ಡಿ. 29ರಿಂದ ರಾಜ್ಯ ಮಟ್ಟದ 3ನೇ ವೈಜ್ಞಾನಿಕ ಸಮ್ಮೇಳನ

0
29

ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಇದೇ ಡಿ. 29 ಮತ್ತು 30ರಂದು ಎರಡು ದಿನಗಳ ಕಾಲ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ರಾಜ್ಯ ಮಟ್ಟದ ಮೂರನೇ ವೈಜ್ಞಾನಿಕ ಸಮ್ಮೇಳನ ನಡೆಯಲಿದೆ ಎಂದು ಪರಿಷತ್ ಜಿಲ್ಲಾ ಅಧ್ಯಕ್ಷ ರವೀಂದ್ರ ಶಾಬಾದಿ ತಿಳಿಸಿದರು.

ಸಮ್ಮೇಳನದ ಸರ್ವಾಧ್ಯಕ್ಷರಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಲಾಗಿದ್ದು, ಈ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರು, ಗಣ್ಯರು ಭಾಗವಹಿಸಲಿದ್ದಾರೆ ಎಂದರು.

Contact Your\'s Advertisement; 9902492681

ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಶಿವರಾಜ ಪಾಟೀಲ್ ಅವರಿಗೆ ಈ ಬಾರಿಯ ರಾಜ್ಯ ಮಟ್ಟದ ಎಚ್.ಎನ್. ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುತ್ತಿದೆ. ಅದರಂತೆ ಕಲಬುರಗಿ ಜಿಲ್ಲೆಯಿಂದ ಪ್ರಗತಿಪರ ಚಿಂತಕ ಪೆÇ್ರ.ಆರ್.ಕೆ. ಹುಡಗಿ ಅವರನ್ನು ಜಿಲ್ಲಾ ಮಟ್ಟದ ಎಚ್.ಎನ್. ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಶಾಬಾದಿ ವಿವರಿಸಿದರು.

ಈ ಸಮ್ಮೇಳನದಲ್ಲಿ ಮಹಾ ಅಧಿವೇಶನ, ವೈಚಾರಿಕ ವಿಷಯ ಕುರಿತು ವಿವಿಧ ಗೋಷ್ಠಿಗಳು, ವಿಜ್ಞಾನಿ-ವಿದ್ಯಾರ್ಥಿ ಸಂವಾದ, ಸಾಂಸ್ಕøತಿಕ ವೈಭವ, ಹಾಡು ಹಾಸ್ಯ, ಆಹಾರ ಮೇಳ, ಖಾದಿ, ಪುಸ್ತಕ, ವಿಜ್ಞಾನ ವಸ್ತು ಪ್ರದರ್ಶನ ಮುಂತಾದ ಕಾರ್ಯಕ್ರಮಗಳು ಜರುಗಲಿವೆ ಎಂದು ಮಾಹಿತಿ ಹಂಚಿಕೊಂಡರು.

ಕರಾವೈಸಂಪ ಪ್ರಧಾನ ಕಾರ್ಯದರ್ಶಿ ಡಾ. ಶಿವರಂಜನ ಸತ್ಯಂಪೇಟೆ, ರಾಜ್ಯ ನಿರ್ದೇಶಕ ಶರಣಬಸವ ಕಲ್ಲಾ, ಸಂಚಾಲಕ ಸತೀಶ್ ಸಜ್ಜನ್, ಉಪಾಧ್ಯಕ್ಷ
ನೀಲಕಂಠ ಅವಂಟಿ, ಪರಮೇಶ್ವರ ಶೆಟಕಾರ ಸೇರಿದಂತೆ ಇತರರಿದ್ದರು.

ಕರಾವೈಸಂಪ ಹೆಜ್ಜೆ ಗುರುತು; ಪವಾಡ ರಹಸ್ಯ ಬಯಲು ಖ್ಯಾತಿಯ ಡಾ. ಹುಲಿಕಲ್ ನಟರಾಜ್ ನೇತೃತ್ವದಲ್ಲಿ 2020 ಡಿಸೆಂಬರ್ 29ರಂದು ಆರಂಭವಾದ ಸಂಸ್ಥೆಯು ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ರಾಜ್ಯಾದ್ಯಂತ ಸಂಘಟಿಸುತ್ತ ಬಂದಿದೆ ಎಂದು ಶಾಬಾದಿ ಪರಿಷತ್ ಚಟುವಟಿಕೆ ಕುರಿತು ವಿವರಿಸಿದರು.

ಪ್ರತಿ ವರ್ಷ ರಾಜ್ಯ ಮಟ್ಟದ ವೈಜ್ಞಾನಿಕ ಸಮ್ಮೇಳನ, ಕಾಯಕ ದಿನಾಚರಣೆ, ಯುವ ಸಂಸತ್ತು, ಎಚ್.ಎನ್. ಪ್ರಶಸ್ತಿ ಪ್ರದಾನ, ನಾಯಕತ್ವ ಶಿಬಿರ, ಆನ್‍ಲೈನ್ ಕಾರ್ಯಕ್ರಮ, ವಿಜ್ಞಾನ ಸಿರಿ ಮಾಸ ಪತ್ರಿಕೆ, ಎಚ್‍ಎನ್ ಟಿವಿ ಚಾನೆಲ್, ಪುಸ್ತಕ ಬಿಡುಗಡೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಮೂರು ವರ್ಷದಲ್ಲಿ ಮಾಡಿದೆ. ಅದೇರೀತಿ, ಕಲಬುರಗಿ ಜಿಲ್ಲೆಯಲ್ಲಿಯೂ ಪವಾಡ ಬಯಲು, ಬಸವ ಪಂಚಮಿ, ಮೂಢ ನಂಬಿಕೆ ನಿವಾರಿಸುವ ನಿಟ್ಟಿನಲ್ಲಿ ವಿವಿಧ ವಿಷಯಗಳ ಕುರಿತು ಉಪನ್ಯಾಸ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಾ ಬಂದಿದೆ ಎಂದು ರವೀಂದ್ರ ಶಾಬಾದಿ ತಿಳಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here