ಡಾ.ಅಪರ್ಣಾ ಭದ್ರಶೆಟ್ಟಿಗೆ ಉತ್ತಮ ವೈದ್ಯಾಧಿಕಾರಿ ಪ್ರಶಸ್ತಿ ಪ್ರದಾನ

0
129

ಕಲಬುರಗಿ: ಕನ್ನಡ ರಾಜ್ಯೋತ್ಸವ ಹಾಗೂ ವೈದ್ಯರ ದಿನಾಚರಣೆ ಅಂಗವಾಗಿ ಕರ್ನಾಟಕ ಸರಕಾರಿ ವೈದ್ಯಾಧಿಕಾರಿಗಳ ಸಂಘದಿಂದ ವೈದ್ಯಾಧಿಕಾರಿ ಡಾ.ಅಪರ್ಣಾ ಭದ್ರಶೆಟ್ಟಿ ಅವರಿಗೆ ಉತ್ತಮ ವೈದ್ಯಾಧಿಕಾರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಂಗಳವಾರ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಡಾ.ಅಪರ್ಣಾ ಭದ್ರಶೆಟ್ಟಿ ಸೇರಿದಂತೆ ಇತರರಿಗೆ ಉತ್ತಮ ವೈದ್ಯಾಧಿಕಾರಿ ಪ್ರಶಸ್ತಿ ಪ್ರದಾನ ಮಾಡಿದರು.ಡಾ.ಅಪರ್ಣಾ ಅವರು ವೈದ್ಯಕೀಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದು, ಈಗಾಗಲೇ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.ಸರಕಾರ ಇವರ ಸೇವೆಯನ್ನು ಗುರುತಿಸಿ ಗೌರವಿಸಿದೆ.

Contact Your\'s Advertisement; 9902492681

ಮಹಾಮಾರಿ ಕೊರೊನಾದಿಂದ ಬಳಲುತ್ತಿದ್ದ ರೋಗಿಗಳಿಗೆ ಜೀವ ಭಯ ಬಿಟ್ಟು ಉಪಚಾರ ಮಾಡಿ ಸೈ ಎನಿಸಿಕೊಂಡಿದ್ದಾರೆ.ರೋಗಿಗಳ ಪ್ರಶಂಸೆಗೂ ಪಾತ್ರರಾಗಿದ್ದಾರೆ.ಡಾ.ಅಪರ್ಣಾ ಭದ್ರಶೆಟ್ಟಿ ಅವರಿಗೆ ಪ್ರಶಸ್ತಿ ಲಭಿಸಿದಕ್ಕೆ ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಮುಖಂಡರಾದ ವಿನೋದ ಪಾಟೀಲ್, ಶಿವಪುತ್ರಪ್ಪ ಮರಡಿ, ಶಾಮರಾವ್ ಪಾಟೀಲ ಸೇರಿದಂತೆ ಅನೇಕರು ಅಭಿನಂದಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here