ಬಿಸಿ ಬಿಸಿ ಸುದ್ದಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು; ಶಾಸಕ ಅಲ್ಲಂಪ್ರಭು ಪಾಟೀಲ್‌ ಹರ್ಷ

ಕಲಬುರಗಿ; ತೆಲಂಗಾಣಾ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಭರ್ಜರಿ ಗೆಲುವು ಸಾಧಿಸಿರುವುದಕ್ಕೆ ಕಲಬುರಗಿ ದಕ್ಷಿಣ ಕಾಂಗ್ರೆಸ್‌ ಶಾಸಕರಾದ ಅಲ್ಲಂಪ್ರಭು ಪಾಟೀಲ್‌ ಹರುಷ ವ್ಯಕ್ತಪಡಿಸಿದ್ದಾರೆ.

ತೆಲಂಗಾಣದ ಬಿಎಸ್ ಆರ್ ಸರ್ಕಾರ ನಡೆಸಿರುವ ಭ್ರಷ್ಟಾಚಾರದ ವಿರುದ್ದ ಅಲ್ಲಿನ ಜನರ ಆಕ್ರೋಶ ಈ ಫಲಿತಾಂಶದಲ್ಲಿ ವ್ಯಕ್ತವಾಗಿದೆ. ಅಲ್ಲಿ ಬಿಎಸ್‌ಆರ್‌ ಪಕ್ಷದ ವಿರೋಧದಲ್ಲಿ ಭಾರಿ ಅಲೆ ಇತ್ತು ಎಂಬುದು ಅಲ್ಲಿನ ಚುನಾವಣಾ ಪ್ರಚಾರದಲ್ಲಿ ತಾವು ಹೋದಾಗೆಲ್ಲಾ ಅನುಭ‍ಕ್ಕೆ ಬಂದಿತ್ತು. ಅದೀಗ ವಿಜಯಲಕ್ಷ್ಮೀಯಾಗಿ ಕಾಂಗ್ರೆಸ್‌ಗೆ ಒಲಿದಿದೆ ಎಂದು ಅಲ್ಲಂಪ್ರಭು ಪಾಟೀಲ್‌ ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ ಖರ್ಗೆ, ರಾಜ್ಯದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ಸಚಿವರೊಂದಿಗೆ ತೆಲಂಗಾಣದಲ್ಲಿ ಅಲ್ಲಂಪ್ರಭು ಪಾಚೀಲರು ಎಐಸಿಸಿ ಆದೇಶದಂತೆ ಪಕ್ಷದ ಸಭೆ- ಸಮಾರಂಭಗಳಲ್ಲಿ ನಿರಂತರವಾಗಿ ಪಲ್ಗೊಂಡಿದ್ದಲ್ಲದೆ ಅಲ್ಲಿನ ಅನೇಕ ಅಸಂಬ್ಲಿ ಕ್ಷೇತ್ರಗಳಲ್ಲಿ ಸುತ್ತಾಡಿ ಅಭ್ಯರ್ಥಿಗಳ ಪರವಾಗಿ ಬಿರುಸಿನ ಪ್ರಚಾರದಲ್ಲಿಯೂ ತೊಡಗಿಸಿಕೊಂಡಿದ್ದರು.

ಬಿಎಸ್‌ಆರ್‌ ಪಕ್ಷ ತನ್ನ ಅಧಿಕಾರ ಅವಧಿಯಲ್ಲಿ ಅನೇಕ ಹಗರಣಗಳನ್ನು ಮಾಡಿ ಜನರ ಕೆಂಗಣ್ಣಿಗೆ ಗುರಿಯಾಗಿತ್ತು. ಅಲ್ಲಿನ ಜನ ತೆಲಂಗಾಣ ಸುರಕ್ಷಿತವಾಗಿರಬೇಕಾದರೆ ಕಾಂಗ್ರೆಸ್‌ ಗೆಲ್ಲಿಸಬೇಕು ಎಂದು ಸಂಕಲ್ಪಿಸಿದ್ದರು, ಅದರ ಫಳವಾಗಿಯೇ ಇಂದು ತೆಲಂಗಾಣದಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದೆ. ಮಂದಿನ ದಿನಗಳಲ್ಲಿ ತೆಲಂಗಾಣದಲ್ಲಿ ಪಕ್ಷದ ಆಡಳಿತ ಎಲ್ಲಾ ರಂಗದಲ್ಲಿಯೂ ಸುಭಿಕ್ಷೆ ತರಲಿದೆ ಎಂದು ಅಲ್ಲಂಪ್ರಭು ಪಾಟೀಲ್‌ ಹೇಳಿದ್ದಾರೆ.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

3 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

4 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

4 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

4 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

5 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

6 hours ago