ಬಿಸಿ ಬಿಸಿ ಸುದ್ದಿ

ಜನವರಿ 23 ರಂದು ಪಿ.ಎಸ್.ಐ ನೇಮಕಾತಿಗೆ ಮರುಪರೀಕ್ಷೆ; ಗೃಹ ಸಚಿವ ಡಾ.ಜಿ.ಪರಮೇಶ್ವರ

ಸುವರ್ಣಸೌಧ ಬೆಳಗಾವಿ. ಡಿ.4: ಡಿ.23 ರಂದು ನಡೆಯಬೇಕಿದ್ದ 545 ಪಿ.ಎಸ್.ಐ ನೇಮಕಾತಿಯ ಮರು ಪರೀಕ್ಷೆಯನ್ನು ಜ.23 ರಂದು ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಸೋಮವಾರ ಬೆಳಗಾವಿ ಅಧಿವೇಶನದ ಶೂನ್ಯ ವೇಳೆಯಲ್ಲಿ ಶಾಸಕ ಬಸವನಗೌಡ ಯತ್ನಾಳ 545 ಪಿ.ಎಸ್.ಐ ನೇಮಕಾತಿ ಮರುಪರೀಕ್ಷೆ ಕುರಿತು ಪ್ರಸ್ತಾಪಿಸಿದ ವಿಷಯದ ಮೇಲೆ ಉತ್ತರಿಸಿ ಅವರು ಮಾತನಾಡಿದರು.

ದಿನಾಂಕ 3.10.2021 ರಂದು 545 ಪಿ.ಎಸ್.ಐ ನೇಮಕಾತಿಗೆ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿತ್ತು. ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ ಹಾಗೂ ಓ.ಎಂ.ಆರ್ ತಿದ್ದುಪಡಿಯಂತಹ ಅಕ್ರಮ ಬೆಳಕಿಗೆ ಬಂದಿದ್ದರಿಂದ, ಹಿಂದಿನ ಸರ್ಕಾರ ಮರುಪರೀಕ್ಷೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಕೆಲ ಅಭ್ಯರ್ಥಿಗಳು ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದರು. ಸಂಪೂರ್ಣ ವಿಚಾರಣೆ ಬಳಿಕ ಉಚ್ಛ ನ್ಯಾಯಾಲಯವು ದಿನಾಂಕ 10.11.2023 ರಂದು ಮರುಪರೀಕ್ಷೆ ಸಮ್ಮತಿಸಿ ನೀಡಿ ಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ ಪೊಲೀಸ್ ಇಲಾಖೆ ಬದಲಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಲಿಖಿತ ಪರೀಕ್ಷೆಯನ್ನು ನಡೆಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.

ಈ ಬೆಳವಣಿಗೆಗಳ ನಡುವೆ ಸರ್ಕಾರ 403 ಪಿ.ಎಸ್.ಐ ನೇಮಕಾತಿ ಹೊಸ ಅಧಿಸೂಚನೆ ಹೊರಡಿಸಿದೆ. 600 ಪಿ.ಎಸ್.ಐ ಗಳ ನೇಮಕಾತಿಗೆ ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಈ ಎಲ್ಲಾ ಪಿ.ಎಸ್.ಐ ನೇಮಕಾತಿಗಳ ನಡುವೆ ಜೇಷ್ಠತೆ ಗೊಂದಲ ಉಂಟಾಗಬಾರದು ಎನ್ನುವ ಕಾರಣಕ್ಕೆ 545 ಪಿ.ಎಸ್.ಐ ಗಳ ನೇಮಕಾತಿಯನ್ನು ಡಿ.23 ಕ್ಕೆ ನಡೆಸಲು ಸಿದ್ಧತೆ ಮಾಡಲಾಗಿತ್ತು. ಒಟ್ಟು 54301 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಅಕ್ರಮ ತಡೆಗಟ್ಟುವ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.

