ಭಾರತದಲ್ಲಿ ಯುವತಿಯರ ಸ್ವಾತಂತ್ರ್ಯಕ್ಕೆ ಧಕ್ಕೆ; ಕಲಬುರಗಿಯಲ್ಲಿ SFI ವಿದ್ಯಾರ್ಥಿನಿಯರ 2 ದಿನದ ರಾಜ್ಯಮಟ್ಟದ ಸಮಾವೇಶ

ಕಲಬುರಗಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಯರ ಮೇಲೆ ಅಮಾನವೀಯ ಕೃತ್ಯ ನಡೆಸಲಾಗುತ್ತಿದೆ. ಯುವತಿಯರ ಶಿಕ್ಷಣದ ಹಕ್ಕುಗಳನ್ನು ಧಮನ ಮಾಡಲಾಗುತ್ತಿದೆ. ಬಲವಂತದ ಧರ್ಮ ಆಚರಣೆಗೆ ಪುಷ್ಟಿ ನೀಡಲಾಗುತ್ತಿದೆ. ಸ್ವಾತಂತ್ರ್ಯ ಭಾರತದಲ್ಲಿ ದಿನನಿತ್ಯ ಯುವತಿಯರ ಸ್ವಾತಂತ್ರ್ಯ ಹರಣ ನಡೆಯುತ್ತಿರುವುದು ದುರಂತವಾಗಿದೆ ಎಂದು ಎಸ್.ಎಫ್.ಐ ದೆಹಲಿ ಕೇಂದ್ರ ಸಮಿತಿ ಸಹಕಾರ್ಯದರ್ಶಿ ದಿಫ್ಸೀತಾ ಧರ್ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ಪಂಡಿತ್ ರಂಗಮಂದಿರದಲ್ಲಿ ಆಯೋಜಿಸಿದ ಶಿಕ್ಷಣದ ಹಕ್ಕಿಗಾಗಿ ಮತ್ತು ಘನತೆಯ ಭವಿಷ್ಯಕ್ಕಾಗಿ ಎಸ್‌ಎಫ್‌ಐನಿಂದ ವಿದ್ಯಾರ್ಥಿನಿಯರ 2 ದಿನದ ರಾಜ್ಯಮಟ್ಟದ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ ಅವರು ಮಾತನಾಡಿದರು. ಕಳೆದ ವರ್ಷ ರಾಜ್ಯದಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಸಿ ಶಾಲೆಗೆ ಹೋಗುವಂತಿಲ್ಲ ಎಂದು ನಿರ್ಭಂದಿಸಲಾಗಿತ್ತು. ಸಂವಿಧಾನದ ಆಶಯವನ್ನೇ ದಿಕ್ಕರಿಸಿದ ಸರಕಾರದ ನಡೆ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತೆ ಮಾಡಿತ್ತು. ಎಂದು ಅಂದಿನ ಸರಕಾರದ ವಿರುದ್ಧ ದಿಫ್ಸೀತಾ ಗುಡುಗಿದರು.
ಬೇಟಿ ಪಢಾವು, ಬೇಟಿ ಬಚಾವ್ ದೇಶದಲ್ಲಿ ದಿನನಿತ್ಯ ಯುವತಿಯರ ಮೇಲೆ ದೌರ್ಜನ್ಯ, ಅತ್ಯಾಚಾರ ಎಸಗಿ ಹಾಡುಹಗಲೇ ಮಹಿಳೆಯರನ್ನು ಬರ್ಬರವಾಗಿ ಹತ್ಯೆ ಮಾಡಲಾಗುತ್ತಿದೆ. ಆದರೂ ಕೇಂದ್ರ ಸರಕಾರ ಅತ್ಯಾಚಾರಿಗಳ ವಿರುದ್ಧ ಯಾವುದೇ ಕಠಿಣವಾದ ಕಾನೂನು ಕ್ರಮಕೈಗೊಳ್ಳದಿರುವುದು ಮಹಿಳೆಯರಿಗೆ ಮಾಡಿದ ದೊಡ್ಡ ಮೋಸ, ವಂಚನೆಯಾಗಿದೆ. ಇಂತಹ ಸರಕಾರವನ್ನು ಅಧಿಕಾರದಿಂದ ತೆಗೆಯಬೇಕು ಎಂದು ಯುವತಿಯರಿಗೆ ಕರೆ ನೀಡಿದರು.

