ಶಹಾಪುರ ಇತರೆಡೆ ಅಂಬೇಡ್ಕರ್ ಬಸವಣ್ಣನ ಮೂರ್ತಿ ಪ್ರತಿಷ್ಠಾಪಿಸಿ: ಕ್ರಾಂತಿ

0
14

ಸುರಪುರ: ಜಿಲ್ಲೆ ಶಹಾಪುರ ನಗರದ ಹಳೆ ಬಸ್ ನಿಲ್ದಾಣದ ಬಳಿ ಇರುವ ಅಂಬೇಡ್ಕರ್ ನಾಮಫಲಕದ ಬಳಿ ಡಾ:ಬಿ.ಆರ್ ಅಂಬೇಡ್ಕರ್ ಅವರ ಪುತ್ಥಳಿ ಹಾಗೂ ಜಿಲ್ಲೆಯ ಇತರೆಡೆ ಬಸವಣ್ಣನವರ ಪುತ್ಥಳಿ ಪ್ರತಿಷ್ಠಾಪಿಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಆಗ್ರಹಿಸಿದರು.

ಸಂಘಟನೆಯಿಂದ ನಗರದ ಡಾ:ಬಿ.ಆರ್ ಅಂಬೇಡ್ಕರ್ ವೃತ್ತದ ಬಳಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿ,ಶಹಾಪುರ ಹಳೆ ಬಸ್ ನಿಲ್ದಾಣದ ಬಳಿ ನಾಮಫಲಕದ ಸ್ಥಳದಲ್ಲಿ ಅಂಬೇಡ್ಕರ್‍ರ ಪುತ್ಥಳಿ,ಯಾದಗಿರಿ ನಗರದಲ್ಲಿ ಬಸವಣ್ಣನವರ ಪುತ್ಥಳಿ,ವಡಿಗೇರ ಪಟ್ಟಣದಲ್ಲಿ ಬಸವಣ್ಣನವರ ಹಾಗೂ ಅಂಬೇಡ್ಕರ್‍ರ ಪುತ್ಥಳಿಯನ್ನು ಪ್ರತಿಷ್ಠಾಪಿಸುವಂತೆ ಈ ಹಿಂದೆ ಅನೇಕ ಬಾರಿ ಮನವಿ ಮಾಡಲಾಗಿದ್ದು ನಿರ್ಲಕ್ಷಿಸಿದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

Contact Your\'s Advertisement; 9902492681

ನಂತರ ಜಿಲ್ಲಾಧಿಕಾರಿಗಳಿಗೆ ಬರೆದ ಮನವಿಯನ್ನು ತಹಸೀಲ್ದಾರ್ ಕೆ.ವಿಜಯಕುಮಾರ್ ಮೂಲಕ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಮುಖಂಡರಾದ ಮಾನಪ್ಪ ಕಟ್ಟಿಮನಿ,ಮಾನಪ್ಪ ಕರಡಕಲ್,ಮಾನು ಗುರಿಕಾರ,ದೇವಿಂದ್ರಪ್ಪ ಪತ್ತಾರ,ಅಹ್ಮದ್ ಪಠಾಣ್,ಮಾನಪ್ಪ ಬಿಜಾಸಪುರ,ಚಂದ್ರಶೇಖರ ಹಸನಾಪುರ,ಮೂರ್ತಿ ಬೊಮ್ಮನಹಳ್ಳಿ,ರಾಮಣ್ಣ ಶೆಳ್ಳಗಿ,ಬಸವರಾಜ ದೊಡ್ಮನಿ,ಮಲ್ಲಿಕಾರ್ಜುನ ತಳ್ಳಳ್ಳಿ,ಬುದ್ಧಿವಂತ ನಾಗರಾಳ, ಜೆಟ್ಟೆಪ್ಪ ನಾಗರಾಳ,ಖಾಜಾಹುಸೇನ ಗುಡಗುಂಟಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here