ಶಿಕ್ಷಣದಿಂದಲೇ ಸಮಾಜ ಸುಧಾರಣೆ; ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಡಿಸಿ ಕರೆ

ಕಲಬುರಗಿ: ಶಿಕ್ಷಣವೇ ಶಕ್ತಿ. ಶಿಕ್ಷಣದಿಂದಲೇ ಸಮಾಜ ಸುಧಾರಣೆ . ಹೀಗಾಗಿ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಯ ಜೊತೆಗೆ ಸಾರ್ವಜನಿಕ, ದೀನ, ದಲಿತರಿಗೆ ನೆರವಾಗುವ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಫೌಜಿಯಾ ಡಿ.ತರನ್ನುಮ್ ಕರೆ ನೀಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಭಾನುವಾರ ಪತ್ರಕರ್ತರ ಮಕ್ಕಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಾದವರು ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಮುನ್ನಡೆಯಬೇಕು. ಸರ್ಕಾರಿ, ಖಾಸಗಿ ಸೇವೆ, ಸ್ವಯಂ ಉದ್ಯೋಗ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡಿದರೂ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಅಹರ್ನಿಶಿ ದುಡಿಯಬೇಕು ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿದ್ದ ಶಾಸಕ ಅಲ್ಲಮಪ್ರಭು ಪಾಟೀಲ ಮಾತನಾಡಿ, ಪತ್ರಕರ್ತರಿಗೆ ಜಾತಿಯಿಲ್ಲ. ಪತ್ರಕರ್ತ ಸಮುದಾಯದ ಪ್ರತಿಭಾವಂತ
ಮಕ್ಕಳಿಗೆ ಪುರಸ್ಕಾರ ಮಾಡುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಅಡ್ಡೂರು ಶ್ರೀನಿವಾಸಲು ಮಾತನಾಡಿ, ಮನುಷ್ಯನಿಗೆ ಶಿಕ್ಷಣ ಬಹಳ ಮುಖ್ಯ. ಹಣ, ಅಧಿಕಾರ ಮುಖ್ಯ ಅಲ್ಲ. ಬದುಕಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಗೌರವ ಸಿಗುತ್ತದೆ. ಪ್ರತಿಭಾವಂತರಿಗೆ ಪೆÇ್ರೀತ್ಸಾಹ ಅಗತ್ಯ ಎಂದು ಹೇಳಿದರು.

ಅತಿಥಿ ಉಪನ್ಯಾಸ ನೀಡಿದ ಕಮಲಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ. ಶಾಂತಾ ಅಸ್ಟಿಗೆ ಮಾತನಾಡಿ, ಎಸ್ಎಸ್ಎಲ್ಸಿ ಮತ್ತು ಪಿಯುಸಿ ನಂತರ ನಡು ದಾರಿಯಲ್ಲಿ ನಿಂತ ಅನುಭವ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯೋಚಿಸಿ ದಿಟ್ಟ ಹೆಜ್ಜೆಯನ್ನಿಡಬೇಕು. ಆತ್ಮವಿಶ್ವಾಸ, ಶಿಸ್ತು, ಪರಿಶ್ರಮದಿಂದ ಗುರಿ ಸಾಧಿಸಬೇಕು ಎಂದರು.

ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಡಾ. ಶಿವರಂಜನ ಸತ್ಯಂಪೇಟೆ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ ನಿರೂಪಿಸಿದರು. ಬಾಬುರಾವ ಕೋಬಾಳ ಪ್ರಾರ್ಥಿಸಿದರು. ವೀರೇಂದ್ರ ಕೊಲ್ಲೂರ ವಂದಿಸಿದರು.

ಪದಾಧಿಕಾರಿಗಳಾದ ಅಶೋಕ ಕಪನೂರ, ಬಿ.ವಿ. ಚಕ್ರವರ್ತಿ, ರವೀಂದ್ರ ವಕೀಲ್, ರಾಜು ಕೋಷ್ಟಿ, ಸಂತೋಷ ನಾಡಗಿರಿ, ಮಲ್ಲಿಕಾರ್ಜುನ ಜೋಗ್, ಅರುಣ ಕದಮ್, ರಾಮಕೃಷ್ಣ ಬಡಶೇಷಿ, ಜಯತೀರ್ಥ ಪಾಟೀಲ ಸೇರಿದಂತೆ ಪಾಲಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಭೂಮಿ ಹದವಾಯಿತು ಬುದ್ಧ ಬೀಜವಾದ. ಬಸವಣ್ಣ ಮರವಾದರು. ಅಂಬೇಡ್ಕರ್ ರು ಫಲವಾದರು. ನಾವೆಲ್ಲ ಫಲಾನುಭವಿಗಳಾದೆವು. – ಡಾ. ಶಾಂತಾ ಅಸ್ಟಿಗೆ, ಪ್ರಾಧ್ಯಾಪಕರು, ಕಮಲಾಪುರ

emedialine

Recent Posts

ಕ.ಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಪ್ರತ್ಯೇಕ ಸಚಿವಾಲಯ ಶೀಘ್ರ ಅಸ್ತಿತ್ವಕ್ಕೆ; ಸಿದ್ದರಾಮಯ್ಯ

ರಾಯಚೂರು; ಕಲ್ಯಾಣ ಕರ್ನಾಟಕಕ್ಕೆ 371ನೇ ಜೇ ಕಲಂ ಜಾರಿಗೆಗೆ ದಶಕಗಳಿಂದ ಹೋರಾಟ ನಡೆಸಿದ ಎಳು ಜಿಲ್ಲೆಗಳ ಸಹಸ್ರಾರು ಹೋರಾಟಗಾರರ ಪರವಾಗಿ…

6 mins ago

ಎಲೇಕ್ಷನ್’ನಲ್ಲಿ ಗಿಮಿಕ್ ಮಾಡಿ ಮತಪಡೆದುಕೊಳ್ಳುವುದು ಮಾತ್ರ ಗೊತ್ತು; ಮಣಿಕಂಠ

ಎಂ.ಡಿ ಮಶಾಖ ಚಿತ್ತಾಪುರ ಚಿತ್ತಾಪುರ; ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಎಲೇಕ್ಷನ್ ಬಂದಾಗ ಗಿಮಿಕ್ ಮಾಡಿ ಮತ ಪಡೆದುಕೊಳ್ಳುವುದು ಮಾತ್ರ…

1 hour ago

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

5 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

11 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

21 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420