ಬಿಸಿ ಬಿಸಿ ಸುದ್ದಿ

ನಾಡಿಗೆ ಜೇವರ್ಗಿ ಕೊಡುಗೆ ಅಪಾರ, ಅಭಿವೃದ್ಧಿಯಾಗಲಿ

ಕಲಬುರಗಿ: ನಾಡಿಗೆ ಮೊದಲ ವ್ಯಾಕರಣ ಗ್ರಂಥ ‘ಶಬ್ದಮಣಿದರ್ಪಣ’, ಮುಖ್ಯಮಂತ್ರಿ ನೀಡಿದ ನೆಲ ಜೇವರ್ಗಿಯಾಗಿದೆ. ಶರಣಬಸವೇಶ್ವರರು, ಕಡಿಕೋಳ ಮಡಿವಾಳೇಶ್ವರ, ಷಣ್ಮುಖ ಶಿವಯೋಗಿ ಅಂತಹ ಮಹಾನ ಶರಣರು, ತತ್ವಪದಕಾರರು ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಆದರೆ ಶೈಕ್ಷಣಿಕ, ಅಭಿವೃದ್ಧಿ ದೃಷ್ಟಿಯಿಂದ ಇನ್ನೂ ಹಿಂದುಳಿದಿದ್ದು, ಅಭಿವೃದ್ಧಿಗೆ ನೈಜ ಕಾಳಜಿ ವಹಿಸಿ ಶ್ರಮಿಸಬೇಕಾಗಿದೆ ಎಂದು ಕಡಕೋಳದ ಪೂಜ್ಯ ಡಾ.ರುದ್ರಮುನಿ ಶಿವಾಚಾರ್ಯರು ಮಾರ್ಮಿಕವಾಗಿ ಹೇಳಿದರು.

ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ತಾಲೂಕಿನ ಚಿಗರಹಳ್ಳಿಯ ಶ್ರೀ ಜಗದ್ಗುರು ಮರುಳ ಶಂಕರ ದೇವರ ಗುರುಪೀಠದ ಸಮುದಾಯ ಭವನದಲ್ಲಿ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರದ ಮೂರನೇ ದಿನವಾದ ಬುಧವಾರ ಜರುಗಿದ ‘ಕನ್ನಡ ನಾಡಿಗೆ ಜೇವರ್ಗಿ ಕೊಡುಗೆ’ ಎಂಬ ವಿಷಯದ ಕುರಿತು ಏರ್ಪಡಿಸಲಾಗಿದ್ದ ವಿಶೇಷ ಉಪನ್ಯಾಸದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ವಿಶೇಷ ಉಪನ್ಯಾಸ ನೀಡಿದ ಯಡ್ರಾಮಿ ಕದಂಬ ಪಿಯು ಕಾಲೇಜು ಮತ್ತು ಜೇವರ್ಗಿಯ ನರೇಂದ್ರ ಪಿಯ ಕಾಲೇಜಿನ ಪ್ರಾಚಾರ್ಯ ದೇವಿಂದ್ರ ಬಿ.ಗುಡುರ್, ನಮ್ಮ ಜೇವರ್ಗಿ ನೆಲ ಪುಣ್ಯಭೂಮಿಯಾಗಿದೆ. ‘ವಚನ ಸಾಹಿತ್ಯದ ಕೊನೆಯ ಕೊಂಡಿ’ಯಾಗಿ ಷಣ್ಮುಖ ಶಿವಯೋಗಿಗಗಳು ವಚನಗಳು, ಕಡಕೋಳ ಮಡಿವಾಳೇಶ್ವರರು ಮತ್ತು ಚನ್ನೂರಿನ ಜಲಾಲಸಾಬ್ ಅವರ ತತ್ವಪದಗಳು ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸುವಲ್ಲಿ ಪ್ರಮುಖವಾದವು. ಶರಣಬಸವೇಶ್ವರರು ದಾಸೋಹಕ್ಕೆ ಹೊಷ ಭಾಷ್ಯ ಬರೆದಿದ್ದಾರೆ ಎಂದರು.

