ಬಿಸಿ ಬಿಸಿ ಸುದ್ದಿ

ಕ್ರೀಡೆಗೆ ಸದೃಢ ಮನಸ್ಸು ಮತ್ತು ದೈಹಿಕ ಪರಿಶ್ರಮ ಮುಖ್ಯ

ಕಲಬುರಗಿ: ಪ್ರತಿಯೊಬ್ಬ ವ್ಯಕ್ತಿಯು ಉತ್ತಮ ವ್ಯಕ್ತಿತ್ವ ಮತ್ತು ಸಾಧನೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ಸಾಧ್ಯವಿದೆ. ಮಾನಸಿಕ ಸ್ಥೈರ್ಯ ಮತ್ತು ಸದೃಢ ಪರಿಶ್ರಮದಿಂದ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು. ಕ್ರೀಡೆಯಲ್ಲಿ ಸದೃಢ ಮನಸ್ಸು ಮತ್ತು ದೈಹಿಕ ಪರಿಶ್ರಮ ಮುಖ್ಯವಾಗಿದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಅಭಿಪ್ರಾಯಪಟ್ಟರು.

ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಪ್ರಸಕ್ತ ಶೈಕ್ಷಣಿಕ ಸಾಲಿನ 42ನೇ ಅಂತರ್ ಮಹಾವಿದ್ಯಾಲಯಗಳ (ಪುರುಷ ಮತ್ತು ಮಹಿಳಾ) ಕ್ರೀಡಾ ಕೂಟವನ್ನು ವಿಶ್ವವಿದ್ಯಾಲಯ ಕ್ರೀಡಾಂಗಣದಲ್ಲಿ ಕ್ರೀಡಾಧ್ವಜರೋಹಣ ನೆರವೇರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳಿಗೆ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಸಂತೋಷ ಮತ್ತು ತೃಪ್ತಿದಾಯಕ ಜೀವನಾನುಭವದ ಪಾಠವನ್ನು ಕಲಿಸುತ್ತದೆ. ಸೋಲು ಗೆಲುವಿನ ಹಾಗೂ ಬಹುಮಾನದ ಬಗೆ ಚಿಂತಿಸುವ ಅಗತ್ಯವಿಲ್ಲ. ಕ್ರೀಡೆಗಳಲ್ಲಿ ಶ್ರದ್ಧೆ ಮತ್ತು ಕ್ರಿಯಾಶೀಲ ಮನಸ್ಸು ಮುಖ್ಯವಾಗಿರುತ್ತದೆ. ಶಿಕ್ಷಣ ಸಂಸ್ಥೆಗಳಲ್ಲಿನ ಕ್ರೀಡಾ ಮಾರ್ಗದರ್ಶಕರು ವಿದ್ಯಾರ್ಥಿಗಳಿಗೆ ಉತ್ತಮ ಸ್ಫೂರ್ತಿ ಮತ್ತು ಪ್ರೇರಣೆ ನೀಡಿದರೆ ಭವಿಷ್ಯದ ಕ್ರೀಡಾಪಟುಗಳನ್ನು ರೂಪಿಸಬಹುದು. ಗುಲಬರ್ಗಾ ವಿಶ್ವವಿದ್ಯಾಲಯದ ಅಧೀನದಲ್ಲಿರುವ ಕಾಲೇಜುಗಳ ಕ್ರೀಡಾ ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕಿದೆ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ಎಂದು ಹೇಳುವ ಮೂಲಕ ಶುಭ ಹಾರೈಸಿದರು.

ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್. ಜಿ. ಕಣ್ಣೂರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಯುವಕರು ಅಧ್ಯಯನದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಬಗೆ ಆಸಕ್ತಿ ಬೆಳೆಸಿಕೊಳ್ಳಬೇಕು. ದೈಹಿಕ ಶಿಕ್ಷಣ ಅಧ್ಯಯನ ಜೊತೆಗೆ ಕ್ರೀಡಾಕೂಟಗಳಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ಅತ್ಯುತ್ತಮ ಸಾಧನೆ ಮಾಡಬಹುದಾಗಿದೆ. ಕ್ರೀಡಾ ಕಾರ್ಯಗಳಲ್ಲಿ ಸದಾ ಕ್ರೀಯಾಶೀಲರಾದರೆ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದರು.

ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಕ್ರೀಡಾಪಟುಗಳು ಕ್ರೀಡಾಂಗಣದಲ್ಲಿ ಕ್ರೀಡಾಜ್ಯೋತಿ ಪ್ರದರ್ಶಿಸುವ ಮೂಲಕ ಕುಲಪತಿಗಳಿಗೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಅತಿಥಿ ಗಣ್ಯರು ಶಾಂತಿದ್ಯೋತಕವಾಗಿ ಪಾರಿವಾಳಗಳನ್ನು ಹಾರಿಬಿಟ್ಟರು. ದೈಹಿಕ ಶಿಕ್ಷಣ ವಿಭಾಗದ ಎಂ.ಪಿ.ಎಡ್ ವಿದ್ಯಾರ್ಥಿನಿ ನಾಗೇಂದ್ರಮ್ಮ ಕ್ರೀಡಾಪ್ರತಿಜ್ಞೆ ಬೋಧಿಸಿದರು. ವಿಶ್ವವಿದ್ಯಾಲಯದ ಪ್ರೌಢಶಾಲೆಯ ವಿದ್ಯಾರ್ಥಿಗಳು ಬ್ಯಾಂಡ್ ಬಾರಿಸುವ ಮೂಲಕ ಸ್ಪರ್ಧಿಗಳ ಕ್ರೀಡಾ ಪಥಸಂಚಲನಕ್ಕೆ ಸಾಥ್ ನೀಡಿದರು.

ಮುಖ್ಯ ಅತಿಥಿಗಳಾಗಿ ಗುಲಬರ್ಗಾ ವಿಶ್ವವಿದ್ಯಾಲಯದ ಶಿಕ್ಷಣ ನಿಕಾಯದ ಡೀನ್ ಪ್ರೊ. ಹೂವಿನಬಾವಿ ಬಾಬಣ್ಣ, ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಪ್ರೊ. ಎ. ಎಸ್. ಹೊಸಮನಿ, ಅಂತರಾಷ್ಟ್ರೀಯ ಕ್ರೀಡಾಪಟು ತವಡೇಜಿ, ಸ್ಥಳೀಯ ಅಭಿಯಂತರ ಜಯಪ್ರಕಾಶ್ ಕರ್ಜಗಿ ಉಪಸ್ಥಿತರಿದ್ದರು.

ವಿಶ್ವವಿದ್ಯಾಲಯ ಅಧೀನದ ಪದವಿ ಕಾಲೇಜುಗಳ ನಿರ್ದೇಶಕರು ಹಾಗೂ ಕ್ರೀಡಾ ತಂಡಗಳು, ದೈಹಿಕ ಶಿಕ್ಷಣ ವಿಭಾಗದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ, ದೈಹಿಕ ಶಿಕ್ಷಣ ವಿಭಾಗದ ಸಂಯೋಜಕ ಹಾಗೂ ಪ್ರಾಂಶುಪಾಲ ಡಾ. ಹನುಮಂತ ಜಂಗೆ ವಂದಿಸಿದರು. ಗುಲಬರ್ಗಾ ನ್ಯಾಯಾಲಯದ ಸುನಿಲ್ ಚಾಂದೆ ಪ್ರಾರ್ಥಿಸಿದರು. ಸೇಡಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಜಗನ್ನಾಥ ಪಟ್ಟಣಕರ್ ಕಾರ್ಯಕ್ರಮ ನಿರ್ವಹಿಸಿದರು.

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 1981-82ನೇ ಶೈಕ್ಷಣಿಕ ಸಾಲಿನಲ್ಲಿ ನಾನು 24 ವರ್ಷದ ವಿದ್ಯಾರ್ಥಿಯಾಗಿ ಅಧ್ಯಯನ ಮಾಡುತ್ತಿದ್ದ ಸಂದರ್ಭದಲ್ಲಿ ಇದೇ ಕ್ರೀಡಾಂಗಣದಲ್ಲಿ ಅಭ್ಯಾಸ ಮಾಡಿ ಅಥ್ಲೆಟಿಕ್ ಚಾಂಪಿಯನ್ನಾಗಿದ್ದೆ. ಕ್ರೀಡೆಯಲ್ಲಿ ಅಸಾಧ್ಯವನ್ನು ಸಾಧಿಸಬಹುದು. ಅದಕ್ಕೆ ಸದೃಢ ಮನಸ್ಸು ಮತ್ತು ಸತತ ಪರಿಶ್ರಮ ಬೇಕಿದೆ. ಯುವಕರು ಸಾಕಷ್ಟು ಕ್ರೀಡಾ ಚಟುವಟಿಕೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರೆ ಸಾಧನೆ ನಿಮ್ಮದಾಗಲಿದೆ.- ಪ್ರೊ. ದಯಾನಂದ ಅಗಸರ, ಕುಲಪತಿ, ಗುಲಬರ್ಗಾ ವಿಶ್ವವಿದ್ಯಾಲಯ.
emedialine

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…

13 mins ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

13 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

13 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

15 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

15 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

15 hours ago