ಶಹಾಬಾದ: ನಗರದಲ್ಲಿ ಅತಿಥಿ ಉಪನ್ಯಾಸಕರು ಸೇವಾ ಖಾಯಂಮಾತಿ ಮಾಡುವಂತೆ ಒತ್ತಾಯಿಸಿ 24 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳಕ್ಕೆ ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ್ ಮರತೂರ ಹಾಗೂ ಮುಖಂಡ ಅಜಿತ್ಕುಮಾರ ಪಾಟೀಲ ಆಗಮಿಸಿ ಅತಿಥಿ ಉಪನ್ಯಾಸಕರ ಸಮಸ್ಯೆಯ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಮಾತನಾಡಿ, ನಮ್ಮ ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 11,000 ಕ್ಕಿಂತ ಅಧಿಕ ಅತಿಥಿ ಉಪನ್ಯಾಸಕರು ಹತ್ತಾರು ವರ್ಷಗಳಿಂದ ಅತ್ಯಂತ ಕಡಿಮೆ ಗೌರವ ಭತ್ಯೆ ಪಡೆದು ಸೇವೆ ಸಲ್ಲಿಸುತ್ತಾ ಬಂದಿರುತ್ತಾರೆ. ಇವರಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ವಯೋಮಿತಿ ಮೀರಿದ/ಮೀರುತ್ತಿರುವವರು ಇದ್ದಾರೆ.
ಉಪನ್ಯಾಸಕರಿಗೆ ಸೇವಾ ಖಾಯಂಮಾತಿ ಇಲ್ಲದೆ ನಮ್ಮೆಲ್ಲರ ಬದುಕು ಅಭದ್ರತೆಯಲ್ಲಿದೆ.ಅತಿಥಿ ಉಪನ್ಯಾಸಕ, ತಾತ್ಕಾಲಿಕ ಎಂಬುದು ಅವೈಜ್ಞಾನಿಕ ಪದ್ಧತಿ ಉನ್ನತ ಶಿಕ್ಷಣ ವ್ಯವಸ್ಥೆಗೆ ಮತ್ತು ಕಾಲೇಜುಗಳ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.
ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ವೃತ್ತಿಯಲ್ಲಿ ಸಾಕಷ್ಟು ಪ್ರತಿಭಾವಂತ, ಅರ್ಹರು ಮತ್ತು ಬೋಧನಾ ಕೌಶಲ್ಯವುಳ್ಳ ಅಭ್ಯರ್ಥಿಗಳು ಇದ್ದರೂ ಸಹ ಅವರು ತಮ್ಮ ಸಾಮಥ್ರ್ಯಕ್ಕೆ ತಕ್ಕ ಹಾಗೆ ಶೈಕ್ಷಣಿಕ ಚಟುವಟಿಕೆಯಲ್ಲಿ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿ ಇದೆ. ಜತೆಗೆ ಅತ್ಯಂತ ಕಡಿಮೆ ವೇತನ ಸಮಯಕ್ಕೆ ಸರಿಯಾಗಿ ಗೌರವಧನ ಪಾವತಿಯಾಗದಿರುವುದರಿಂದ ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದೆವೆ.ಕೂಡಲೇ ನಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ಶಿವಾನಂದ ಪಾಟೀಲ್ ಮರತೂರ ಅತಿಥಿ ಉಪನ್ಯಾಸಕರ ಸಮಸ್ಯೆಯ ಅಹವಾಲು ಸ್ವೀಕರಿಸಿ, ನಿಮ್ಮ ಬೇಡಿಕೆಗಳನ್ನು ಸರ್ಕಾರದ ಉನ್ನತ ವ್ಯಕ್ತಿಗಳ ಗಮನಕ್ಕೆ ತರುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಸಂಘದ ಅಧ್ಯಕ್ಷಚಂದ್ರಕಾಂತ ಶಿರೋಣಿ,ಡಾ.ರವೀಂದ್ರ ನರೋಣಿ, ಡಾ.ಜ್ಞಾನಮಿತ್ರಮಡಾ.ಮಮತಾ ಪಾಟೀಲ,ಡಾಬಾಬುರಾಯ ಸಾಗರ,ಡಾ.ಅನೀಲಕುಮಾರ ಕುದನೂರ,ಡಾಪ್ರೇಮಸಿಂಗ,ನಾಗವೇಣಿ ಹಿರೇಮಠ,ಡಾ.ದಯಾನಂದ, ಸುಧಾಕರ ದೇಶಪಾಂಡೆ, ಡಾ.ನಾಗೇಂದ್ರಪ್ಪ, ಡಾಗುರುರಾಜ ಕುಲಕರ್ಣಿ,ಡಾ.ಸುರೇಖಾ ಇತರರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…