ಆಳಂದ ಶಾಸಕರ ಅಪ್ತನ ಮಗನ ಕೊಲೆ

0
37

ಕಲಬುರಗಿ: ಆಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಅವರ ಅಪ್ತ ಬಸವರಾಜ್ ಚೌಲ್ ಅವರ ಮಗನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಅಳಂದ ಸೋಲಾಪುರ ನಡುವಿನ ಜಿಡಗಾ ಹೈವೆ ರಸ್ತೆಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಚಂದ್ರಶೇಖರ್ ಚೌಲ್ (21) ಕೊಲೆಯಾದ ದುರ್ದೈವಿ. ಗೆಳೆಯರೊಂದಿಗೆ ಪಾರ್ಟಿಯಲ್ಲಿ ಜಗಳ ವಿಕೋಪಕ್ಕೆ ತಿರುಗಿ ಸ್ನೇಹಿತನೇ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎಂದು ಶಂಕೆ ವ್ಯಕ್ತವಾಗುತ್ತಿದ್ದು ಕೊಲೆ ನಿಖರ ಕಾರಣ ತಿಳಿದುಬಂದಿಲ್ಲ.

Contact Your\'s Advertisement; 9902492681

ಘಟನಾ ಸ್ಥಳಕ್ಕೆ ಆಳಂದ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here