ಕಲಬುರಗಿ: ಮನುಷ್ಯ ಇಂದಿನ ಯಾಂತ್ರಿಕ ಯುಗದಲ್ಲಿ ತನ್ನ ನೈತಿಕ ಮೌಲ್ಯಗಳನ್ನು ಕಳೆದು ಕೊಳ್ಳುತಿರುವನು, ವಿದ್ಯಾರ್ಥಿಗಳು ಈ ಯಾಂತ್ರಿಕ ಯುಗದಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಮುಖ್ಯ ಎಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಕಾಲೇಜಿನ ಹಿಂದಿ ಮತ್ತು ಕನ್ನಡ ವಿಭಾಗದವರು ಹಮ್ಮಿಕೊಂಡ “ನೈತಿಕ ಮೌಲ್ಯಗಳು” ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಡಾ. ಜಯಶ್ರೀ ರೆಡ್ಡಿ ಅವರು ಮಾತನಾಡಿದರು.
ಮುಂದುವರೆದು ಇಂದಿನ ಯುಗದಲ್ಲಿ ಎಲ್ಲರೂ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವುದು ಮುಖ್ಯ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಅವರು ಮಾನವೀಯ ಮತ್ತು ನೈತಿಕ ಮೌಲ್ಯಗಳ ಕುರಿತು ಮಾತನಾಡಿದರು.
ಅತಿಥಿಗಳ ಪರಿಚಯ ಮತ್ತು ಸ್ವಾಗತವನ್ನು ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಪ್ರೇಮಚಂದ ಚವ್ಹಾಣ ಅವರು ಮಾಡಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ನಾಗೇಂದ್ರ ಮಸುತಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಡಾ. ದಾನಮ್ಮ ಬಿರಾದಾರ ಅವರು ಕಾರ್ಯಕ್ರಮವನ್ನು ನಿರ್ವಹಿಸಿದರು. ಶ್ರೀಮತಿ ಕವಿತಾ ಠಾಕೂರ ಅವರು ವಂದಿಸಿದರು. ಕುಮಾರಿ. ಶೃತಿ ಕುಲಕರ್ಣಿ ಅವರು ಪ್ರಾರ್ಥನೆ ಗೀತೆ ಹಾಡಿದರು.
ಕಾರ್ಯಕ್ರಮದಲ್ಲಿ ಡಾ. ಮಹೇಶ್ ಗಂವ್ಹಾರ, ಡಾ. ಸುಭಾಷ್ ಡಿ. ಡಾ. ಜ್ಯೋತಿ ಪ್ರಕಾಶ್. ಡಾ. ರೇಣುಕಾ ಎಚ. ಶರಣಮ್ಮ ಕುಪ್ಪಿ. ಶಿವಲೀಲಾ ಡಿ. ಸುಷ್ಮಾ ಕುಲಕರ್ಣಿ. ಕವಿತಾ ಅಶೋಕ್. ಮೇಘನಾ. ಡಾ. ನಾಗರತ್ನ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…