ಸುರಪುರ:ನಗರದಲ್ಲಿರುವ ಖಾಸಗಿ ವೈದ್ಯಕೀಯ ಪ್ರಯೋಗಾಲಯ ಮತ್ತು ಖಾಸಗಿ ಕ್ಲಿನಿಕ್ಗಳ ಮೇಲೆ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ನೇತೃತ್ವದ ತಂಡ ದಾಳಿ ನಡೆಸಿ ಪರವಾನಿಗೆ ತಪಾಸಣೆ ನಡೆಸಲಾಗಿದೆ.
ಈ ಕುರಿತು ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ ನಾಯಕ ಅವರು ಮಾಹಿತಿ ನೀಡಿ, ಕೆಂಭಾವಿ ರಸ್ತೆಯಲ್ಲಿನ ಪಾಟೀಲ್ ಡೈಗ್ನೋಸ್ಟಿಕ್ ಸೆಂಟರ್ ಮೇಲೆ ದಾಳಿ ನಡೆಸಿ ಕರ್ನಾಟಕ ಖಾಸಗಿ ವೈದ್ಯಕೀಯ ಸ್ಥಾಪನೆ (ಕೆ.ಪಿ.ಎಮ್.ಇ) ಕಾಯ್ದೆ ಅಡಿಯಲ್ಲಿ ಪರವಾನಿಗೆ ಪಡೆಯದೆ ಇರುವುದನ್ನು ಪರಿಶೀಲಿಸಿ ಸೀಜ್ ಮಾಡಲಾಗಿದೆ.ಅಲ್ಲದೆ ಡಾ:ವಿ.ಎಲ್.ಚೌದರಿ ಅವರು ಕೆ.ಪಿ.ಎಮ್.ಇ ಕಾಯ್ದೆಯ ಪರವಾನಿಗೆ ನವಿಕರಣಗೊಳಿಸಿರದ ಕಾರಣ ಅವರಿಗೆ ನೋಟಿಸ್ ನೀಡಲಾಗಿದೆ,ಅಲ್ಲದೆ ತಿಮ್ಮಾಪುರದ ಒಂದು ಖಾಸಗಿ ಕ್ಲಿನಿಕ್ಗೂ ಪರವಾನಿಗೆ ಪಡೆಯಲು ಒಂದು ವಾರಗಳ ಕಾಲಾವಕಾಶ ನೀಡಿ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.
ಅಲ್ಲದೆ ಸುರಪುರ ಮತ್ತು ಹುಣಸಗಿ ತಾಲೂಕಿನಾದ್ಯಂತ ಇರುವ ಅರ್ಹತೆ ಹೊಂದಿರುವ ವೈದ್ಯರು ನಡೆಸುವ ಖಾಸಗಿ ಕ್ಲೀನಿಕ್ಗಳಿಗೆ ಕಡ್ಡಾಯವಾಗಿ ಪಲೊಷನ್ ಬೋರ್ಡ್ ಲೈಸೆನ್ಸ್,ಮ್ಯಾನೆಜ್ಮೆಂಟ್ ಲೈಸೆನ್ಸ್ ಹಾಗೂ ಕೆ.ಪಿ.ಎಮ್.ಇ ಲೈಸೆನ್ಸ್ ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಈ ಮೂಲಕ ಸೂಚಿಸಲಾಗುತ್ತಿದೆ ಎಂದು ತಿಳಿಸಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…