ಸುರಪುರ: ಗ್ರಾಮೀಣ ಅಂಚೆ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಅಂಚೆ ಉಪ ವಿಭಾಗದ ಕಚೇರಿ ಮುಂದೆ ಅನಿರ್ದಿಷ್ಠ ಧರಣಿ ನಡೆಸಿದರು.
ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಧರಣಿಯಲ್ಲಿ ಭಾಗವಹಿಸಿದ್ದ ಮುಖಂಡರು ಮಾತನಾಡಿ,ದೇಶದಲ್ಲಿನ ಗ್ರಾಮೀಣ ಅಂಚೆ ನೌಕರರನ್ನು ಕೇಂದ್ರ ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ,ನಮ್ಮ ಯಾವುದೇ ಬೇಡಿಕೆಯನ್ನು ಅನೇಕ ವರ್ಷಗಳಿಂದ ಈಡೇರಿಸಲು ಮನವಿ ಮಾಡಿದರು ಪ್ರಯೋಜನೆಯಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ದೇಶದಲ್ಲಿನ 1.30 ಲಕ್ಷಕ್ಕೂ ಹೆಚ್ಚು ಅಂಚೆ ಕಚೇರಿಗಳನ್ನು ನಿರ್ವಹಿಸುತ್ತಿರುವ ಗ್ರಾಮೀಣ ಅಂಚೆ ನೌಕರರು ಸರಕಾರದ ಅನೇಕ ಸವಲತ್ತುಗಳಿಂದ ವಂಚಿತರಾಗುತ್ತಿದ್ದಾರೆ.ಕಮಲೇಶಚಂದ್ರ ಸಮಿತಿಯ ವರದಿಯನ್ನು ಸರಕಾರ ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಅನಿರ್ದಿಷ್ಟ ಧರಣಿ ನಡೆಸಲಾಗುತ್ತಿದೆ,ನಮ್ಮ ಬೇಡಿಕೆ ಸರಕಾರ ಕೂಡಲೇ ಈಡೇರಿಸದಿದ್ದಲ್ಲಿ ಧರಣಿಯನ್ನು ನಿರಂತರವಾಗಿ ನಡೆಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ದೇವಿಂದ್ರಪ್ಪ ಹುಣಸಿಹೊಳೆ,ಖಜಾಂಚಿ ಮಹಿಬೂಬಸಾಬ್ ಮುಲ್ಲಾ ವನದುರ್ಗ,ಸಹ ಕಾರ್ಯದರ್ಶಿ ನೀಲಕಂಠರಾಯಗೌಡ ಸುಗೂರ ಸೇರಿದಂತೆ ನೂರಾರು ಜನ ಅಂಚೆ ನೌಕರರು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…