ಚಿತ್ತಾಪುರ; ತಾಲೂಕಿನ ವಾಡಿ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಇಂದು ಸಾಯಾಂಕಾಲ ನಾಲ್ಕು ಗಂಟೆಯಿಂದ ರಾತ್ರಿ 12 ಗಂಟೆ ವರೆಗೆ ಮಧ್ಯ ಮಾರಾಟ ನಿಷೇಧಿಸಿ ಹಾಗೂ ಬಾರ್ ಮತ್ತು ರೆಸ್ಟೋರೆಂಟ್ ಮುಚ್ಚಬೇಕೆಂದು ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಆದೇಶ ಹೊರಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ವಾಡಿ ಪಟ್ಟಣದ ಎಸಿಸಿ ಕಾಲೋನಿಯಲ್ಲಿ ರಮೇಶ ಪವಾರ ಎನ್ನುವವರು ಆತ್ಮಹತ್ಯೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ನಾಗರೀಕರು ಮತ್ತು ಮೃತ ರಮೇಶ ಪವಾರರ ಸಂಬಂಧಿಕರು ರೊಚ್ಚಿಗೆದ್ದು ಆಡಳಿತ ಮಂಡಳಿಯ ವಿರುದ್ಧ ಪ್ರತಿಭಟಿಸಿ ಕಾನೂನು ಕೈಗೆತ್ತಿಕೊಳ್ಳುವ ಸಾಧತೆ ಇರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಮಧ್ಯಪಾನ ಮಾರಾಟ ನಿಷೇಧಿಸಿ, ಬಾರ್ ಮತ್ತು ರೆಸ್ಟೋರೆಂಟ್’ಗಳನ್ನು ಮುಚ್ಚುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.