ಬಿಸಿ ಬಿಸಿ ಸುದ್ದಿ

ಶೂದ್ರ ವರ್ಗದಿಂದ ಭಾರತ ನಿರ್ಮಾಣ: ಮಾಜಿ ಸಿಎಂ. ಎಂ. ವೀರಪ್ಪ ಮೊಯಿಲಿ

ಕಲಬುರಗಿ: ಶೂದ್ರ ವರ್ಗದ ಮಹಾನಂದ, ಚಂದ್ರಗುಪ್ತ ಮೌರ್ಯ ಮುಂತಾದವರು ಈ ದೇಶಕ್ಕೆ ದಿಕ್ಕು, ದೆಸೆ ಹಾಗೂ ನಕಾಶೆ ಒದಗಿಸಿದ್ದಲ್ಲದೆ ಇಂಡಿಯಾ ಇಲ್ಲವೇ ಭಾರತ ಎಂಬ ಕಲ್ಪನೆಯನ್ನು ಕಟ್ಟಿಕೊಟ್ಟವರು ಎಂದು ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕøತ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಕನ್ನಡ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕನ್ನಡ ಜಾಗೃತಿ ಸಮಾವೇಶ ಹಾಗೂ ಪತ್ರಕರ್ತ ಡಾ. ಶಿವರಂಜನ ಸತ್ಯಂಪೇಟೆ ಸಂಪಾದಿಸಿದ ವಿಜಯ ವಿಶೇಷ (ವರ್ಷ ಎರಡು ಹರ್ಷ ನೂರು) ಕೃತಿ ಜನಾರ್ಪಣೆ ಮಾಡಿ ಮಾತನಾಡಿದ ಅವರು, ಕನ್ನಡಿಗರು ಸರ್ವೋದಯ, ಸಮನ್ವಯತೆ ಹಾಗೂ ವಿಶಾಲ ದೃಷ್ಟಿ ಬೆಳೆಸಿಕೊಳ್ಳಬೇಕು. ವೈಚಾರಿಕ, ವಿಶ್ವ ಪ್ರಜ್ಞೆ ಕನ್ನಡಿಗರದ್ದಾಗಬೇಕು ಎಂದು ಕರೆ ನೀಡಿದರು.

ಸಾಹಿತ್ಯದಿಂದ ಮನಸ್ಸು ಪರಿವರ್ತನೆಯಾಗಬೇಕು. ಜಾಗತಿಕ ಭಾಷೆಯ ಸಾಹಿತ್ಯ ಕನ್ನಡದಲ್ಲಿ ಸಂಗ್ರಹವಾಗಬೇಕು. ಕನ್ನಡಿಗರು ಹೊಸ ಅನ್ವೇಷಣೆಯಲ್ಲಿ ತೊಡಗುವ ಮೂಲಕ ಕನ್ನಡ ಭಾಷೆಗೆ ಭದ್ರ ಬುನಾದಿ ಒದಗಿಸಬೇಕು. -ಎಂ.ವೀರಪ್ಪ ಮೊಯಿಲಿ, ಮಾಜಿ ಸಿಎಂ

ದೇಶವನ್ನು ಕಾಡುತ್ತಿರುವ ಜಾತಿ, ಮತದ ಭಿನ್ನಾಭಿಪ್ರಾಯ ಸೇರಿದಂರೆ ಅನೇಕ ಕ್ಲೇಶಗಳನ್ನು ತೊಡೆದು ಹಾಕಿ, ವಿಶ್ವಮಾನವರಾಗಬೇಕು. ಕನ್ನಡಿಗರು ದ್ವೀಪವಾಗದೆ ಸಾಗರ ಆಗಬೇಕು. ಕನ್ನಡಿಗರು ವಿಶ್ವಭಾಷಾ ಪ್ರಜ್ಞೆ ಬೆಳೆಸಿಕೊಳ್ಳುವ ಮೂಲಕ ಕನ್ನಡ ಕಟ್ಟುವ ಕೆಲಸದಲ್ಲಿ ನಿರತರಾಗಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಉಪ ಕಾರ್ಯದರ್ಶಿ ಪ್ರಮೀಳಾ ಎಂ.ಕೆ. ಮಾತನಾಡಿ, ಕನ್ನಡ ಭಾಷೆಯ ಅಭಿಮಾನ ಕೇವಲ ವೇದಿಕೆಗೆ ಸೀಮಿತವಾಗದೆ ನಿರಂತರವಾಗಿ ಜನಮಾನಸದಲ್ಲಿ ಉಳಿಯುವಂತಾಗಬೇಕು. ಕನ್ನಡ ಕಟ್ಟುವ ಅವಕಾಶವನ್ನು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅವರು ಬಹಳ ಉತ್ಸುಕತೆಯಿಂದ ಬಳಸಿಕೊಳ್ಳುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೃತಿ ಸಂಪಾದಕ ಡಾ. ಶಿವರಂಜನ ಸತ್ಯಂಪೇಟೆ ಮಾತನಾಡಿ, ಈ ಕಿರು ಹೊತ್ತಿಗೆಯಲ್ಲಿ ಕನ್ನಡ ಭಾಷೆ, ಗಡಿ, ಮಹಿಳೆ, ಮಕ್ಕಳು, ಪ್ರಜೆಗಳ ಹಕ್ಕು ಹಾಗೂ ಕರ್ತವ್ಯ, ಕೃಷಿ, ಮಾಧ್ಯಮ, ಕಲೆ, ಸಾಹಿತ್ಯ ಸಂಗೀತ ಹೀಗೆ ಬದುಕಿನ ಎಲ್ಲ ಕ್ಷೇತ್ರಗಳ ಬಗ್ಗೆ ಸ್ವಾಮೀಜಿಗಳು, ರಾಜಕಾರಣಿಗಳು, ಸಾಹಿತಿಗಳು ಹಾಗೂ ಜನಸಮಾನ್ಯರ ಅಭಿಮತವನ್ನು ಇಲ್ಲಿ ಸಂಗ್ರಹಿಸಿಕೊಡಲಾಗಿದೆ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಿದ್ದರು. ರವೀಂದ್ರಕುಮಾರ ಭಂಟನಳ್ಳಿ ನಿರೂಪಿಸಿದರು. ಯಶವಂತರಾಯ ಅಷ್ಟಗಿ ಸ್ವಾಗತಿಸಿದರು. ಮುಡಬಿ ಗುಂಡೇರಾವ ಪ್ರಾಸ್ತಾವಿಕ ಮಾತನಾಡಿದರು. ಕಲ್ಯಾಣಕುಮಾರ ಶೀಲವಂತ ವಂದಿಸಿದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago