ಶಹಾಬಾದ: ಈ ಬಾರಿ ದಾಸ ಶ್ರೇಷ್ಠ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ಸರಳವಾಗಿ ಆಚರಿಸಲಾಗುವುದು ಎಂದು ತಹಸೀಲ್ದಾರ ಗುರುರಾಜ ಸಂಗಾವಿ ಹೇಳಿದರು.
ಅವರು ನಗರದ ತಹಸೀಲ್ದಾರ ಕಚೇರಿಯಲ್ಲಿ ಭಕ್ತ ಕನಕದಾಸರ ಜಯಂತಿ ನಿಮಿತ್ತ ಆಯೋಜಿಸಲಾದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಮಹಾನ್ ವ್ಯಕ್ತಿಗಳ ಜಯಂತಿಯನ್ನು ಕೇವಲ ಆಚರಣೆಗೆ ಸಿಮೀತ ಮಾಡದೇ, ಅವರ ತತ್ವಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ.ಅಲ್ಲದೇ ಆಡಂಬರದ ಜಯಂತಿ ಆಚರಣೆಗೆ ಒತ್ತು ನೀಡದೇ ಅರ್ಥಪೂರ್ಣವಾದ ಆಚರಣೆ ಬದ್ಧತೆ ತೋರಬೇಕಿದೆ.ಇದೇ ನವೆಂಬರ್ 30 ರಂದು ಕನಕದಾಸರ ವೃತ್ತದಿಂದ ತಹಸೀಲ್ದಾರ ಕಚೇರಿಯವರೆಗ ಕುರುಬ ಸಮಾಜದವರು ಬಾಂಧವರು ಮೆರವಣಿಗೆ ನಡೆಸುವರು.ನಂತರ ಕಾರ್ಯಾಲಯದಲ್ಲಿ ಜಯಂತಿ ಆಚರಣೆ ಮಾಡಲಾಗುವುದೆಂದು ತಿಳಿಸಿದರು.
ನಗರಸಭೆಯ ಪೌರಾಯುಕ್ತೆ ಪಂಕಜಾ ರಾವೂರ, ಕರ್ನಾಟಕ ಪ್ರದೇಶ ಕುರುಬ ಸಮಾಜದ ಅಧ್ಯಕ್ಷ ನಿಂಗಣ್ಣ.ಸಿ. ಪೂಜಾರಿ, ಕುರುಬಗೊಂಡ ಸಮಾಜದ ಅಧ್ಯಕ್ಷ ಸಾಯಬಣ್ಣ ಕೊಲ್ಲೂರ್, ಯುವ ಕುರುಬ ಸಂಘದ ಅಧ್ಯಕ್ಷ ಸೂರ್ಯಕಾಂತ ಗಿರಣಿ, ಸಂಗೋಳ್ಳಿ ರಾಯಣ್ಣ ತಾಲೂಕಾಧ್ಯಕ್ಷ ಸುನೀಲ ಪೂಜಾರಿ, ಜಿಲ್ಲಾ ನಿರ್ದೇಶಕ ಅಶೋಕ ದೇವರಮನಿ, ಮುಖಂಡರಾದ ಮರಲಿಂಗ ಕಮರಡಗಿ, ಕಾರ್ಯಾಧ್ಯಕ್ಷ ಸಿದ್ದಲಿಂಗ ಮರತೂರ, ಖಜಾಂಚಿ ಭೀಮರಾಯ ಹಿರೇಪೂಜಾರಿ, ಮಲ್ಕಣ್ಣ ಮುದ್ದ, ವಿಜಯಕುಮಾರ ಕಂಠಿಕರ, ಮಲ್ಲಣ್ಣ ಮುತ್ತಗಿ, ನಿಂಗಣ್ಣ ಹೂಗೊಂಡ, ಕಲ್ಯಾಣಿ ಡಿಶ್, ಈಶ್ವರ ಭೀರನೂರ ಮಹೇಶ ಟಿಕಾಳೆ, ಅಪ್ಪಸಾಬ ಮರತೂರ ಸೇರಿದಂತೆ ಅನೇಕರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…