ಶಹಾಬಾದ: ನಗರಸಭೆಯ ವಾರ್ಡ 25ರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವಂತೆ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕೆಂದು ಶಾಸಕರಾದ ಬಸವರಾಜ ಮತ್ತಿಮಡು ಹೇಳಿದರು.
ಅವರು ಬಿಜೆಪಿ ಪಕ್ಷದ ಕಾರ್ಯಾಲಯದಲ್ಲಿ ನಗರಸಭೆಯ ವಾರ್ಡ 25ರ ಉಪಚುನಾವಣೆ ಪ್ರಯುಕ್ತ ಆಯೋಜಿಸಲಾದ ಸಭೆಯಲ್ಲಿ ಮಾತನಾಡಿದರು.
ಚುನಾವಣೆಯ ಈ ಸಂದರ್ಭದಲ್ಲಿ ಎಲ್ಲಾ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿ ಮನೆಮನೆಗೆ ತೆರಳಿ ಮತದಾರರ ವಿಶ್ವಾಸಕ್ಕೆ ತೆಗೆದುಕೊಂಡು ಬಿಜೆಪಿ ಅಭ್ಯರ್ಥಿ ಪರವಾಗಿ ಮತಯಾಚಿಸಿ.ಈ ಬಾರಿ ವಾರ್ಡ ನಂ. 25 ಬಿಜೆಪಿ ಪಾಲಾಗಬೇಕು.ಆ ನಿಟ್ಟಿನಲ್ಲಿ ಎಲ್ಲರೂ ಶ್ರಮವಹಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಅಣವೀರಪ್ಪ ಇಂಗಿನಶೆಟ್ಟಿ, ಪ್ರಮುಖರಾದ ಅರುಣ ಪಟ್ಟಣಕರ, ಚಂದ್ರಕಾಂತ ಗೊಬ್ಬೂರಕರ, ದಶವಂತ ಓಣಿ ಚುನಾವಣಾ ಪ್ರಚಾರದ ಬಗ್ಗೆ ಮಾತನಾಡಿದರು. ಸದಾನಂದ ಕುಂಬಾರ ಸ್ವಾಗತಿಸಿ, ನಿರೂಪಿಸಿದರು, ಸಿದ್ರಾಮ ಕುಸಾಳೆ ವಂದಿಸಿದರು.
ಪಕ್ಷದ ಪದಾಧಿಕಾರಿಗಳು, ಪ್ರಮುಖರು, ನಗರಸಭೆ ಸದಸ್ಯರು, ಮಹಾಶಕ್ತಿ ಕೇಂದ್ರ ಪದಾಧಿಕಾರಿಗಳು, ಶಕ್ತಿ ಕೇಂದ್ರದ ಪ್ರಮುಖರು, ಮೊರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…