ಈ ಉತ್ತರಕ್ಕೆ ಸದನದ ಎಲ್ಲಾ ಸದಸ್ಯರು ಒಕ್ಕೊರಲಿನಿಂದ ಆಕ್ಷೇಪಿಸಿ, ಲಿಖಿತ ಪರೀಕ್ಷೆಗೆ ಒಂದು ತಿಂಗಳ ಅವಕಾಶ ನೀಡಿರುವುದು ಪ್ರತಿಭಾಂತ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಲಿಖಿತ ಪರೀಕ್ಷೆ ಮುಂದೂಡಬೇಕು ಎಂದು ಗೃಹ ಸಚಿವರಲ್ಲಿ ಕೋರಿದರು.
ಇದಕ್ಕೆ ಸ್ಪಂದಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಡಿ.23 ರ ಬದಲಿಗೆ ಮುಂದಿನ ತಿಂಗಳು ಜ. 23 ನೇಮಕಾತಿ ಮರು ಪರೀಕ್ಷೆಯನ್ನು ನಡೆಸಲು ಒಪ್ಪಿದರು. ರಾಜ್ಯದಲ್ಲಿ ಸುಮಾರು 1500 ಹೆಚ್ಚು ಪಿ.ಎಸ್.ಐ ಹುದ್ದೆಗಳು ಖಾಲಿಯಿವೆ. ಇದರಿಂದ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ತೊಂದರೆ ಉಂಟಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅನುಮತಿ ಪಡೆದು 450 ಎ.ಎಸ್.ಐ ಗಳಿಗೆ ನಿಯಮ 32ರ ಅಡಿ ಪಿ.ಎಸ್.ಐ ಪ್ರಭಾರೆಯನ್ನು ನೀಡಲಾಗಿದೆ ಎಂದರು.

ಪರೀಕ್ಷಾ ಅಕ್ರಮವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನೇಮಕಾತಿ ಹಗರಣದಲ್ಲಿ ಯಾರೇ ಭಾಗಿಯಾಗಿದ್ದರು ರಕ್ಷಿಸುವ ಪ್ರಮೇಯವಿಲ್ಲ. ವಿರೋಧ ಪಕ್ಷದ ಸದಸ್ಯರ ಮನದ ಇಚ್ಛೆಯಂತೆ ಅಕ್ರಮದಲ್ಲಿ ಭಾಗಿಯಾದವರಿಗೆ ತಕ್ಕ ಶಿಕ್ಷೆ ಆಗಲಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯಿತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಶಾಸಕ ಬಸವನಗೌಡ ಯತ್ನಾಳ್ ಅವರ ಪ್ರಶ್ನೆಗೆ ಉತ್ತರಿಸಿದರು.

emedialine

Recent Posts

ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಶಹಾಬಾದ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಖುಷಿಯಿಂದ ಆಟವಾಡಿ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು. ಅವರು…

3 hours ago

ಪಾಲಿಕೆ ಸದಸ್ಯ ಸಚಿನ್ ಶಿರವಾಳಗೆ ಭೀಮನಗೌಡ ಪರಗೊಂಡ ಸನ್ಮಾನ

ಕಲಬುರಗಿ: ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಮಹಾನಗರದ ವಿದ್ಯಾನಗರ ವಾರ್ಡ್ ದ ಮಹಾನಗರ ಪಾಲಿಕೆಯ ಸದಸ್ಯ ಆಗಿರುವ ಸಚಿನ್ ಶಿರವಾಳ ಅವರು…

4 hours ago

ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಎಸ್.ಡಿ ನೇಮಕ

ಕಲಬುರಗಿ: 2009 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ಶರಣಪ್ಪ ಎಸ್.ಡಿ ಅವರು ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ನಿಯೋಕ್ತಗೊಂಡಿದ್ದಾರೆ.…

5 hours ago

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

7 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

7 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

7 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420