ಸುರಪುರ: ರಾಜ್ಯದಲ್ಲಿನ ವೀರಶೈವ ಲಿಂಗಾಯತ ಸಮುದಾಯದ ಕುರಿತು ಚಿಂತನ ಮಂಥನ ನಡೆಸಲು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯಿಂದ ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ 24ನೇ ಮಹಾ ಅಧಿವೇಶನದಲ್ಲಿ ಎಲ್ಲರು ಭಾಗವಹಿಸಲು ಬನ್ನಿ ಎಂದು ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಮನವಿ ಮಾಡಿದರು.
ನಗರದ ರಂಗಂಪೇಟೆಯ ವೀರಶೈವ ಕಲ್ಯಾಣ ಮಂಟಪದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಸಿದ್ದರಾಮಯ್ಯನವರು ಈ ರಾಜ್ಯದಲ್ಲಿನ ಎಲ್ಲ ಸಮುದಾಯಗಳನ್ನು ಒಡೆದು ಚೂರು ಮಾಡಲು ಮುಂದಾಗಿದ್ದಾರೆ,ಇದನ್ನು ತಡೆಯಲೆಂದು ಇದೇ ಡಿಸೆಂಬರ್ 23,24 ರಂದು ಎರಡು ದಿನಗಳ ಕಾಲ ದಾವಣಗೆರೆಯಲ್ಲಿ ಮಹಾಸಭಾದ ಮಹಾ ಅಧಿವೇಶನ ನಡೆಯಲಿದೆ,ನಾಡಿನಾದ್ಯಂತ ಸುಮಾರು 10 ಲಕ್ಷ ಜನ ಸೇರುವ ನಿರೀಕ್ಷೆಯಿದೆ,ಆದ್ದರಿಂದ ಸುರಪುರ ಮತ್ತು ಹುಣಸಗಿ ತಾಲೂಕಿನ ಎಲ್ಲರು ಮಹಾ ಅಧಿವೇಶನದಲ್ಲಿ ಭಾಗವಹಿಸುವಂತೆ ತಿಳಿಸಿದರು.
ಇದೇ ಸಂದರ್ಭದಲ್ಲಿ ತಾಲೂಕು ವೀರಶೈವ ಲಿಂಗಾಯತ ಸಮಿತಿ ಅಧ್ಯಕ್ಷ ಹಾಗೂ ಕಲಬುರ್ಗಿ-ಯಾದಗಿರಿ ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಡಾ:ಸುರೇಶ ಸಜ್ಜನ್ ಮಾತನಾಡಿ,ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಕಳೆದ 23 ಮಹಾ ಅಧಿವೇಶನಗಳನ್ನು ನಡೆಸುವ ಮೂಲಕ ನಾಡಿನಲ್ಲಿಯ ವೀರಶೈವ ಲಿಂಗಾಯತರ ಏಳಿಗೆಗೆ ಕಾರ್ಯನಿರ್ವಹಿಸುತ್ತಿದೆ,ಈಗ 24ನೇ ಮಹಾ ಅಧಿವೇಶನ ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ,ಈಗಾಗಲೇ ಖಂಡ್ರೆಯವರು ಕೂಡ ಕರೆ ಮಾಡಿ ತಾಲೂಕಿನ ಎಲ್ಲರು ಆಗಮಿಸಲು ಆಹ್ವಾನಿಸಿದ್ದಾರೆ,ಈಗ ರಾಷ್ಟ್ರೀಯ ಉಪಾಧ್ಯಕ್ಷರು ಆಗಮಿಸಿ ಕರೆ ನೀಡಿದ್ದಾರೆ.
ಅದರಂತೆ ತಾಲುಕಿನ ಎಲ್ಲಾ ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಂದ ತಲಾ 5 ರಂತೆ ಸುಮಾರು 30 ವಾಹನಗಳನ್ನು ತೆಗೆದುಕೊಂಡು ಹೋಗಲು ಅಂದಾಜಿಸಲಾಗಿದೆ,ಅಲ್ಲದೆ ನಮ್ಮ ನಮ್ಮ ಸ್ವಂತ ವಾಹನಗಳನ್ನು ತೆಗೆದುಕೊಂಡು ಹೋಗುವ ಜೊತೆಗೆ ಇನ್ನೂ ಹೆಚ್ಚಿನ ವಾಹನಗಳಾದರು ಸರಿ ಸುಮಾರು ನಮ್ಮ ತಾಲೂಕಿನಿಂದ ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸೋಣ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಮಲ್ಲಿಕಾರ್ಜುನ ರೆಡ್ಡಿ,ಜಗದೀಶ ಪಾಟೀಲ್ ಇತರರು ಮಾತನಾಡಿ,ಮಹಾ ಅಧಿವೇಶನದ ಮೂಲಕ ರಾಜ್ಯದಲ್ಲಿ ಸಿದ್ರಾಮಯ್ಯನವರ ಸರಕಾರ ಬಿಡುಗಡೆಗೆ ಮುಂದಾಗಿರುವ ಎ.ಕಾಂತರಾಜ್ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ಮಹಾಸಭಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಗೌಡ ಬಾಡ್ಯಾಳ,ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಕನ್ನಡದ ಚಕ್ರವರ್ತಿ ಅಮೋಘವರ್ಷ ನೃಪತುಂಗರ 1223ನೇ ಜಯಂತಿ ಆಚರಿಸಲಾಯಿತು ಹಾಗೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ವೆಂಕಟರೆಡ್ಡಿ ಮುದ್ನಾಳ,ಜಿಲ್ಲಾಧ್ಯಕ್ಷ ಸೋಮಶೇಖರ ಮಣ್ಣೂರ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಸಭೆಯಲ್ಲಿ ಮಹಾಸಭಾದ ಜಿಲ್ಲಾಧ್ಯಕ್ಷ ಸೋಮಶೇಖರ ಮಣ್ಣೂರ,ಮಾಜಿ ಉಪಾಧ್ಯಕ್ಷ ರಾಜಶೇಖರ ವಜ್ಜಲ್,ಮಹಾಸಭಾದ ಯುವ ಘಟಕದ ಅಧ್ಯಕ್ಷ ಅವಿನಾಶ ಜಗನ್ನಾಥ್,ಬಸವರಾಜ ಜಮದ್ರಖಾನಿ,ಶಿವರಾಜಪ್ಪ ಗೋಲಗೇರಿ,ಹೆಚ್.ಸಿ ಪಾಟೀಲ್,ಬಾಬುಗೌಡ ಪಾಟೀಲ್ ಅಗತೀರ್ಥ,ಸೂಗುರೇಶ ವಾರದ್,ಶಿವರಾಜ ಬುದೂರ,ಮಲ್ಲಣ್ಣ ಸಾಹು ಮುಧೋಳ,ಸಿದ್ದಣಗೌಡ ಹೆಬ್ಬಾಳ ಸೇರಿದಂತೆ ಅನೇಕರಿದ್ದರು.ಜಗದೀಶ ಪಾಟೀಲ್ ಸ್ವಾಗತಿಸಿದರು,ಪ್ರಕಾಶ ಅಂಗಡಿ ಕನ್ನೆಳ್ಳಿ ನಿರೂಪಿಸಿ ವಂದಿಸಿದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…