ಕಲಬುರಗಿ: ಶಾದಿ ಭಾಗ್ಯ ಮತ್ತು ಹಿಂದುಳಿದ ವಸತಿ ನಿಲಯ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಹಣ ಲೂಟಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಮತ್ತು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಹುದ್ದೆಯಿಂದ ವಜಾ ಗೊಳಿಸಬೇಕೆಂದು ಆರ್.ಟಿ.ಐ ಕಾರ್ಯಕರ್ತ ರವಿ ಮದನಕರ್ ಅವರು ಒತ್ತಾಯಿಸಿದರು.
ಅವರು ಇಂದು ನಗರದ ಸರದಾರ ವಲ್ಲಭಾಯಿ ಪಟೇಲ್ ವೃತ ಹತ್ತಿರ ಪ್ರತಿಭಟನೆ ನಡೆಸಿ, ಕಳೆದ ಹತ್ತು ವರ್ಷಗಳಿಂದ ಅಲ್ಪಸಂಖ್ಯಾತರ ಇಲಾಖೆಯ ಅಧಿಕಾರಿಯಾಗಿ ಶಾದಿ ಭಾಗ್ಯ ಯೋಜನೆಯ ಅನುದಾನವನ್ನು ಬೇಕಾಬಿಟ್ಟಿಯಾಗಿ ಬಿಡುಗಡೆ ಮಾಡಿಕೊಂಡು ಲೂಟಿ ಮಾಡಿದ್ದ ತನಿಖಾ ತಂಡದಿಂದ ಬಹಿರಂಗವಾಗಿದೆ ಎಂದು ಅವರು ತಿಳಸಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿ ವಿರುದ್ಧ ಕ್ರಮಕ್ಕಾಗಿ ಕಲಬುರಗಿ ಪ್ರದೇಶಿಕ ಆಯುಕ್ತರು ಅಲ್ಪಸಂಖ್ಯಾತರ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆಂದು ಅವರು ತಿಳಿಸಿದರು.
ಅಲ್ಲದೇ ಇಂತಹ ಭ್ರಷ್ಟ ಅಧಿಕಾರಿಗೆ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಿಂದುಳಿದ ವರ್ಗದ ಇಲಾಖೆಯ ಅಧಿಕಾರಿಯಾಗಿ ನಿಯೋಜಿಸಿ ಮತ್ತಷ್ಟು ಭ್ರಷ್ಟಾಚಾರಕ್ಕೆ ಕುಮಕ್ಕು ನೀಡಿದಂತಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಆರೋಪಿಸಿದರು.
ನಂತರ ಇನ್ನೂರ್ವ ಆರ್.ಟಿ.ಐ ಕಾರ್ಯಕರ್ತರಾದ ಸಂಗಮನಾಥ ಗಿರೇಗೌಡ ಹಿಂದುಳಿದ ವರ್ಗ ಕಲ್ಯಾಣ ಇಲಾಖೆಯ ಕಲಬುರಗಿ ವಿಶ್ವ ವಿದ್ಯಾಲಯದಲ್ಲಿ ವಸತಿ ನಿಲಯದ ದುರಸ್ತಿ ಕಾಮಗಾರಿಗಳು ಕಳಪೆ ಆಗಿದ್ದು, ಇದಕ್ಕೆ ವಿರೋಧ ಮಾಡಿರುವವರ ಜೊತೆ ಸೇರಿ ಹಣ ಲೂಟಿ ಮಾಡಿದ್ದಾರೆಂದು ಆರೋಪಿಸಿದರು.
ಇಂತಹ ಅಧಿಕಾರಿಗಳಿಗೆ ಎರಡು ಹುದ್ದೆ ನೀಡಿ ಪತ್ತಷ್ಟು ಪ್ರೋತ್ಸಾಹಿಸಿದಂತೆದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಗುರು ಭಂಡಾರಿ, ಗಿರೀಶ ಚಕ್ರ, ಆಕಾಶ ರಾಠೋಡ, ಶಶಿಕುಮಾರ, ಮಲ್ಲಿಕಾರ್ಜುನ್ ತಳಕೇರಿ, ಶೇಖ್ ಶಫೀ ಅಹ್ಮದ್, ಚಂದು ಪವಾರ್, ರಮೇಶ ಚವ್ಹಾಣ, ಆನಂದ ಚವ್ಹಾಣ, ಬಿ. ಎಂ ಯಳವಾರ, ಹೀರಾ ಹೇಮಂತ ರಾಠೋಡ, ವಿಶ್ವನಾಥ ಪಾಟೀಲ, ಸಂತೋಷ ಭೈರಾಮಡಗಿ, ಕಿರಣ ಪವಾರ ಸೇರಿದಂತೆ ಮುಂತಾದ ಆರ್.ಟಿ.ಐ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…