ಬಿಜೆಪಿ ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಮತ್ತಿಮಡು ನೇಮಕ

0
18

ಕಲಬುರಗಿ: ಬಿಜೆಪಿ ಪಕ್ಷದ ರಾಜ್ಯ ಕಾರ್ಯದಶಿಯಾಗಿ ಕಲಬುರಗಿ‌ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಮಡು ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ್ ಸಂತಸ ವ್ಯಕ್ತಪಡಿಸಿ ,ಪಕ್ಷ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಯಿ ನಿಭಾಯಿಸಿದ್ದಾರೆ. ಅವರಿಗೆ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿರುವುದರಿಂದ ಪಕ್ಷದ ಬಲ ಮತ್ತಷ್ಟು ವೃದ್ಧಿಸಲಿದೆ. ಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಯಶಸ್ಸು ಸಿಗಲಿದೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Contact Your\'s Advertisement; 9902492681

ಮತ್ತಿಮಡು ಅವರ ಸಾರಥ್ಯವು ರಾಜ್ಯ ಬಿಜೆಪಿಗೆ ನವಶಕ್ತಿ, ನವಚೈತನ್ಯ ತುಂಬಲಿದೆ. ಮತ್ತಿಮಡು ಅವರದ್ದು ಅಪರೂಪದ ವ್ಯಕ್ತಿತ್ವ. ಸಂಘಟನಾ ಚತುರತೆ ಹೊಂದಿದ್ದಾರೆ. ಎಲ್ಲರೊಂದಿಗೆ ಬೆರೆತು, ಸರ್ವರ ಹಿತದಿಂದ ದುಡಿಯುವ ವಿಶೇಷ ಗುಣವುಳ್ಳ ನಾಯಕರು. ರಾಜ್ಯದ ಸಮಗ್ರ ಅಭಿವೃದ್ಧಿಯ ದೂರದೃಷ್ಟಿ ಹೊಂದಿದ್ದಾರೆ. ಅವರ ನೇಮಕದಿಂದ ಬಹಳ ಸಂತಸವಾಗಿದೆ ಎಂದು ಮರತೂರಕರ್ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here