ಬಿಸಿ ಬಿಸಿ ಸುದ್ದಿ

ರಾಜ್ಯ ಪ್ರತ್ಯೇಕತೆ ಪರಿಹಾರವಲ್ಲ; ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಎಲ್ಲರಲ್ಲೂ ಇಚ್ಛಾಶಕ್ತಿ ಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ; ಅನೇಕ ಹೋರಾಟಗಾರರ ತ್ಯಾಗ, ಬಲಿದಾನದ ಪ್ರತಿಫಲವಾಗಿ ಕರ್ನಾಟಕ ರಾಜ್ಯ ಏಕೀಕೃತವಾಗಿದೆ. ಅಭಿವೃದ್ಧಿಯ ಹಿನ್ನಡೆಯಲ್ಲಿ ರಾಜ್ಯ ಪ್ರತ್ಯೇಕತೆ ಬಗ್ಗೆ ಮಾತನಾಡುವುದು ಅಂತಹ ಮಹನೀಯರಿಗೆ ಅಪಮಾನ ಮಾಡಿದಂತೆ. ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಎಲ್ಲರಲ್ಲೂ ಇಚ್ಛಾಶಕ್ತಿ ಬೇಕು. ರಾಜ್ಯ ಸರ್ಕಾರವು ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಇಂದು ವಿಧಾನಸಭೆಯಲ್ಲಿ ಜರುಗಿದ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆಯ ಕೊನೆಗೆ ಉತ್ತರಿಸಿ, ಮಾತನಾಡಿದರು.

ಕರ್ನಾಟಕ ರಾಜ್ಯದ ಕನ್ನಡಿಗರು ಏಕೀಕರಣ ಪೂರ್ವದಲ್ಲಿ ವಿವಿಧ ಪ್ರಾಂತಗಳಲ್ಲಿ ಹಂಚಿ ಹೋಗಿದ್ದರು. ಕರ್ನಾಟಕ ಒಂದಾಗಬೇಕು. ಕನ್ನಡಿಗರು ಒಟ್ಟಾಗಬೇಕು ಎಂದು ಬಯಸಿ ಉತ್ತರ, ದಕ್ಷಿಣ ಭಾಗದ ಅನೇಕ ನಾಯಕರು ನಿರಂತರ ಹೋರಾಟ ಮಾಡಿ ರಾಜ್ಯ ಒಗ್ಗೂಡಿಸಿದರು. ಉತ್ತರ ಕರ್ನಾಟಕ ಸೇರಿದಂತೆ ಈ ಭಾಗಗಳು ಅಬಿವೃದ್ಧಿಯಲ್ಲಿ ಹಿಂದೆ ಉಳಿಯಲು ಅನೇಕ ಐತಿಹಾಸಿಕ ಕಾರಣಗಳು ಇವೆ ಎಂದು ವಿವರಿಸಿದ ಸಿಎಂ ಅವರು ಏಕೀಕರಣಕ್ಕಿಂತ ಮುಂಚೆ ವಿವಿಧೆಡೆ ಹಂಚಿಹೋಗಿದ್ದ ಕರ್ನಾಟಕದ ಪ್ರದೇಶಗಳ ಸ್ಥಿತಿಗತಿ ಬಗ್ಗೆ ಸದನದಲ್ಲಿ ವಿವರಿಸಿದರು.

ಕರ್ನಾಟಕದ ಅಭಿವೃದ್ಧಿಗೆ ಪ್ರೊ. ಡಿ.ಎಂ. ನಂಜುಂಡಪ್ಪ ವರದಿ ಸೇರಿದಂತೆ ವಿವಿಧ ಶಿಫಾರಸ್ಸುಗಳ ಆಧಾರದ ಮೇಲೆ ಕ್ರಮಕೈಗೊಳ್ಳಲಾಗಿದೆ. ನಮ್ಮ ಸರ್ಕಾರವು ಈ ಭಾಗದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಿದೆ ಎಂದು ಹೇಳಿದ ಮುಖ್ಯಮಂತ್ರಿಗಳು ಅಭಿವೃದ್ಧಿಯ ಅಷ್ಟಸೂತ್ರಗಳನ್ನು ಸಭೆಯಲ್ಲಿ ಪ್ರಕಟಿಸಿದರು.

