ಯುವಶಕ್ತಿಯೇ ರಾಷ್ಟ್ರದ ಶಕ್ತಿ; ಕೇಂದ್ರ ಸಚಿವ ಭಗವಂತ ಖೂಬ

ಬೆಂಗಳೂರು; ಯುವಕರಿಗೆ ದೇಶದ ಸಂಸ್ಕøತಿ, ಪರಂಪರೆ, ಒಳ್ಳೆಯ ವಿಚಾರಗಳು ಕುರಿತ ಅರಿವನ್ನು ನೀಡಿದಾಗ ಅವರು ಸಮಾಜಕ್ಕೆ ಶಕ್ತಿಯಾಗುತ್ತಾರೆ. ಆ ಶಕ್ತಿಯೆ ರಾಷ್ಟ್ರದ ಶಕ್ತಿಯಾಗುತ್ತದೆ. ಆಗ ನಮ್ಮ ರಾಷ್ಟ್ರವು ವಿಶ್ವಮಟ್ಟದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವ ಭಗವಂತ ಖೂಬ ಅವರು ತಿಳಿಸಿದರು ಎಂದರು.

ಇಂದು ಬೆಂಗಳೂರು ನಗರ ವಿಶ್ವವಿದ್ಯಲಯದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಸಂಘಟನೆ, ಕರ್ನಾಟಕ ರಾಜ್ಯ ಎನ್. ಎಸ್. ಎಸ್. ಕೋಶ, ಬೆಂಗಳೂರು ಸಿಟಿ ಯೂನಿವರ್ಸಿಟಿ ಇವರ ಸಹಯೋಗದಲ್ಲಿ ರಾಜ್ಯ ಯುವ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು ಯುವಕರಯನ್ನು ಸರಿಯಾದ ದಾರಿಯಲ್ಲಿ ಕರೆದುಕೊಂಡುಹೋಗುವುದು ರಾಷ್ಟ್ರದ ಕರ್ತವ್ಯವಾಗಿದ್ದು, ಒಳ್ಳೆಯ ಅವಕಾಶವನ್ನು ಕಲ್ಪಿಸಿಕೊಡುವುದು ಸರ್ಕಾರದ ಜವಾಬ್ದಾರಿ. ಸಮಾಜ ಸೇವಕರು ಮತ್ತು ಸಮಾಜದ ಆದರ್ಶ ವ್ಯಕ್ತಿಗಳು ಯುವಕರಿಗೆ ಮಾರ್ಗದರ್ಶನ ನೀಡಬೇಕು.

ಪಠ್ಯಪುಸ್ತಕಗಳ ಮೂಲಕ ದೇಶದ ಶೌರ್ಯ, ಇತಿಹಾಸ, ದೇಶಕ್ಕಾಗಿ ಮುಡುಪಾಗಿಟ್ಟ ಮಹಾತ್ಮರ ಬಗ್ಗೆ ಅರಿವನ್ನು ಯುವಕರಿಗೆ ಮೂಡಿಸಿದಾಗ ನಮ್ಮ ದೇಶವು ಒಳ್ಳೆಯ ದಾರಿಯಲ್ಲಿ ಸಾಗಲು ಸಾಧ್ಯವಾಗುತ್ತದೆ. ದೇಶದ ಹಿತಕ್ಕಾಗಿ ಇರುವ ಇತಿಹಾಸವನ್ನು ತಿಳಿಸಿಕೊಡಬೇಕು. ಇತಿಹಾಸದಲ್ಲಿ ಮಹಾಪುರುಷರು ನೀಡಿರುವ ಕೊಡುಗೆಯಿಂದ ಯುವಕರ ಮನಸಿನಲ್ಲಿ ದೇಶದ ಬಗ್ಗೆ ಸಮರ್ಪಣಾ ಭಾವ, ದೇಶ ಪ್ರೇಮವು ಹೊರಹೊಮ್ಮುತ್ತದೆ.

ದೇಶವು ಅಮೃತ ಕಾಲದಲ್ಲಿ ಮುನ್ನಡಿಯುತ್ತಿದ್ದು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷವಾಯಿತು. ದೇಶದಲ್ಲಿ 140 ಕೋಟಿ ಜನರಲ್ಲಿ 96 ಕೋಟಿ ಜನ ಯುವಕರಿದ್ದಾರೆ. ನರೇಂದ್ರ ಮೋದಿಯವರ ಆಶಯದಂತೆ ಯುವ ಸಮೂಹವು ತಾವು ಆಯ್ಕೆ ಮಾಡಿದ ಕ್ಷೇತ್ರದಲ್ಲಿ ಪರಿಶ್ರಮದಿಂದ ಪ್ರಗತಿಯನ್ನು ಸಾಧಿಸಿದಾಗ ಮುಂಬರುವ 2047 ರೊಳಗೆ ಭಾರತ ವಿಶ್ವದಲ್ಲಿ ಅಭಿವೃದ್ದಿ ಹೊಂದಿದ ದೇಶದಲ್ಲಿ ಅಗ್ರ ಪಂಕ್ತಿಯಲ್ಲಿರುತ್ತದೆ. ಹತ್ತು ವರ್ಷದಿಂದ ಆರ್ಥಿಕ ವ್ಯವಸ್ಥೆ 3.2 ಟ್ರಿಲಿಯನ್‍ನಿಂದ 4 ಟ್ರಲಿಯನ್ ಆಗಿದೆ. ಜಿಡಿಪಿ ಅಭಿವೃದ್ಧಿಯಾಗಿದೆ. 10 ನೇ ಸ್ಥಾನದಲ್ಲಿದ್ದ ಆರ್ಥಿಕ ವ್ಯವಸ್ಥೆಯು 5 ವರ್ಷದಲ್ಲಿ 5ನೇ ಸ್ಥಾನಕ್ಕೆ ಏರಿದೆ. ಮುಂಬರುವ ಎರಡು ವರ್ಷದಲ್ಲಿ ಭಾರತದ ಅರ್ಥ ವ್ಯವಸ್ಥೆಯು ಜರ್ಮನಿ, ಜಪಾನ್‍ಅನ್ನು ಹಿಮ್ಮಟ್ಟಲಿದೆ ಎಂದರು.

ರಾಜ್ಯ ಯುವ ಉತ್ಸವವು ಸ್ಫರ್ಧೆಯಲ್ಲಿ ಗೆಲ್ಲಲು ಮಾತ್ರ ಸೀಮಿತವಾಗಬಾರದು. ಗೆದ್ದವರು ಯುವಕರಿಗೆ ಪ್ರೇರಣೆ ನೀಡುವಂತಿರಬೇಕು. ನಾಗರೀಕರು ಸ್ವಾವಲಂಬನೆ, ಸ್ವಾಭಿಮಾನದಿಂದ ಜೀವನ ನಡೆಸಬೇಕು. ಸಮಾಜಕ್ಕೆ ಹಾಗೂ ಸರ್ಕಾರಕ್ಕೆ ಕೊಡುಗೆ ನೀಡುವಂತವರಾಗಬೇಕು. ಯುವಕರ ಉತ್ತಮ ಭವಿಷ್ಯ ನಿರ್ಮಾಣದ ಜೊತೆಗೆ ಸಮಾಜ ಹಾಗೂ ರಾಷ್ಟ್ರದ ಭವಿಷ್ಯವು ಅಡಗಿದೆ. 2047ರ ಸ್ವಾತಂತ್ರ್ಯದ ಶತ ವರ್ಷ ತುಂಬುವ ವೇಳೆಗೆ, ವೈಭವ ಭಾರತ ನೋಡಲು ಯುವಕರಾದ ನೀವು ಇರುತ್ತೀರಿ. ಅಭಿವೃದ್ಧಿಶೀಲ ಹೊಂದಿದ ವೈಭವ ಭಾರತ ಕಲ್ಪನೆಯ ಕನಸನ್ನು ನೀವು ಕಾಣಬೇಕು. ಕನಸಿನ ಜೊತೆಗೆ ಕನಸನ್ನು ನನಸು ಮಾಡಲು ಯುವಕರಾದ ನೀವು ಪ್ರಯತ್ನ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಶಿವಾಜಿನಗರದ ಶಾಸಕ ರಿಜ್ವಾದ್ ಅರ್ಷದ್ ಅವರು ಮಾತನಾಡಿ ಭಾರತವು ನೂರಾರು ಭಾಷೆ, ಸಂಸ್ಕøತಿಯನ್ನು ಹೊಂದಿದ್ದು, ಸಾವಿರಾರು ವರ್ಷದ ಇತಿಹಾಸವಿದೆ. ಭಾಷೆ, ಸಂಸ್ಕøತಿಯನ್ನು ನಾವು ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗೆ ಅರಿವು ಮೂಡಿಸಬೇಕು ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಎನ್. ಶಶಿಕುಮಾರ್ ಐ.ಪಿ.ಎಸ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ನಂತರ ಮಾತನಾಡಿದ ಅವರು ರಾಜ್ಯ ಯುವ ಉತ್ಸವ ಕಾರ್ಯಕ್ರಮಕ್ಕೆ ಯುವಕ, ಯುವತಿಯರು ಬಂದಿದ್ದು ರಾಜ್ಯದ ವಿವಿಧ ಆಚಾರ, ವಿಚಾರ, ಭಾಷೆ, ನಡೆನುಡಿಗಳ ಅಂಶವನ್ನು ಗ್ರಹಿಸಿ ವ್ಯಕ್ತಿತ್ವ ವಿಕಸವಾಗಲು ಮುಖ್ಯ ಪಾತ್ರ ವಹಿಸುತ್ತದೆ. ಸಾಂಸ್ಕøತಿಕ ಕಾರ್ಯಕ್ರಮ ಹಾಗೂ ವಿವಿಧ ಸ್ಫರ್ಧೆಯಲ್ಲಿ ಯುವಕರು ಪಾಲ್ಗೊಳ್ಳುವುದರಿಂದ, ಸಂವಹನ ಕೌಶಲ್ಯ ಹೆಚ್ಚಾಗುತ್ತದೆ. ಜೀವನದಲ್ಲಿ ಕಷ್ಟದ ಸಮಯ ಬಂದಾಗ ಎದುರಿಸುವ ಶಕ್ತಿ ಅವರಲ್ಲಿ ಮೂಡುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಬೆಂಗಳೂರು ನಗರ ವಿಶ್ವವಿದ್ಯಾಲಯದ ಉಪಕುಲಪತಿ ಲಿಂಗರಾಜ್ ಗಾಂಧಿ ಅವರು ಮಾತನಾಡಿ ವೈವಿಧ್ಯತೆಯನ್ನು ಕಾಪಾಡಿಕೊಂಡು ಏಕತೆಯನ್ನು ಸಾಧಿಸಬೇಕಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರ ಸಂಘನೆ, ದಕ್ಷಿಣ ರಾಜ್ಯಗಳು ಪ್ರಾದೇಶಿಕ ನಿರ್ದೇಶಕರಾದ ಎಂ.ಎನ್. ನಟರಾಜ್ ಅವರು ಸೇರಿದಂತೆ ಹಿರಿಯ ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420