ವಿಜಯಪುರ(ಜಮಖಂಡಿ): ಜಮಖಂಡಿಯ ಹುನ್ನೂರ – ಮಧುರಖಂಡಿಯ ಬಸವಜ್ಞಾನ ಗುರುಕುಲದಲ್ಲಿ ಶನಿವಾರ ನಡೆದ ಶಿವಾನುಭವ ಸಂಪದ ಕಾರ್ಯಕ್ರಮದಲ್ಲಿ ಕಲಬುರಗಿಯ ಹಿರಿಯ ಕವಿಯತ್ರಿ ಶಕುಂತಲಾ ಪಾಟೀಲ ಜಾವಳಿ ಅವರನ್ನು ವಿಶೇಷವಾಗಿ ಸತ್ಕರಿಸಲಾಯಿತು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಶಕುಂತಲಾ ಪಾಟೀಲ ಜಾವಳಿ, ತಾತ್ವಿಕ ತಳಹದಿಯ ಮೇಲೆ ಸಾತ್ವಿಕ ಸಮಾಜವನ್ನು ಕಟ್ಟಿದ ಮಹಾತ್ಮ ವಿಶ್ವಗುರು ಬಸವಣ್ಣನವರು. ನಮ್ಮೊಳಗೆ ಅರಿವಿನ ಜ್ಯೋತಿ ಬೆಳಗಿಸಿದ ಹನ್ನೇರಡನೇ ಶತಮಾನದ ಬಸವಾದಿ ಶರಣರು ವಿಶ್ವಮಾನ್ಯರೆನಿಸಿಕೊಂಡಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದ ಅವರು, ಈ ನಿಟ್ಟಿನಲ್ಲಿ ಶರಣರಾದ ಡಾ.ಈಶ್ವರ ಮಂಟೂರ ಶರಣರು ತಮ್ಮ ಅಮೃತ ನುಡಿಗಳ ಮೂಲಕ ಇಂದಿನ ಸಮಾಜದಲ್ಲಿ ಹೊಸ ಸಂಚಲನ ಮೂಡಿಸುತ್ತಿದ್ದಾರೆ ಎಂದು ಮನದುಂಬಿ ಹೇಳಿದರು.
ಅನುಭಾವ ನೀಡಿದ ಶಿವಮೊಗ್ಗ ಜಿಲ್ಲೆಯ ಸಂತೆಕಡೂರ ಜ್ಞಾನಮಂಟಪದ ಪೂಜ್ಯ ನವಲಿಂಗ ಶರಣರು, ದೇವರು, ಧರ್ಮದ ಹೆಸರಿನಲ್ಲಿ ನಡೆಯುತ್ತಿರುವ ಶೋಷಣೆಯಿಂದ ನಾವು ಪಾರಾಗಬೇಕಾದರೆ ಬಸವ ಚಿಂತನೆಯೆಡೆಗೆ ಮುಖ ಮಾಡಬೇಕು. ಅರಿವೆ ನಮಗೆ ಗುರುವಾಗಬೇಕು ಅಂದಾಗ ಮಾತ್ರ ಈ ಸಮಾಜದಲ್ಲಿ ಸಾಧಿಸಲಿಕ್ಕೆ ಸಾಧ್ಯವಾಗುತ್ತದೆ. ಈ ಜಗತ್ತಿನಲ್ಲಿ ಸರ್ವ ಸಮಾನತೆ ಸಾರಿದ ಧರ್ಮ ಯಾವುದಾದರೂ ಇದ್ರೆ ಅದು ಬಸವ ಧರ್ಮವೊಂದೇ ಎಂಬ ನಿಜತತ್ವವನ್ನು ಇಂದು ನಾವು ಅರ್ಥಮಾಡಿಕೊಳ್ಳಬೇಕಾಗಿದೆ. ದೇಹವೇ ದೇಗುಲ ಎಂದವರು ವಿಶ್ವಗುರು ಬಸವಣ್ಣ ಎಂದು ನುಡಿದರು.
ಹಿರಿಯ ಗಾಂಧಿವಾದಿ ತಮ್ಮಣ್ಣಪ್ಪಾ ಬುದನಿ ಬಸವಭಾವ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಜಮಖಂಡಿ ಸಿ.ಪಿ.ಐ. ಮಹಾಂತೇಶ ಹೊಸಪೇಟೆ, ನಿವೃತ್ತ ಪ್ರಿನ್ಸಿಪಾಲ್ ವ್ಹಿ.ಎನ್.ಕಮ್ಮಾರ, ಉದ್ಯಮಿ ಅಲ್ಲಪ್ಪ ಗುಂಜಿಗಾಂವಿ, ಬಸವ ಕೇಂದ್ರದ ಬಸನಗೌಡ ಪಾಟೀಲ ವೇದಿಕೆ ಮೇಲಿದ್ದರು.
ಕಲಬುರಗಿ ಸಾಂಸ್ಕೃತಿಕ ಬಳಗದ ವಿಜಯಕುಮಾರ ತೇಗಲತಿಪ್ಪಿ, ಜಗದೀಶ ಮರಪಳ್ಳಿ, ಶ್ರೀಕಾಂತ ಪಾಟೀಲ ತಿಳಗೂಳ, ನಾಗೇಂದ್ರಪ್ಪ ಮಾಡ್ಯಾಳೆ, ಬಿ.ಎಂ.ಪಾಟೀಲ ಕಲ್ಲೂರ, ಪ್ರಮುಖರಾದ ಯಶ್ವಂತರಾಯಗೌಡ ಪಾಟೀಲ, ರಾಜೇಶ್ವರಿ ಚಂದಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಬಸವಜ್ಞಾನ ಗುರುಕುಲದ ಪೂಜ್ಯ ಡಾ . ಈಶ್ವರ ಮಂಟೂರ ಸಮ್ಮುಖ ವಹಿಸಿದ್ದರು.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…