ಬಿಸಿ ಬಿಸಿ ಸುದ್ದಿ

ಕೃಷಿ ಭಾಗ್ಯ ಯೋಜನೆ ಅರ್ಜಿ ಸಲ್ಲಿಸಲು ಜನೆವರಿ 01 ಕೊನೆ ದಿನ

ಸುರಪುರ: ಕೃಷಿ ಭಾಗ್ಯ ಯೋಜನೆ: 2023-24ರ ಆಯವ್ಯಯ ಭಾಷಣದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಕಂಡಿಕೆ- 39 ರಲ್ಲಿ “ನಮ್ಮ ಸರ್ಕಾರ ಹಿಂದೆ ಜಾರಿಗೊಳಿಸಿದ್ದ ಕೃಷಿ ಭಾಗ್ಯ ಯೋಜನೆಯು ಅತ್ಯಂತ ಜನಪ್ರಿಯ ಹಾಗೂ ಉಪಯುಕ್ತವಾಗಿತ್ತು. ಈ ಯೋಜನೆಯನ್ನು ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯೊಂದಿಗೆ ಸಂಯೋಜಿಸಿ 100 ಕೋಟಿ ರೂ. ವೆಚ್ಚದಲ್ಲಿ ಮರು ಜಾರಿಗೊಳಿಸಲಾಗುವುದು” ಎಂದು ಘೋಷಿಸಿರುತ್ತಾರೆ.

ಯೋಜನೆಯ ಗುರಿ: ಮಳೆಯಾಶ್ರಿತ ಕೃಷಿ ನೀತಿ, 2014 ರನ್ವಯ ರಾಜ್ಯದ 5 ಒಣ ಹವಾಮಾನ ವಲಯಗಳ 24 ಬರ ಪೀಡಿತ ಜಿಲ್ಲೆಗಳಲ್ಲಿನ 106 ತಾಲ್ಲೂಕುಗಳಲ್ಲಿ ಹಾಗೂ ಗಣಿಗಾರಿಕೆಯಿಂದ ಬಾದಿತ ಪ್ರದೇಶದಲ್ಲಿ ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವುದರೊಂದಿಗೆ ಬರ ಉಪಶಮನದ ಗುರಿಯನ್ನು ಹೊಂದಿರುತ್ತದೆ.

ಈ ಯೋಜನೆಯಡಿ ಆಸಕ್ತ ರೈತರು ಅರ್ಜಿ ಸಲ್ಲಿಸಲ ಜನೆವರಿ 01 ಕೊನೆ ದಿನ ವಾಗಿರುತ್ತದೆ. ಆದ್ದರಿಂದ ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರಕ್ಕೆ ಸಲ್ಲಿಸುವುದು.

ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಾಲೂಕ ಸಹಾಯಕ ಕೃಷಿ ನಿರ್ದೇಶಕರು ಸುರಪುರ ರವರಾದ ಡಾ. ಭೀಮರಾಯ ಹವಾಲ್ದಾರ್ ರವರು ರೈತರಲ್ಲಿ ವಿನಂತಿಸಿ,ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸುರಪುರ ಅಥವಾ ಕೃಷಿ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರ ರವರನ್ನು ಸಂಪರ್ಕಿಸಲು ಕೋರಿದೆ.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago