ಆಳಂದ; ಜೆ.ಎಂ.ಎಫ್.ಸಿ.ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್

0
15

ಆಳಂದ: ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಶನಿವಾರ  ರಾಷ್ಟ್ರೀಯ ಲೋಕ ಅದಾಲತ್ ಪಟ್ಟಣದ ಜೆ.ಎಂ.ಎಫ್.ಸಿ.ನ್ಯಾಯಾಲಯದ ವಿವಿಧ ವಿಭಾಗದ ಕಚೇರಿಯಲ್ಲಿ ನಡೆಯಿತು.

ಲೋಕ ಅದಾಲತ್‌ನಲ್ಲಿ ಸಾರ್ವಜನಿಕರು ಬಾಕಿ ಇರುವ ತಮ್ಮ ಪ್ರಕರಣಗಳು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪಾಲ್ಗೊಂಡಿದ್ದರು.

Contact Your\'s Advertisement; 9902492681

ಬೆಳಿಗ್ಗೆ 10 ಗಂಟೆಗೆ ಲೋಕ ಅದಾಲತ್‌ ಪ್ರಾರಂಭವಾಯಿತು. ಸಂಜೆಯ ತನಕ ಇರಲಿದೆ. ಸಾರ್ವಜನಿಕರು, ಇದರ ಪ್ರಯೋಜನ ಪಡೆದುಕೊಂಡರು.ಹಿರಿಯ ಶ್ರೇಣಿ ನ್ಯಾಯಾಧೀಶರು, ಹೆಚ್ಚುವರಿ,ಸಿವಿಲ್ ನ್ಯಾಯಾಧೀಶರು, ಕಾನೂನು ಸೇವಾ ಸಮಿತಿ ಅಧ್ಯಕ್ಷ, ಸದಸ್ಯ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.

ಖಂಡನೆ ; ಕಲಬುರಗಿ ನ್ಯಾಯವಾದಿ ಈರಣ್ಣಗೌಡ ಪಾಟೀಲ್ ಕೊಲೆ ಹಿನ್ನೆಲೆಯಲ್ಲಿ ಪಟ್ಟಣದ ನ್ಯಾಯಾಲಯದಲ್ಲಿ ಶನಿವಾರ ನಡೆದ ಮೇಘಾ ಲೋಕ್ (ಜನತಾ ) ಅದಾಲತ್ ನಲ್ಲಿ ತಾಲೂಕು ವಕೀಲರ ಸಂಘದ ಪದಾಧಿಕಾರಿಗಳು ಕೈಗೆ ಕಪ್ಪು ಪಟ್ಟಿ ಕಟ್ಟಿಗೊಂಡು ಲೋಕ್ ಅದಾಲತ್ ನಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ವಕೀಲರ್ ಸಂಘದ ಅಧ್ಯಕ್ಷ ಪದಾಧಿಕಾರಿಗಳು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here