emedialine

Recent Posts

ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆಗೆ ಅಭಿನಂದಿಸಿದ ಇರ್ಫಾನ್ ಅಹ್ಮದ್ ಸರಡಗಿ

ಕಲಬುರಗಿ: ಕರ್ನಾಟಕದ ಧೀಮಂತ ನಾಯಕ ಎಐಸಿಸಿ ಅಧ್ಯಕ್ಷ ಡಾ. ಮಲ್ಲಿಕಾರ್ಜುನ್ ಖರ್ಗೆ ಅವರ 83ನೇ ಜನ್ಮದಿನ ನಿಮಿತ್ತ ಮಾಜಿ ಸಂಸದ…

10 mins ago

ಅನರ್ಹ ಬಿ.ಪಿ.ಎಲ್ ಪಡಿತರ ಚೀಟಿ ಪತ್ತೆ ಹಚ್ಚಿ: ಅಕ್ರಮ‌ ಮದ್ಯ ಮಾರಾಟಕ್ಕೆ ಬ್ರೆಕ್ ಹಾಕಿ| ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಉಳ್ಳವರು ಸಹ ಸರ್ಕಾರಿ ಸೌಲಭ್ಯ ಪಡೆಯಲು ಬಿ‌.ಪಿ‌.ಎಲ್ ಪಡಿತರ ಚೀಟಿ ಪಡೆದಿರುವ ಸಾಧ್ಯತೆ ಇದ್ದು, ಕೂಡಲೆ ಇಂತಹ ಅನರ್ಹ…

18 hours ago

ಕುಂಬಾರ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ನೀಡಲು ಒತ್ತಾಯ

ಶಹಾಬಾದ: ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ಕುಂಬಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ಅನುದಾನ ನೀಡುವ ಮೂಲಕ ಕಲಬುರಗಿ…

19 hours ago

ಪರಿಸರಸ್ನೇಹಿ ಪರ್ಯಾಯ ಇಂಧನಗಳ ಬಳಕೆ ಅಗತ್ಯ

ಶಹಬಾದ: ಪರಿಸರ ಮಾಲಿನ್ಯ ಉಂಟು ಮಾಡುವ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸ್ನೇಹಿಯಾಗುವ ಪರ್ಯಾಯ ಇಂಧನಗಳ ಬಳಕೆ ಮಾಡಿದಲ್ಲಿ…

19 hours ago

ಕೊಲುವೆನೆಂಬ ಭಾಷೆ ದೇವನದಾದರೆ ಗೆಲುವೆನೆಂಬ ಭಾಷೆ ಭಕ್ತನದಾಗಬೇಕು

ಬಸವಾದಿ ಶರಣರ ರಚನೆಯ ವಚನ ಎನ್ನುವುದು ಬಹಳ ಮೌಲಿಕವಾದ ನುಡಿ. 'ವ' ಎಂಬ ಸೂತ್ರವನ್ನು ಬಿಡಿಸುವುದಾದರೆ, ವ ಎಂಬ ಮೊದಲ…

20 hours ago

ಮೋಹರಂ ಭಾವೈಕ್ಯತೆಯ ಸಂಕೇತದ ಉತ್ಸವ

ಕಲಬುರಗಿ: ಭಾರತ ಅನೇಕ ಜಾತಿ, ಧರ್ಮಗಳಿಂದ ಕೂಡಿದ್ದ ದೇಶವಾಗಿದ್ದು, ಹಬ್ಬ, ಜಾತ್ರೆ, ಉತ್ಸವಗಳು ಪರಸ್ಪರ ಬೆಸೆಯುತ್ತವೆ. ತ್ಯಾಗ, ಭಾವೈಕ್ಯತೆಯ ಸಂಕೇತವಾಗಿ…

20 hours ago