ಬಿಸಿ ಬಿಸಿ ಸುದ್ದಿ

ಬಸವಕಲ್ಯಾಣದಲ್ಲಿ ಎಂಟನೇ ಬಾರಿ ನಡೆದ ಯಶಸ್ವಿ ಕುರ್ಆನ್ ಪ್ರವಚನ ಕಾರ್ಯಕ್ರಮ

ಬೀದರ್; ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ವತಿಯಿಂದ ಡಿಸೆಂಬರ್ 13,14,15 ಈ ಮೂರು ದಿನಗಳಲ್ಲಿ ಎಂಟನೇ ವಾರ್ಷಿಕ ಕುರ್ಆನ್ ಪ್ರವಚನ ಕಾರ್ಯಕ್ರಮ ಬಹಳ ಅದ್ದೂರಿಯಿಂದ ಅತ್ಯಂತ ಯಶಸ್ವಿಯಾಗಿ ನಡೆಯಿತು.

ದೇಶದ ಪ್ರಗತಿ ಮತ್ತು ನೈತಿಕ ಮೌಲ್ಯಗಳು, ಸಂತೃಪ್ತ ಕುಟುಂಬ, ಯಶಸ್ವಿ ಜೀವನ ಈ ಮೂರು ವಿಷಯಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಪ್ರತಿ ದಿನವೂ ಸುಮಾರು ಆರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸರ್ವಧರ್ಮೀಯ ಬಾಂಧವರು ಭಾಗವಹಿಸಿದರು.

ಬೀದರ್ ಜಿಲ್ಲೆಯ ಅತ್ಯಂತ ಗೌರವಾನ್ವಿತ ಸ್ವಾಮೀಜಿಗಳು, ರಾಜಕೀಯ ಸಾಮಾಜಿಕ ಧಾರ್ಮಿಕ ನೇತಾರರು, ಅಧಿಕಾರಿಗಳು, ಸಾಮಾಜಿಕ ಕಾರ್ಯಕರ್ತರು, PROFESSIONALS, ವಿದ್ಯಾರ್ಥಿಗಳು, ಯುವಕರು, ಜನಸಾಮಾನ್ಯರು ಹೀಗೆ ಸಮಾಜದ ಎಲ್ಲ ಸ್ತರದ ಜನರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಸಂಪನ್ನಗೊಂಡಿತು.

ನಿರಂತರ ಎಂಟು ವರ್ಷಗಳಿಂದ ಸಾವಿರಾರು ಜನರು ನಿರಂತರವಾಗಿ ಕುರ್ಆನ್ ಪ್ರವಚನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ನಿಜವಾಗಿಯೂ ಅಪರೂಪದ ಅನುಭವ ಹಾಗೂ ಕಾರ್ಯಕ್ರಮದ ಜನಪ್ರಿಯತೆಗೆ ಸಾಕ್ಷಿಯಾಗಿತ್ತು.

ಸುಳ್ಳು, ಅಪಪ್ರಚಾರ, ತಪ್ಪು ಕಲ್ಪನೆಗಳು, ವೈಷಮ್ಯ ವ್ಯಾಪಕವಾಗಿರುವ ಸಮಾಜದಲ್ಲಿ ಸತ್ಯವನ್ನು, ವಾಸ್ತವಿಕತೆಯನ್ನು ತಿಳಿಸುವ ಇಂತಹ ಕಾರ್ಯಕ್ರಮಗಳು ನಿರಂತರವಾಗಿ ಎಲ್ಲೆಡೆ ನಡೆಯುತ್ತಲೇ ಇರಬೇಕಾಗಿದೆ ಎಂದು ಮುಖ್ಯ ಪ್ರವಚನಕಾರರಾದ ಮುಹಮ್ಮದ್ ಕುಂಞಿ ತಿಳಿಸಿದರು.

ಸತ್ಯವನ್ನು ತಿಳಿಯುವ, ವಾಸ್ತವಿಕತೆಯನ್ನು ಅರ್ಥ ಮಾಡುವ ಕುತೂಹಲ ಮತ್ತು ಆಸಕ್ತಿ ಜನರಲ್ಲಿ ಖಂಡಿತವಾಗಿಯೂ ಇದೆ ಎಂಬುದಕ್ಕೆ ಕಾರ್ಯಕ್ರಮದಲ್ಲಿ ನಿರಂತರವಾಗಿ ಭಾಗವಹಿಸುತ್ತಿರುವ ಜನಸ್ತೋಮವೇ ಸಾಕ್ಷಿಯಾಗಿತ್ತು. ಕಾರ್ಯಕರ್ತರ ಪ್ರಾಮಾಣಿಕ ಮತ್ತು ಕಠಿಣ ಶ್ರಮ, ಆಧುನಿಕ ಮತ್ತು ಶಿಸ್ತುಬದ್ಧ ಪ್ರಚಾರ, ಅದ್ಭುತ Team work, Professionalism, ವ್ಯಾಪಕ ಜನಸಂಪರ್ಕ, ಮಾಧ್ಯಮ ಮಿತ್ರರ ಪೂರ್ಣ ಸಹಕಾರ ಇವೆಲ್ಲವೂ ಕಾರ್ಯಕ್ರಮದ ಯಶಸ್ಸಿಗೆ ಮುಖ್ಯ ಕಾರಣವಾಗಿದೆ.

ಅದ್ಭುತವಾದ ಮಾದರಿ ಯೋಗ್ಯ ಕಾರ್ಯಕ್ರಮವನ್ನು ಆಯೋಜಿಸಿ ಯಶಸ್ಸುಗೊಳಿಸಲು ಹಗಲಿರುಳು ಶ್ರಮಿಸಿದ ಜಮಾಅತ್ ಕಾರ್ಯಕರ್ತರು, ಸ್ವಾಗತ ಸಮಿತಿ ಸದಸ್ಯರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು ಎಲ್ಲರೂ ಅಭಿನಂದನಾರ್ಹರು. ದಯಾಮಯನಾದ ದೇವನು ಅವರೆಲ್ಲರನ್ನೂ ಅನುಗ್ರಹಿಸಲಿ. ಅವರೆಲ್ಲರ ಮೇಲೆ ದೇವನ ಕರುಣೆ ಮತ್ತು ಕೃಪೆಯಿರಲಿ.ಆಮೀನ್ ಎಂದು ಮುಹಮ್ಮದ್ ಕುಂಞಿ ಆಶೀಸಿದ್ದಾರೆ.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

11 mins ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

16 mins ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

20 mins ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

24 mins ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

27 mins ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

34 mins ago