ಎಸ್.ಎಫ್.ಐ ಕೇಂದ್ರ ಸಮಿತಿ ಉಪಾಧ್ಯಕ್ಷ ನಿತೀಶ ನಾರಾಯಣ ಮಾತನಾಡಿ, ಆಯೋಗದ ವರದಿ ಪ್ರಕಾರ ಭಾರತದಲ್ಲಿ ಪ್ರತಿ ಸೆಕೆಂಡಿಗೆ ಮಹಿಳೆಯರ ಮೇಲೆ ಅತ್ಯಾಚಾರ, ಕೊಲೆ ನಡೆಯುತ್ತಿದೆ. ಆದರೂ ಸರಕಾರ ಮೌನವಹಿಸಿದೆ. ಮಹಿಳೆಯರ ಶಿಕ್ಷಣಕ್ಕೆ ಆಧ್ಯತೆ ನೀಡುತ್ತೇವೆ ಎಂದು ಹೇಳುವ ಸರಕಾರದಿಂದಲೇ ಮಹಿಳೆಯರಿಗೆ ಶಿಕ್ಷಣದಿಂದ ವಂಚಿಸಲಾಗುತ್ತಿದೆ. ಎಂದು ಕಳವಳ ವ್ಯಕ್ತಪಡಿಸಿದರು.

ಪದವಿ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕರಾದ ಶಿವಶರಣಪ್ಪ ಮುಳೆಗಾಂವ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ಎಸ್.ಎಫ್.ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ ಮಾತನಾಡಿದರು. ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ಡಾ.ಮೀನಾಕ್ಷಿ ಬಾಳಿ ಮಾತನಾಡಿದರು.

ಡಾ.ಶರಣಪ್ಪ ಸೈದಾಪೂರ, ದಾ.ಜೇಬಾ ಪರವೀನ, ಡಾ.ಸಂತೋಷ ಹುಂಫ್ಳಿ, ಮಾಲಾಶ್ರೀ ಮತ್ತಿಮೂಡ, ಬೃಂದಾ ಧನ್ನಿ,ಶೈಲಶ್ರೀ ಬಗಲಿ, ಲವಿತ್ರ ಇದ್ದರು. ಎಸ್.ಎಫ್.ಐ ರಾಜ್ಯ ಕಾರ್ಯದರ್ಶಿ ಭೀಮನಗೌಡ ಸುಂಕೇಶ್ವರಹಾಳ ಪ್ರಾಸ್ತಾವಿಕವಾಗಿ ಮಾತನಾಡಿದರು ಮೇಘಾ ಚಿಚಕೋಟ ಸ್ವಾಗತಿಸಿದರು. ಎಸ್.ಎಫ್.ಐ ಜಿಲ್ಲಾ ಸಂಚಾಲಕಿ ಸುಜಾತಾ ನಿರೂಪಿಸಿದರು. ಸುಕನ್ಯಾ ವಂದಿಸಿದರು.

ಲಂಬಾಣಿ ಯುವತಿಯರ ಲಂಬಾಣಿ ನೃತ್ಯ ನೋಡುಗರ ಗಮನ ಸೆಳೆಯಿತು. ನಗರದ ಐಟಿಐ ಕಾಲೇಜು ವಿದ್ಯಾರ್ಥಿನಿಯರ ಸಾಮಾಜಿಕ ನಾಟಕ ಪ್ರದರ್ಶನ ಮಾಡಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420