆಯಲ್ಲಿ ಸಮಾಜಕ್ಕೆ ಬಹು ಉಪಯುಕ್ತವಾದ ಹಾಗೂ ಮೌಲಿಕವಾದ ಸಾಹಿತ್ಯ ಕೃಷಿ ಮಾಡಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಕಲಬುರಗಿ ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಶಿವಯೋಗಪ್ಪ ಬಿರಾದಾರ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಪತ್ರಿಕಾ ಕಾರ್ಯದರ್ಶಿ ದೇವೇಂದ್ರಪ್ಪ ಗಣಮುಖಿ, ಶಾಲೆಯ ಮುಖ್ಯ ಶಿಕ್ಷಕ ಹವಳಪ್ಪ ಬಿ.ಜಾನೆ, ಶಿಕ್ಷಕರಾದ ಬನಶಂಕರಿ ಎಂ.ಎಸ್., ಸಂತೋಷಕುಮಾರ ಕುಲಕರ್ಣಿ, ಪದ್ಮಾವತಿ, ಮಹಾನಂದ, ಪುಷ್ಪಾವತಿ, ಸಿ.ಎಸ್.ಬಬಣಸೂರ್, ಶೃಂಗಾರಲೀಣಿ, ನುಸ್ರತ್ ಜಹಾನ್, ಸುನೀಲಕುಮಾರ ಬಿ.ಬಿ, ಪೂರ್ಣಿಮಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…