ಅಸ್ಪೃಶ್ಯತೆ ನಿವಾರಣೆಯಾದಗ ಮಾತ್ರ ಸಮ ಸಮಾಜ ನಿರ್ಮಾಣ ಸಾಧ್ಯ

ಕಮಲಾಪುರ; ತಾಲ್ಲೂಕಿನ ನಾಗುರ್ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ತಡಕಲ್ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಸ್ಫೂರ್ತಿ ಗ್ರಾಮೀಣಭಿವೃದ್ಧಿ ಮತ್ತು ಶಿಕ್ಷಣ ಸೇವಾ ಸಂಸ್ಥೆ ಕಡಗಂಚಿ ಇವರ ಸಂಯುಕ್ತ ಆಶ್ರಯದಲ್ಲಿ ಅಸ್ಪೃಶ್ಯತೆ ನಿರ್ಮೂಲನೆ ಕುರಿತು ವಿಚಾರಗೋಷ್ಠಿ ಹಾಗೂ ಜನ ಜಾಗೃತಿ ಮೂಡಿಸುವ ಬೀದಿ ನಾಟಕ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿ ಪ್ರಸ್ತಾವಿಕವಾಗಿ ಮಾತನಾಡಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಡಾ ಅಮಿತಕುಮಾರ ಕೊಳ್ಳದ, ಅಸ್ಪೃಶ್ಯತೆ ಎನ್ನುವುದು ಒಂದು ಸಮಾಜಕ್ಕೆ ಅಂಟಿಕೊಂಡಿರುವ ಪಿಡುಗು ಇದ್ದ ಹಾಗೆ, ಅಸ್ಪೃಶ್ಯತೆ ನಿವಾರಣೆಯಾಗದೆ ಸಮ ಸಮಾಜ ನಿರ್ಮಾಣ ಮಾಡುವುದು ಅಸಾಧ್ಯ. ಬುದ್ಧ, ಬಸವ ಅಂಬೇಡ್ಕರ್ ಅವರಂತಹ ಮಹಾನ್ ಸಮಾಜ ಸುಧಾರಕರು ಕಂಡ ಕನಸು ಸಮ ಸಮಾಜ ನಿರ್ಮಾಣ ಮಾಡುವದೇ ಆಗಿತ್ತು. ಆದರೆ ಅಂತಹ ಸಮ ಸಮಾಜದ ನಿರ್ಮಾಣಕ್ಕೆ ಈ ಅಸ್ಪೃಶ್ಯತೆ ಒಂದು ಮಾರಕವಾಗಿದ್ದು. ಸಮಾಜದಿಂದತೊಲಗಿಸಲು ನಾವೆಲ್ಲರೂ ಶ್ರಮಿಸಬೇಕೆಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ವಿಠ್ಠಲ್ ಚಿಕಣಿ ಅವರು ಸಹ ಮಾತನಾಡಿ ಬಸವಾದಿ ಶರಣರ, ಸೂಪಿ ಸಂತರು ನಡೆದಾಡಿದನಾಡಿನಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆ ಮೂಲಕ ಸಹೋದರತೆಯಿಂದ ಬದುಕಬೇಕೆಂದು ಹೇಳಿದರು. ಡಾ. ಶಿವಪ್ಪ ಭೂಸನೂರ ಮಾತನಾಡಿ, ಅಸ್ಪೃಶ್ಯತೆ ಎನ್ನುವುದು ಅನಿಷ್ಟ ಪದ್ಧತಿ ಅದನ್ನು ತೊಲಗಿಸಿ ಸ್ವಸ್ಥಸಮಾಜ ನಿರ್ಮಾಣವಾಗಬೇಕೆಂದು ಹೇಳಿದರು.

ಇದೆ ಸಂಧರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು ಸಹ ಮಾತನಾಡಿ ಅಸ್ಪೃಶ್ಯತೆ ಯನ್ನು ತೊಲಗಿಸಿಜಾತಿ ಧರ್ಮ ಎನ್ನದೆ ಎಲ್ಲರು ಒಳ್ಳೆಯ ಭಾಂದವ್ಯ ದಿಂದ್ ಬದುಕಬಹುದು ಎಂದು ಹೇಳಿದರು.

ಈ ಸಂಧರ್ಭದಲ್ಲಿ ಗ್ರಾಮದ ಹಿರಿಯರು ಹಾಗೂ ಮುಖಂಡರು ಪಂಚಾಯತ್ ಸದಸ್ಯರು ಮಾತು ಶಾಲೆಯ ಮುದ್ದು ಮಕ್ಕಳು, ಇದ್ದರು ಇದೆ ಸಂಧರ್ಭದಲ್ಲಿ ಪ್ರಭು ಅಷ್ಟಗಿ ಸ್ವಾಗತ ಮಾಡಿದರು.

ಸಂಸ್ಥೆಯ ಅಧ್ಯಕ್ಷರಾದ ಅಂದಪ್ಪ ಡೋಣಿ ಈ ಕಾರ್ಯಕ್ರಮ ಕುರಿತು ವಂದಿಸಿದರು. ಜೊತೆಗೆ ಅಸ್ಪೃಶ್ಯತೆ ಕುರಿತು ಲೋಹಿಯಾ ಕಲಾ ತಂಡದಿಂದ ಬೀದಿ ನಾಟಕ ಪ್ರದರ್ಶನ ಮಾಡಲಾಯಿತು

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

8 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

10 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

11 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

11 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420