ವಿಶ್ವರಾಧ್ಯ, ಮಲ್ಲಾರಾಧ್ಯ, ಕೋಳಕುರ ಸಿದ್ಧಬಸವೇಶ್ವರರು, ಆಧ್ಯಾತ್ಮಿಕತೆ ಮೇರು ವ್ಯಕ್ತಿಗಳು. ಸೊನ್ನದ ದಾಸೋಹ ಮಠ, ಯಡ್ರಾಮಿ, ನೆಲೋಗಿ, ಚಿಗರಹಳ್ಳಿ ಮಠ ಸೇರಿದಂದ ತಾಲೂಕಿನಲ್ಲಿ ಅನೇಕ ಮಠ-ಮಾನ್ಯಗಳು, ದಾರ್ಮಿಕ ಸಂಸ್ಥೆಗಳು ಕೊಡುಗೆ ನೀಡಿವೆ. ಸರ್ದಾರ ಶರಣಗೌಡ ಇನಾಮದಾರ್ ಅವರು ದೇಶದ ಸ್ವಾತಂತ್ರ್ಯಕ್ಕೆ ಹೋರಾಡಿದ್ದಾರೆ. ಸನ್ಮಾನ್ಯ ಧರ್ಮಸಿಂಗ ಅವರು ಮುಖ್ಯಮಂತ್ರಯಾಗಿ ಜೇವರ್ಗಿ ಕೀರ್ತಿಯನ್ನು ಹೆಚ್ಚಿಸಿದ್ದಾರೆ ಎಂದು ತಾಲೂಕಿನ ಸಾಹಿತ್ಯ, ಧಾರ್ಮಿಕ, ಸಾಮಾಜಿಕ, ರಾಜಕೀಯ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಅಂಕಿ-ಅಂಶಗಳ ಸಹಿತ ವಿವರಿಸಿದರು.

ಕಾರ್ಯಕ್ರಮದಲ್ಲಿ ಪರಮ ಪೂಜ್ಯ ಶ್ರೀ ಸಿದ್ದಬಸವ ಕಬೀರ ಸ್ವಾಮೀಜಿ, ಕಾಲೇಜಿನ ಪ್ರಾಚಾರ್ಯ ಮೊಹ್ಮದ್ ಅಲ್ಲಾಉದ್ದೀನ್ ಸಾಗರ, ಉಪನ್ಯಾಸಕರಾದ ರವೀಂದ್ರಕುಮಾರ ಬಟಗೇರಿ, ರಂಜಿತಾ ಠಾಕೂರ, ಸಮೀನಾ ಬೇಗಂ, ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ ಎಚ್.ಬಿ.ಪಾಟೀಲ, ಪ್ರ.ದ.ಸ ನೇಸರ ಎಂ.ಬೀಳಗಿಮಠ, ಯಡ್ರಾಮಿ ಕದಂಬ ಪಿಯು ಕಾಲೇಜಿನ ಉಪನ್ಯಾಸಕ ಸಿದ್ರಾಮಯ್ಯ ಮಠಪತಿ ಹಾಗೂ ಎನ್.ಎಸ್.ಎಸ್ ಸ್ವಯಂ ಸೇವಕರು ಪಾಲ್ಗೊಂಡಿದ್ದರು.

emedialine

Recent Posts

ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿ

ಶಹಾಬಾದ: ಕ್ರೀಡೆಗಳು ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಖುಷಿಯಿಂದ ಆಟವಾಡಿ ಎಂದು ತಹಸೀಲ್ದಾರ ಜಗದೀಶ ಚೌರ್ ಹೇಳಿದರು. ಅವರು…

9 hours ago

ಪಾಲಿಕೆ ಸದಸ್ಯ ಸಚಿನ್ ಶಿರವಾಳಗೆ ಭೀಮನಗೌಡ ಪರಗೊಂಡ ಸನ್ಮಾನ

ಕಲಬುರಗಿ: ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಮಹಾನಗರದ ವಿದ್ಯಾನಗರ ವಾರ್ಡ್ ದ ಮಹಾನಗರ ಪಾಲಿಕೆಯ ಸದಸ್ಯ ಆಗಿರುವ ಸಚಿನ್ ಶಿರವಾಳ ಅವರು…

10 hours ago

ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ಡಾ. ಶರಣಪ್ಪ ಎಸ್.ಡಿ ನೇಮಕ

ಕಲಬುರಗಿ: 2009 ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಡಾ. ಶರಣಪ್ಪ ಎಸ್.ಡಿ ಅವರು ಕಲಬುರಗಿ ನೂತನ ಪೊಲೀಸ್ ಆಯುಕ್ತರಾಗಿ ನಿಯೋಕ್ತಗೊಂಡಿದ್ದಾರೆ.…

11 hours ago

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

13 hours ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

13 hours ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420