ಕಲಬುರಗಿ; ಸಾಲ ಪಾವತಿಸುವಂತೆ ರೈತರಿಗೆ ಬ್ಯಾಂಕ್ ಗಳಿಂದ ನೋಟಿಸ್

ಕಲಬುರಗಿ: ಬರಗಾಲ ಸಂಕಷ್ಟ ಎದರಿಸುತ್ತಿರುವ ಕಲಬುರಗಿ ಜಿಲ್ಲೆಯ ರೈತರಿಗೆ ರಾಷ್ಟ್ರೀಕೃತ ಬ್ಯಾಂಕುಗಳು ರೈತರಿಗೆ ಸಾಲ ವಸುಲಾತಿಗಾಗಿ ನೋಟಿಸ್ ಕೊಡುವುದು ನಿಲ್ಲಿಸಿ ಕೇಂದ್ರ ಮತ್ತು ರಾಜ್ಯ ಸರಕಾರ ಜಿಲ್ಲಾಡಳಿತ ರೈತರ ನೆರವಿಗೆ ಬರಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘ ಆಗ್ರಹಿಸಿದೆ.

ಕಲಬುರಗಿ ಜಿಲ್ಲೆಯ ಬರಗಾಲ ಬರಪಿಡಿತ ಪ್ರದೇಶ ವೆಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ ಬರಗಾಲದ ಬಗ್ಗೆ ಲೆಕ್ಕಿಸದೆ ಸಾಲ ವಸುಲಾತಿಗೆ ಮುಂದಾಗಿರುವುದು ಅನ್ಯಾಯ.  ಸಾಲ ವಸುಲಾತಿ ಮಾಡುವುದು ರೈತರ ಬೆನ್ನಿಗೆ ಚೂರಿ ಹಾಕಿ ದಂತೆ. ರೈತರ ಸಾಲ ಮನ್ನಾ ಮಾಡುವ ಬಗ್ಗೆ ಕೇಂದ್ರ ಸರಕಾರ ಮಿನಾಮೇಶ ಎಣಿಸುತ್ತಿದ್ದು, ತಕ್ಷಣ ರೈತರ  ಬೆಳೆ ಸಾಲ ಮನ್ನಾ ಮಾಡಬೇಕೆಂದು ಸಂಘದ ಜಿಲ್ಲಾ ಅಧ್ಯಕ್ಷರಾದ ಶರಣಬಸಪ್ಪ ಮಮಶೇಟ್ಟಿ ಆಗ್ರಹಿಸಿದ್ದಾರೆ.

ಕಮಲಾಪುರ, ಚಿಂಚೋಳಿ, ಕಾಳಗಿ, ಶಹಾಬಾದ, ಚಿತ್ತಾಪುರ ಸೇರಿದಂತೆ ಬಹುತೇಕ ತಾಲ್ಲೂಕುಗಳ ರೈತರಿಗೆ ರಾಷ್ಟ್ರೀಕೃತ ಬ್ಯಾಂಕ್ ಗಳು ನೋಟಿಸ್ ನೀಡಿದ ಅವರು ವಾರ್ಷಿಕ 12% ಬಡ್ಡಿ ಪಾವತಿಸಬೇಕು ಅಲ್ಲದೇ ಸಾಲಗಳ ಸೂಚನೆಗಳಂತೆ ಕಾಲಕಾಲಕ್ಕೆ ನಿಗದಿಪಡಿಸಿರುವ ಬಡ್ಡಿದರವನ್ನು ಪಾವತಿಸಬೇಕು. ನೋಟಿಸ್ ತಲುಪಿದ 15 ದಿನಗಳಲ್ಲಿ ಸ್ಪಂದಿಸದಿದ್ದೇರೆ ನೋಟಿಸ್ ಗೆ ಒಪ್ಪಿ ನೀಡಿರುವುದಾಗಿ ಭಾವಿಸುವುದಾಗಿ ನೋಟಿಸ್ ನಲ್ಲಿ ರೈತರಿಗೆ ಸೂಚನೆ ನೀಡಲಾಗುತ್ತಿದೆ.

ಬೆಳೆದ ಬೆಳೆಗೆ ಬೆಲೆ ಇಲ್ಲದಿರುವುದರಿಂದ ಸಾಲದ ಸುಳುವಿನಲ್ಲಿ ಒದ್ದಾಡುವಂತಾಗಿದೆ ಸಾಲದ ಭಾದೆ ತಾಳದೆ ಜಿಗುಪ್ಸೆ ಗೊಂಡು ರೈತರ ಆತ್ಮಹತ್ಯೆಯ ಪ್ರಕರಣಗಳು ದಿನೆ ದಿನೆ ಹೆಚ್ಚಾಗುತ್ತಿವೆ. ಪ್ರತಿ ವರ್ಷವೂ ರೈತರ ಕೃಷಿ ಚಟುವಟಿಗಳು ಕಮ್ಮಿಯಾಗುತ್ತಿದ್ದು, ಅನ್ನದಾತರಿಗೆ ಉಳಿಗಾಲ ವಿಲ್ಲ ದಂತ ಆಗಿದೆ. ರೈತರ ಆರ್ಥಿಕ ಪರಿಸ್ಥಿತಿ ನೆಲ ಕಚ್ಚುತ್ತಿದೆ. ರೈತರ ಆರ್ಥಿಕ ಪರಿಸ್ಥಿತಿ ಬಲಪಡಿಸುವ ನಿಟ್ಟಿನಲ್ಲಿ ಹೇಳಿಕೊಂಡ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಬರಗಾಲದಿಂದಾಗಿ ಸಂಕಷ್ಟ ಎದುರಿಸುತ್ತಿರುವ ಅನ್ನದಾತರಿಗೆ ಸಾಲ ವಸುಲಾತಿ ನೋಟಿಸ್ ಕೊಡುತ್ತಿರುವ ರಾಷ್ಟ್ರೀಕೃತ ಬ್ಯಾಂಕ್ ನಿತಿಗೆ ಸರಕಾರ ಮಧ್ಯ  ಪ್ರವೇಶಿಸಿ ರೈತರ ನೆರವಿಗೆ ಬರಬೇಕೆಂದು ಸಂಘದ ಮುಖಂಡರು ಆಗ್ರಹವಾಗಿದೆ.

emedialine

Recent Posts

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

2 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

6 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

6 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

9 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

20 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

22 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420