ಸುಲೇಪೇಟ್ ಗ್ರಾಮದ ಅಕ್ರಮ ಸವಳು ಗಣಿಗಾರಿಕೆ: ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಜಿಲ್ಲೆಯ ಸುಲೇಪೇಟ ಗ್ರಾಮದ ನೂರಾರು ಎಕರೆ ಪ್ರದೇಶದಲ್ಲಿ ಗಣಿಲೀಜ್ ಪಡೆಯದೇ ಅಕ್ರಮವಾಗಿ ಸವಳು ಗಣಿಗಾರಿಕೆ ನಡೆಸಲಾಗುತ್ತಿದ್ದು, ಕೇವಲ ಒಂದೇರಡು ಟಿಪ್ಟರ್‍ಗಳಿಗೆ ಮಾತ್ರ ರಾಯಲ್ಟಿ ತೋರಿಸಿ ಸರ್ಕಾರದ ಬೊಕ್ಕಸಕ್ಕೆ ಹಾನಿ ಮಾಡಲಾಗುತ್ತಿದೆ. ಇಲ್ಲಿನ ಅಕ್ರಮ ಗಣಿಗಾರಿಕೆ ತಡೆಯಲು ಆಗ್ರಹಿಸಿ ವೀರ ಕನ್ನಡಿಗರ ಸೇನೆ ನೆತೃತ್ವದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಎದುರುಗಡೆ ಪ್ರತಿಭಟನೆ ನಡೆಸಿ ಇಲಾಖೆಯ ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.

ಚಿಂಚೋಳಿ ತಾಲ್ಲೂಕಿನ ಸಾಲ, ಗ್ರಾಮದ ಮನುಸಂರಲ್ಲಿ ಸುಮಾರು 15-20 ವರ್ಷಗಳಿಂದ ಕಾನೂನು ಬಾಹಿರವಾಗಿ ಮತ್ತು ಅಕ್ರಮವಾಗಿ ನೂರಾರು ಎಕರೆ ಪ್ರದೇಶದಲ್ಲಿ ಸವಳು ಗಣಿಗಾರಿಕೆ ಮಾಡುತ್ತಿದ್ದಾರೆ. ಇವರು ಕೇವಲ ಎರಡು ಎಕರೆ ಪ್ರದೇಶದ ಸರಳು ಗಣಿಗಾರಿಕೆಗಾರಿ- ಕೆಗಾಗಿ ಲೀಜ್ ಪಡೆದುಕೊಂಡಿದ್ದು, ಉಳಿದ ಜಮೀನಿನಲ್ಲಿ ಕಾನೂನು ಬಾಹಿರವಾಗಿ ಆಕ್ರಮ ಗಣಿಗಾರಿಕೆ ಮಾಡುವ ಮೂಲಕ ಸರ್ಕಾರಕ್ಕೆ ತುಂಬೇಕಾದ ರಾಯಲ್ಟಿ ಮೋಸ ಮಾಡಲಾಗುತ್ತಿದೆ.

ಇಲ್ಲಿನ ಗಣಿಗಾರಿಕೆಯಿಂದ ತೆ- ಗೆದ ಸವರು ಮಣ್ಣು ಅಕ್ರಮವಾಗಿ ದಾಸ್ತಾನು ಮಾಡಿ, ಹತ್ತಾರು ಟಿಪ್ಪರಗಳಲ್ಲಿ ಮತ್ತು ಟ್ಯಾಕ್ಟರಿಗಳಲ್ಲಿ ಅನ್ಯ ರಾಜ್ಯಗಳಿಗೆ ಸರಬರಾಜು ಮಾಡುತ್ತಿದ್ದಾರೆ.

ಆದರೆ ಒಂದು ದಿವಸಕ್ಕೆ 25- 30 ಟಿಪ್ಪರಗಳು ಸರಬರಾಜು ಮಾಡಿದರೆ, ಅವರು 2-3ಟಿಪ್ಪರಗಳಿಗೆ ಮಾತ್ರ ರಾಯಲ್ಲಿ ಕಟ್ಟುತ್ತಿದ್ದಾರೆ, ಉಳಿದ ಟಿಪ್ಪರಗಳ ರಾಯಲ್ಟಿ ಕಟ್ಟದ ಸರ್ಕಾರಕ್ಕೆ ಮೋಸ ಮತ್ತು ವಂಚನೆ ಮಾಡಿ, ಸರ್ಕಾರದ ಧೋಕ್ಕಸಕ್ಕೆ ನಷ್ಟವನ್ನುಂಟು ಮಾಡುತ್ತಿದ್ದಾರೆ.
ಈ ಅಕ್ರಮಗಣಿಗಾರಿಕೆ ನಡೆಸುವವರು, ಸ್ಥಳೀಯ ಅಧಿಕಾರಿಗಳೊಂದಿಗೆ ಶಾಮೀಲಾಗಿ ಈ ಆಕ್ರಮ ಚಟುವಟಿಕೆ ಮಾಡುತ್ತಿರುವುದರಿಂದ, ಅಧಿಕಾರಿಗಳು ಇದಕ್ಕೆ ಕುಮ್ಮಕ್ಕು ನೀಡುವಂತಾಗಿದೆ. ಇಲ್ಲಿನ ಆಕ್ರಮಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು.

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಮತ್ತು ಮೇಲೆ ತೋರಿಸಿದವರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಂಡು, ಕಾನೂನುದಾಹಿರವಾಗಿ ನಡೆಸುತ್ತಿರುವ ಸವಳು ಸವಳು ಗಣಿಗಾರಿಕೆ, ಅಕ್ರಮ ದಾಸ್ತಾನು ತಮ್ಮ ಕಣ್ಣಿಗೆ ತೆಗೆದುಕೊಂಡು, ಅವರ ಗಣಿಯ ಲೀಜನ್ನು ರದ್ದುಪಡಿಸಿ, ಗಣಿ ಪ್ರದೇಶ, ಸರ್ವೆ ಮಾಡಿ, ಇಲ್ಲಿಯವರೆಗೆ ಮಾಡಿರುವ ವಂಚನೆಯ ಹಣವನ್ನು ವಸೂಲಿ ಮಾಡಿ, ಸರ್ಕಾರದ ಲೋಕ್ಕಸಕ್ಕೆ ಜಮಾ ಮಾಡಬೇಕು ಎಂದು ಒತ್ತಾಯಿಸಲಾಯಿತು.

ಪ್ರತಿಭಟನೆಯಲ್ಲಿ ಸೇನೆ ಸಂಸ್ಥಾಪಕ ಅಧ್ಯಕ್ಷ ಅಮೃತ ಸಿ.ಪಾಟೀಲ ಸಿರನೂರ, ತಾಲೂಕ ಅಧ್ಯಕ್ಷ ವಿಠಲ್ ಎಸ್.ಕುಸಾಳೆ, ಕಾರ್ಯಕರ್ತರಾದ ಶಿವಾನಂದ, ಅಣವೀರ, ಜೈಭೀಮ, ಶಿವಾಜಿ ಚವ್ಹಾಣ, ಅನೀಲ್, ಅಹ್ಮದ ಮತ್ತು ಪ್ರಶಾಂತ ಬಿ.ಸೇರಿದಂತೆ ಹಲವರು ಭಾಗವಹಿಸಿದ್ದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420