ಕಲಬುರಗಿ: ತನ್ನ ತಾಯಿಯ ಸಾವಿಗೆ ಕಾರಣಕರ್ತನಾದವನ್ನು ಶೀಘ್ರದಲ್ಲಿ ಹುಡುಕಿ ಎಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ ಅವರು ಶುಕ್ರವಾರ ಖರ್ಗೆ ಪೆಟ್ರೋಲ್ ಬಂಕ್ ರಸ್ತೆಯಲ್ಲಿರುವ ಟೋಯೋಟಾ ಶೋರಮ್ ಹತ್ತಿರದ ತಾಯಿ ಅಪಘಾತ ಸ್ಥಳಕ್ಕೆ ಭೇಟಿ ನೀಡಿ ಸಂಚಾರಿ ಪೊಲೀಸರ ತನಿಖೆಯ ಕುರಿತು ಚರ್ಚೆ ನಡೆಸಿದರು.
ಡಿಸೆಂಬರ್ 13 ರಂದು ರಸ್ತೆ ಧಾಟುವಾಗ ಎಂಎಲ್ಸಿಯವರ ತಾಯಿ ಸುಮಿತ್ರಾಬಾಯಿ ಶಾಮರಾವ್ ಅರಳಿ (75) ಸಂಜೆ 6:39 ಗಂಟೆಗೆ ಅತಿ ವೇಗವಾಗಿ ಅಲಕ್ಷತನದಿಂದ ಬೈಕ್ ಸವಾರ ಡಿಕ್ಕಿ ಹೊಡೆದು ಪರಿಣಾಮ ಸಾವನಪ್ಪಿದರು. ಡಿಕ್ಕಿ ಹೊಡೆದು ಸವಾರ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೇರೆಯಾಗಿದೆ.
ತಲೆ ಮರೆಸಿಕೊಂಡ ಸವಾರನ ಪತ್ತೆಗೆ ಆಯುಕ್ತರು ವಿಶೇಷ ತಂಡ ರಚಿಸಿದ್ದಾರೆ. ಸಣ್ಣ ಸುಳಿವು ಸಿಗುತ್ತಿಲ್ಲ, ಸ್ವಲ್ಪ ಸುಳಿಯು ಸಿಕ್ಕರೇ ಆರೋಪಿ ಬಂಧಿಸಲಾಗುವುದು ಘಟನೆ ಬಗ್ಗೆ ಸುಕ್ಷ್ಮವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ತನಿಖಾ ತಂಡದ ಪೊಲೀಸ್ ಅಧಿಕಾರಿ ಖಾಜಾ ಹುಸೇನ್ ತಿಳಿಸಿದರು.
ಘಟನೆ ನಡೆದು 10 ದಿನ ಕಳೆದರು ತಾಯಿಯ ಸಾವಿಗೆ ಕಾರಣನಾದವನ್ನು ಪತ್ತೆ ಹಚ್ಚುವಲಿ ಪೊಲೀಸ್ ಇಲಾಖೆ ವಿಫಲವಾಗಿರುವುದು ಮೇಲ್ನೊಟಕ್ಕೆ ಕಾಣುತ್ತಿದ್ದು, ಡಿಕ್ಕಿ ಹೊಡೆದು ಪರಾರಿಯಾಗಿರುವ ಬೈಕ್ ಸವಾರನ ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ಕಾರ್ಯಾವೈಖರಿಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಆದಷ್ಟು ಶೀಘ್ರ ತನಿಖೆ ಪೂರ್ಣಗೊಳ್ಳಿಸಿ ತಲೆ ಮರೆಸಿಕೊಂಡಿರುವ ಬೈಕ್ ಸವಾರನ ಪತ್ತೆ ಹಚ್ಚಿ ಎಂದು ಬೀದರ್ ಗೆ ವಾಪಸ್ ತೆರಳಿದರು.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಸಂಚಾರಿ ಪೊಲೀಸ್ ಠಾಣೆಯ ಸಿಪಿಐ ಖಾಜಾ ಹುಸೇನ್ ತನಿಖಾ ತಂಡದ ಸಿಬ್ಬಂದಿಗಳು ಮತ್ತು ಹಿರಿಯ ಸಾಹಿತಿ ಮಾಜಿದ್ ದಾಗ್ಗಿ ಸೇರಿದಂತೆ ಮುಂತಾದವರು ಇದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…