ಕಲಬುರಗಿ; ಇದೇ ಡಿ. 5 ರಂದು ನಡೆಯಲಿರುವ ತಮ್ಮ 67 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ಕಲಬುರಗಿ ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ ಅಲ್ಲಂಪ್ರಭು ಪಾಟೀಲ್ ನಿರ್ಧರಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು ಮೊದಲೇ ಬರಗಾಲ ಬಿದ್ದಿದೆ, ಜನ- ಜಾನುವಾರು ಸುತ್ತಮುತ್ತ ಸಂಕಷ್ಟದ ಹುತ್ತ ಬೆಳೆದು ನಿಂತಿದೆ. ಬೆಳೆಗಳು ಹಾಳಾಗಿವೆ. ಇಳುವರಿ ಬಾರದಾಗಿದೆ. ಹಸಿಬರಗಾಲದಂದಾಗಿ ಕೃಷಿಕರು ಕಂಗಾಲಾಗಿದ್ದಾರೆ. ಹೊರಗೆ ಕಾಯಿ ಕಂಡರೂ ಒಳಗೆ ಟೊಳ್ಳಾಗಿದೆ. ಹೀಗಾಗಿ ಇಳುವರಿ ಬಿದ್ದು ಹೋಗುವ ಭಯ ಆರಿಸಿದೆ.
ಇಂತಹ ಕಷ್ಟಕಾಲದಲ್ಲಿ ರೈತರು, ಜನರ ಸಂಕಷ್ಟದಲ್ಲಿ ಭಾಗಿಯಾಗಲು, ಅವರ ನೋವು- ಯಾತನೆ ಹಂಚಿಕೊಳ್ಳುವ ಉದ್ದೇಶದಿಂದ ಈ ಬಾರಿಯ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದು ಬೇಡವೆಂಬ ನಿರ್ಧಾರಕ್ಕೆ ತಾಳಿರೋದಾಗಿ ಅಲ್ಲಂಪ್ರಭು ಪಾಟೀಲ್ ಹೇಳಿದ್ದಾರೆ.
ಹುಟ್ಟುಹಬ್ಬದ ದಿನವಾದ ಡಿ. 5 ರಂದು ತಾವು ಕಲಬುರಗಿಯಲ್ಲಿರೋದಿಲ್ಲ. ಕಾರ್ಯಕರ್ತರು, ಅಭಿಮಾನಿಗಳು ಯಾರೂ ಸರಳ, ವಿಜೃಂಭಣೆ ಎಂದು ಯಾವುದೇ ರೀತಿಯಲ್ಲಿಯೂ ಹುಟ್ಟುಹಬ್ಬ ಆಚರಿಸುವುದು ಬೇಡ. ಜನರ ಸಂಕಷ್ಟದಲ್ಲಿ ನಾವು- ನಾವೆಲ್ಲರೂ ಭಾಗಿಯಾಗಿ ಅವರಿಗೆ ನೆರವಿನ ಹಸ್ತ ಚಾಚೋಣ. ಈ ದಿಶೆಯಲ್ಲಿ ಸದನದ ಒಳಗೂ- ಹೊರಗೂ ತಾವು ನಿರಂತರ ಹೋರಾಟ ನಡೆಸೋದಾಗಿಯೂ ಶಾಸಕ ಅಲ್ಲಂಪ್ರಭು ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…