ಕಲಬುರಗಿ: ರಾಜ್ಯದಲ್ಲಿ ಪಡಿತರ ವಿತರಣ ಮತ್ತು ಪಡಿತರ ಆಹಾರ ಧಾನ್ಯ ವಿತರಣೆಯಲ್ಲಿ ಆಗುತ್ತಿರುವ ವ್ಯತ್ಯಾಸ ಹಾಗೂ ಸರಕಾರದಿಂದ ಸಿಮೆ ಎಣ್ಣೆ ವಿತರಣೆ ಸೇರಿದಂತೆ ಇತರೆ ಆಹಾರ ಪದಾರ್ಥವನ್ನು ಪೂನರ ಆರಂಭಿಸಬೇಕೆಂದು ಅವರು ಎಸ್.ಯು.ಸಿ.ಐ.(ಸಿ) ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಹೆಚ್. ವ್ಹಿ ದಿವಾಕರ್ ಅವರು ಮುಖ್ಯಾಮಂತ್ರಿಗಳಿ ಪತ್ರ ಬರೆದು ಆಗ್ರಹಿಸಿದರು.
ಅವರು ಇಂದು ನಗರದ ತಿಮ್ಮಾಪುರಿ ಸರ್ಕಲ್ ನಿಂದ ಪ್ರತಿಭಾಟನಾ ಮೆರವಣಿಗೆ ನಡೆಸಿ ಮಾತನಾಡಿದ ಅವರು ಬಿಪಿಎಲ್ ಕಾರ್ಡುದಾರರಿಗೆ ಅಗತ್ಯ ವಸ್ತುಗಳು ಪೂರೈಕೆ ಆಗುತ್ತಿಲ್ಲ. ಪಡಿತರ ವಿತರಣೆ ಮಾಲೀಕರು ಮುಕ್ತ ಮಾರುಕಟೆಯಲ್ಲಿ ಕಳಪೆ ಮಟ್ಟದ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾರೆಂದು ಅವರು ಆರೋಪಿಸಿದರು.
ಪಡಿತರ ವಿತರಣೆಯಲ್ಲಿ ಮುಕ್ತ ಮಾರುಟಕೆ ನೆಪ್ಪದಲ್ಲಿ ಕಳಪೆ ಮಟ್ಟದ ಸೂಪೂ ಮತ್ತು ಪೌಡರ್ ಸೇರಿದಂತೆ ಮುಂತಾದ ವಸ್ತುಗಳು ಪಡಿತರ ಗ್ರಾಹಕರಿಗೆ ಮಾರುಕಟ್ಟೆ ದರಕಿಂತ ಹೆಚ್ಚಿನ ದರಲ್ಲಿ ಮಾರಾಟ ಮಾಡುತ್ತಿದ್ದಾರೆ ಈ ದಂಧೆಗೆ ಬ್ರೇಕ್ ಹಾಕಿ, ಹಿಂದೆ ಪಡಿತರದಾರರಿಗೆ ಅಕ್ಕಿ, ಗೋಧಿ, ಸಕ್ಕರೆ, ಅಡುಗೆ ಎಣ್ಣೆ, ಹೆಸರು ಬೆಳೆ, ಬೆಲ್ಲ, ಉಪ್ಪು, ಹಾಗೂ ಸೀಮೆ ಎಣ್ಣೆ ದಂತಾಹ ಪದಾರ್ಥಗಳು ವಿತರಿಸುವುದನ್ನು ಪೂನರ್ಹರಂಭಿಸಬೇಕೆಂದು ಒತ್ತಾಯಿಸಿದರು.
ನಂತರ ಎಸ್.ಎಂ ಶರ್ಮಾ ಮಾತನಾಡಿ, ರಾಜ್ಯದಲ್ಲಿ ಪಡಿತರ ಚೀಟಿ ವಿತರಣೆ ವಿಳಂಬ ನೀತಿ ಖಂಡಿಸಿ ಅರ್ಹರಿಗೆ ತ್ವರಿತವಾಗಿ ಪಡಿತರ ಚೀಟಿ ವಿತರಸಿ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಎಸ್.ಎಂ ಶರ್ಮಾ, ಸೀಮಾ ದೇಶಪಾಂಡೆ, ಸಂತೋಷಕುಮಾರ ಹಿರವೆ, ಸ್ನೇಹಾ ಕಟ್ಟಿಮನಿ, ಶಿಲ್ಪಾ ಬಿ.ಕೆ, ಕರ್ಣ, ಪ್ರೀತಿ ದೊಡ್ಮನಿ, ಪ್ರೀತಿ ಇಂಗಳಗಿ ಹಾಗೂ ರೇವಣಸಿದ್ದಪ್ಪ ಸೇರಿದಂತೆ ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…