ಸುರಪುರ; ಇ.ಪಿ.ಎಫ್: ನಿಧಿ ಆಪ್ಕೆ ನಿಕಟ್, 2.0 ಕಾರ್ಯಕ್ರಮ

0
18

ಯಾದಗಿರಿ: ಕಾರ್ಮಿಕರ ಭವಿಷ್ಯ ನಿಧಿ ಇಲಾಖೆಯ ವತಿಯಿಂದ ಪ್ರತಿ ತಿಂಗಳು 27ನೇ ತಾರೀಖಿನಂದು ದೇಶದಾದ್ಯಂತ ಎಲ್ಲಾ ಜಿಲ್ಲಾ ವ್ಯಾಪ್ತಿಗಳಲ್ಲಿ ಏಕಕಾಲದಲ್ಲಿ ನಿಧಿ ಆಪ್ಕೆ ನಿಕಟ್, 2.0 ಕಾರ್ಯಕ್ರಮವನ್ನು ಏರ್ಪಡಿಸಲಾಗುತ್ತದೆ‌. ಯಾದಗಿರಿ ಜಿಲ್ಲೆಯ ಡಿಸೆಂಬರ್ ತಿಂಗಳ ಕಾರ್ಯಕ್ರಮವನ್ನು ನಗರಸಭೆ, ಸುರಪುರದಲ್ಲಿ ಬುಧವಾರ ಏರ್ಪಡಿಸಲಾಗಿದೆ ಎಂದು ಪ್ರಾದೇಶಿಕ ಭವಿಷ್ಯ‌ ನಿಧಿ ಆಯುಕ್ತ ರವಿ ಯಾದವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಧಿ ಆಪ್ಕೆ ನಿಕಟ್,2.0 ಕಾರ್ಯಕ್ರಮದ ಯಾದಗಿರಿ ಜಿಲ್ಲಾ ನೋಡಲ್ ಅಧಿಕಾರಿ ಬಸವರಾಜ ಹೆಳವರ‌ ಯಾಳಗಿ ಭವಿಷ್ಯ ನಿಧಿ ಇಲಾಖೆಯ ಸೇವೆಗಳು ಹಾಗೂ ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಬಗ್ಗೆ ಕಾರ್ಮಿಕರಲ್ಲಿ ಅರಿವು ಮೂಡಿಸಲಿದ್ದಾರೆ. ಭವಿಷ್ಯ ನಿಧಿ ಸದಸ್ಯರು, ಪಿಂಚಣಿದಾರರು ಹಾಗೂ ಉದ್ಯೋಗದಾತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here