ಸುರಪುರ: ತಾಲೂಕಿನ ವಾಗಣಗೇರಾ ಗ್ರಾಮದಲ್ಲಿ ಜನೆವರಿ 01 ರಂದು ರಾತ್ರಿ ಗ್ರಾಮ ದೇವತೆ ಜಾತ್ರೆ ಇದ್ದು ಈ ಸಂದರ್ಭದಲ್ಲಿ ಕೋಣ ಕುರಿತಗಳ ಬಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯಲಿದ್ದು,ಇದನ್ನು ತಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಕ್ರಾಂತಿಕಾರಿ ಬಣದ ಮುಖಂಡರು ನಗರದ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನೆಡಸಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘದ ರಾಜ್ಯ ಸಂಘಟನಾ ಸಂಚಾಲಕ ಮಲ್ಲಿಕಾರ್ಜುನ ಕ್ರಾಂತಿ ಮಾತನಾಡಿ,ದೇವಿಕೇರಾ ಗ್ರಾಮದಲ್ಲಿ ನಡೆಯುತ್ತಿದ್ದ ಕೋಣ ಕುರಿ ಬಲಿಯನ್ನು ತಡೆಯುವ ಮೂಲಕ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ಉತ್ತಮವಾದ ಕಾರ್ಯ ಮಾಡಿದ್ದು,ಅದರಂತೆ ಈಗ ಜನೆವರಿ 01 ರಂದು ರಾತ್ರಿ ವಾಗಣಗೇರಾ ಗ್ರಾಮದಲ್ಲಿ ಗ್ರಾಮ ದೇವತೆ,ಮರೆಮ್ಮ,ಕೆಂಚಮ್ಮ ದೇವರ ಹೆಸರಲ್ಲಿ ಕೋಣ ಕುರಿಗಳ ಬಲಿ ನಡೆಯಲಿದ್ದು ಜಿಲ್ಲಾಡಳಿತ,ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಇಂತಹ ಬಲಿಯನ್ನು ತಡೆಯಬೇಕು ಎಂದು ಆಗ್ರಹಿಸಿದರು.
ನಂತರ ಡಿವೈಎಸ್ಪಿಗೆ ಬರೆದ ಮನವಿಯನ್ನು ಪಿ.ಎಸ್.ಐ ಸಿದ್ರಾಮಪ್ಪ ಯಡ್ರಾಮಿ ಅವರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖಂಡರಾದ ಮಾನಪ್ಪ ಕಟ್ಟಿಮನಿ,ಮಾನಪ್ಪ ಕರಡಕಲ್,ಮಲ್ಲಿಕಾರ್ಜುನ ಕುರಕುಂದಿ,ಮಲ್ಲಿಕಾರ್ಜುನ ಶಾಖನವರ್,ಮಲ್ಲಿಕಾರ್ಜುನ ಆಶಿನಾಳ,ಮಾನಪ್ಪ ಬಿಜಾಸಪುರ,ಮೂರ್ತಿ ಬೊಮ್ಮನಹಳ್ಳಿ,ತಾಲೂಕು ಸಂಚಾಲಕ ಬಸವರಾಜ ದೊಡ್ಮನಿ,ಮಲ್ಲಿಕಾರ್ಜುನ ತಳ್ಳಳ್ಳಿ, ಜಟ್ಟೆಪ್ಪ ನಾಗರಾಳ,ಬುದ್ಧವಂತ ನಾಗರಾಳ,ರವಿಚಂದ್ರ ಬೊಮ್ಮನಹಳ್ಳಿ,ಖಾಜಾಹುಸೇನ್ ಗುಡಗುಂಟಿ,ಮಹೇಶ ಯಾದಗಿರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…