ಕಲಬುರಗಿ,ನ.29; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2023-24ನೇ ಸಾಲಿನ ವಿಶೇಷ ಘಟಕ ಯೋಜನೆ-ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಜಿಲ್ಲಾ ಕಚೇರಿಗಳಲ್ಲಿ ಕ್ಷೇತ್ರ ಪ್ರಚಾರ ಮತ್ತು ಮಾಧ್ಯಮ ಕ್ಷೇತ್ರಗಳಲ್ಲಿನ ಕಾರ್ಯನಿರ್ವಹಣೆ ಕುರಿತು ಒಂದು ವರ್ಷದ ಅವಧಿಯ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಪಂಗಡದ ಓರ್ವ ಅಭ್ಯರ್ಥಿಯನ್ನು ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಅಭ್ಯರ್ಥಿಗೆ ಮಾಹೆಯಾನ 15,000 ರೂ.ಗಳ ಸ್ಟೈಫಂಡ್ ನೀಡಲಾಗುವುದು ಎಂದು ಕಲಬುರಗಿ ಕಚೇರಿಯ ಉಪನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಅವರು ತಿಳಿಸಿದ್ದಾರೆ.
ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ/ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಈಗಾಗಲೇ ವಾರ್ತಾ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಇದೇ ರೀತಿಯ ಅಪ್ರೆಂಟಿಸ್ ತರಬೇತಿ ಪಡೆದವರು ಮತ್ತು ಅಂಕಪಟ್ಟಿ ನಿರೀಕ್ಷಿಸಿ ಅರ್ಜಿ ಸಲ್ಲಿಸುವಂತಿಲ್ಲ. ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದಲ್ಲಿ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದಮ್ಮೆ ಹೂಡಲಾಗುವುದು.
ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಉಪನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಮಿನಿ ವಿಧಾನಸೌಧ ಆವರಣ, ಲೋಕಸಭಾ ಸದಸ್ಯರ ಕಚೇರಿ ಹತ್ತಿರ, ಕಲಬುರಗಿ-585102 ಇವರಿಂದ ಪಡೆದು ಭರ್ತಿ ಮಾಡಿ ಅದರೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಪತ್ರಿಕೋದ್ಯಮ ಪದವಿ/ ಸ್ನಾತಕೋತ್ತರ ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಪ್ರತಿ, ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ಲಗತ್ತಿಸಿ ಇದೇ ಕಚೇರಿಗೆ 2023ರ ಡಿಸೆಂಬರ್ 15ರೊಳಗೆ ಸಲ್ಲಿಸಬೇಕು. ತದನಂತರ ಬರುವ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗೆ ಮೇಲ್ಕಂಡ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…