ಬೆಳಗಾವಿ ಸುವರ್ಣ ಸೌಧ: ವಕೀಲರ ಮೇಲೆ ಹಲ್ಲೆ ಅಥವಾ ಹಿಂಸಾಚಾರ ನಡೆಸುವವರಿಗೆ ಆರು ತಿಂಗಳಿನಿಂದ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ₹ 1 ಲಕ್ಷದವರೆಗೆ ದಂಡ ವಿಧಿಸುವುದಕ್ಕೆ ಅವಕಾಶ ಕಲ್ಪಿಸುವ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಮಸೂದೆಯನ್ನು ಸೋಮವಾರ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಮಸೂದೆಯನ್ನು ಮಂಡಿಸಿದರು..
ವಕೀಲರು ತಮ್ಮ ಕರ್ತವ್ಯ ನಿರ್ವಹಣೆ ವಿಷಯದಲ್ಲಿ ಬೆದರಿಕೆಗಳು ಬಂದಾಗ, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದಾಗ, ಅವರ ಮೇಲೆ ಹಲ್ಲೆ ನಡೆಯುವಂತಹ ಸಂದರ್ಭಗಳಲ್ಲಿ ರಕ್ಷಿಸುವುದಕ್ಕಾಗಿ ಈ ಮಸೂದೆಯನ್ನು ರೂಪಿಸಲಾಗಿದೆ ಎಂದು ಮಸೂದೆ ಅಂಶಗಳ ಮೇಲೆ ಬೆಳಕು ಚಲ್ಲಿದ್ದರು.
ಈ ಮಸೂದೆಯ ಅಡಿಯಲ್ಲಿ ದಾಖಲಿಸುವ ಪ್ರಕರಣಗಳ ವಿಚಾರಣೆಯನ್ನು ಪ್ರಥಮ ದರ್ಜೆ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಅಥವಾ ಅದಕ್ಕಿಂತ ಹೆಚ್ಚಿನ ದರ್ಜೆಯ ನ್ಯಾಯಾಲಯಗಳಲ್ಲೇ ನಡೆಸಬೇಕು.
ಯಾವುದೇ ಪ್ರಕರಣಗಳಲ್ಲಿ ವಕೀಲರನ್ನು ಬಂಧಿಸಿದಾಗ 24 ಗಂಟೆಗಳ ಒಳಗಾಗಿ ಆ ವಕೀಲನು ಸದಸ್ಯನಾಗಿರುವ ವಕೀಲರ ಸಂಘದ ಅಧ್ಯಕ್ಷ ಅಥವಾ ಕಾರ್ಯದರ್ಶಿಗೆ ಬಂಧನದ ವಿಷಯವನ್ನು ಪೊಲೀಸರು ತಿಳಿಸುವುದನ್ನು ಈ ಮಸೂದೆಯು ಕಡ್ಡಾಯಗೊಳಿಸು ಅಂಶಗಳು ವಿಧೇಯಕದಲ್ಲಿ ಇದೆ.
ಕಲಬುರಗಿಯಲ್ಲಿ ವಕೀಲರ ಓರ್ವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲಾ ನ್ಯಾಯವಾದಿಗಳ ಸಂಘ ಮತ್ತು ಹೈಕೋರ್ಟ್ ನ್ಯಾಯವಾದಿಗಳಿಂದ ನಿರಂತರ ಹೋರಾಟ ಮತ್ತು ನ್ಯಾಯವಾದಿಗಳ ಹಿತ ರಕ್ಷಣೆ ಕಾಯ್ದೆ ಜಾರಿಗೆ ರಾಜ್ಯಾದ್ಯಂತ ವಕೀಲರು ಆಗ್ರಹಿಸಿದರು. ಕಲಬುರಗಿಯಲ್ಲಿ ಅನಿರ್ದಿಷ್ಟ ಅವಧಿ ಧರಣಿ ಸಹ ನಡರದಿತ್ತು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…