ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲವು: ಪಟಾಕಿ ಸಿಡಿಸಿ ಕಾರ್ಯಕರ್ತರಿಂದ ಸಂಭ್ರಮ

0
18

ಕಲಬುರಗಿ: ಮಧ್ಯ ಪ್ರದೇಶ, ರಾಜಸ್ಥಾನ, ಛತ್ತಿಸಗಡ ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲೆಯ ಬಿಜೆಪಿ ಮುಖಂಡರು ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಲ್ಲಿ ಪರಸ್ಪರ ತಿನ್ನಿಸಿ, ಪಟಾಕಿ ಸಿಡಿಸಿ ಪಕ್ಷದ ಗೆಲುವನ್ನು ಸಂಭ್ರಮಿಸಿದರು.

ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದಾ ಅವರ ನಾಯಕತ್ವದಲ್ಲಿ ಪಕ್ಷ ರಾಷ್ಟ್ರದಲ್ಲೆಡೆ ಜನಮನ್ನಣೆ ಗಳಿಸುತ್ತಿದ್ದು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೇವಾಡಗಿ, ನಗರ ಜಿಲ್ಲಾ ಅಧ್ಯಕ್ಷ ಸಿದ್ದಾಜಿ ಪಾಟೀಲ್, ಪ್ರಮುಖರಾದ ಹರ್ಷಾನಂದ ಗುತ್ತೇದಾರ್, ಅರುಣ್ ಬಿನ್ನಡಿ, ರಾಘವೇಂದ್ರ ಕೊಗನೂರ್, ಶಿವ ಅಷ್ಠಗಿ, ಪ್ರವೀಣ್ ತೆಗನೂರ್, ಲಿಂಗರಾಜ್ ಬಿರಾದಾರ, ಭಾಗೀರಥಿ ಗುನ್ನಾಪುರ್, ಶಿವಯೋಗಿ ನಾಗನಹಳ್ಳಿ, ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here