ಬಿಸಿ ಬಿಸಿ ಸುದ್ದಿ

ಪೋಡಿ ಸಮಸ್ಯೆ ಇತ್ಯರ್ಥಕ್ಕೆ 2 ತಿಂಗಳಲ್ಲಿ ಯೋಜನೆ: ಕಂದಾಯ ಸಚಿವ ಕೃಷ್ಣಭೈರೇಗೌಡ

ಬೆಳಗಾವಿ ಸುವರ್ಣಸೌಧ,ಡಿ.04: ಪೋಡಿ ಎಂಬುದು ಕಂದಾಯ ಇಲಾಖೆಯ ಟಾಪ್ 3 ಸಮಸ್ಯೆಗಳಲ್ಲೊಂದಾಗಿದ್ದು,ಇದರಿಂದ ಜನರಿಗೆ ತೊಂದರೆ ಆಗ್ತಾ ಇರುವುದು ಗಮನಕ್ಕಿದೆ;ಇತ್ತೀಚೆಗೆ ಮುಖ್ಯಮಂತ್ರಿಗಳು ಜನತಾದರ್ಶನ ನಡೆಸಿದ ಸಂದರ್ಭದಲ್ಲಿಯೂ ಇದೇ ತರಹದ ದೂರುಗಳು ಬಂದಿದೆ. ಇದನ್ನು ವ್ಯವಸ್ಥಿತವಾಗಿ ಬಗೆಹರಿಸುವ ನಿಟ್ಟಿನಲ್ಲಿ 2 ತಿಂಗಳಲ್ಲಿ ಒಂದು ಯೋಜನೆ ರೂಪಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಹೇಳಿದರು.

ವಿಧಾನಸಭೆಯಲ್ಲಿ ಸದಸ್ಯ ಅಶ್ವತ್‌ನಾರಾಯಣ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದರು. ಪೋಡಿ ಸಮಸ್ಯೆಯನ್ನು ಅರ್ಥಮಾಡಿಕೊಂಡೇ ಈ ಹಿಂದಿನ ನಮ್ಮ ಸರಕಾರ 2015ರಲ್ಲಿ ಪೋಡಿ ಮುಕ್ತ ಯೋಜನೆ ಅನುಷ್ಠಾನಕ್ಕೆ ತಂದಿತ್ತು;ಅದರ ಮೂಲಕ ಆಯ್ದ ಗ್ರಾಮಗಳ ಬಹುಮಾಲೀಕತ್ವದ ಖಾಸಗಿ/ಹಿಡುವಳಿ ಜಮೀನುಗಳನ್ನು ಅಳತೆಗೆ ಒಳಪಡಿಸಿ ಏಕಮಾಲೀಕತ್ವಕ್ಕೆ ಪರಿವರ್ತಿಸುವ ಉದ್ದೇಶದಿಂದ ರಾಜ್ಯದ ನಗರ ಪ್ರದೇಶದ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ 174 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಾರಂಭಿಸಲಾಗಿದೆ. ಪೋಡಿ ಮುಕ್ತ ಅಭಿಯಾನದ ಅಡಿ 16630 ಗ್ರಾಮಗಳನ್ನು ತೆಗೆದುಕೊಳ್ಳಲಾಗಿದೆ. ಇನ್ನೂ 14 ಸಾವಿರ ಗ್ರಾಮಗಳು ಉಳಿದಿವೆ ಎಂದರು. ಕಳೆದ 4 ವರ್ಷಗಳಿಂದ ಈ ಯೋಜನೆ ಅತ್ಯಂತ ಕುಂಠಿತವಾಗಿ ಸಾಗುತ್ತಿದೆ ಎಂದರು.

ಪೋಡಿ ಸಮಸ್ಯೆಗಳಲ್ಲಿ ಶೇ.70ರಷ್ಟು ಬಗೆಹರಿಸಬಹುದು;ಇನ್ನೂ 30ರಷ್ಟು ಆಮೇಲೆ ಮಾಡೋಣ ಅಂತ ನಿರ್ಧರಿಸಿದ್ದು 2 ತಿಂಗಳಲ್ಲಿ ಇದನ್ನು ಯಾವ ರೀತಿ ಮಾಡಬೇಕು ಎನ್ನುವುದಕ್ಕೆ ಸ್ಪಷ್ಟವಾಗಿ ಪ್ಲಾನ್ ಹಾಕಿಕೊಳ್ಳಲಾಗುವುದು. 3ರಿಂದ 4 ವರ್ಷಗಳ ಕಾಲಮಿತಿ ಹಾಕಿಕೊಂಡು ಈ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

1800 ಪರವಾನಿಗೆ ಭೂಮಾಪಕರ ನೇಮಕ: ಪೋಡಿ ಮುಕ್ತ ಅಭಿಯಾನ ಸಮರ್ಪಕವಾಗಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಿಬ್ಬಂದಿಗಳ ಕೊರತೆ ಇರುವುದು ಗಮನಕ್ಕಿದ್ದು, 1800 ಪರವಾನಿಗೆ ಭೂಮಾಪಕರನ್ನು ತೆಗೆದುಕೊಳ್ಳಲಾಗಿದೆ;ಈಗ ಅವರಿಗೆ ತರಬೇತಿ ನೀಡಲಾಗುತ್ತಿದ್ದು,ಜನೆವರಿಯಲ್ಲಿ ಅವರಿಗೆ ಈ ಕಾರ್ಯಗಳನ್ನು ವಹಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಹೇಳಿದರು.

ಯಾವ್ಯಾವ ಜಿಲ್ಲೆಗಳಲ್ಲಿ ಎಷ್ಟೆಷ್ಟು ಪೋಡಿ ಬಾಕಿ ಇವೆ ಎಂಬುದರ ಆಧಾರದ ಮೇಲೆ ಪರವಾನಿಗೆ ಭೂಮಾಪಕರನ್ನು ಆಯಾ ಜಿಲ್ಲೆಗಳಿಗೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ ಅವರು 364 ಭೂಮಾಪಕರು ಮತ್ತು 28 ಎಡಿಎಲ್‌ಆರ್‌ಗಳನ್ನು ನೇಮಕ ಪ್ರಕ್ರಿಯೆ ಆರಂಭಿಸಲಾಗಿದೆ ಎಂದರು.

emedialine

Recent Posts

ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಶಹಾಬಾದ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಖುಷಿಯಿಂದ ಆಟವಾಡಿ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು. ಅವರು…

2 hours ago

ಪಾಲಿಕೆ ಸದಸ್ಯ ಸಚಿನ್ ಶಿರವಾಳಗೆ ಭೀಮನಗೌಡ ಪರಗೊಂಡ ಸನ್ಮಾನ

ಕಲಬುರಗಿ: ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಮಹಾನಗರದ ವಿದ್ಯಾನಗರ ವಾರ್ಡ್ ದ ಮಹಾನಗರ ಪಾಲಿಕೆಯ ಸದಸ್ಯ ಆಗಿರುವ ಸಚಿನ್ ಶಿರವಾಳ ಅವರು…

3 hours ago

ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಎಸ್.ಡಿ ನೇಮಕ

ಕಲಬುರಗಿ: 2009 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ಶರಣಪ್ಪ ಎಸ್.ಡಿ ಅವರು ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ನಿಯೋಕ್ತಗೊಂಡಿದ್ದಾರೆ.…

4 hours ago

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

6 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

6 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420