ಬಿಸಿ ಬಿಸಿ ಸುದ್ದಿ

ಹಳ್ಳಿಗರ ಹೃದಯದಲ್ಲಿ ಅರಳಿದ ಅಟಲ್ ಜೀ: ವೀರಣ್ಣ ಯಾರಿ

ವಾಡಿ: ಕೇವಲ ಕೆಲವೇ ಜನಸಂಖ್ಯೆ ಹೊಂದಿರುವ ಪುಟ್ಟ ಹಳ್ಳಿಗಳಿಗೂ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ’ಯ ಮೂಲಕ ಸಂಪರ್ಕ ಕಲ್ಪಿಸಿ ಗ್ರಾಮೀಣಾಭಿವೃದ್ಧಿಗೆ ಒತ್ತು ನೀಡಿ, ಪ್ರತಿ ಗ್ರಾಮದ ಜನರ ಮನದಲ್ಲಿ ಅಟಲ್ ಜೀ ಮನೆ ಮಾಡಿದ್ದಾರೆ ಎಂದು ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು.

ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ಉತ್ತಮ ಆಡಳಿತ ದಿನಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದರು.

ರಸ್ತೆಗಳು ಕೇವಲ ಮೂಲಭೂತ ಸೌಕರ್ಯ ವಲ್ಲ ಬದಲಿಗೆ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಪಥ ಎಂದು ಅವರು ಸುವರ್ಣ ಚತುಷ್ಪಥ ಯೋಜನೆ’ ಮೂಲಕ ಸಾಧಿಸಿ ತೋರಿಸಿದರು.

ಈ ಯೋಜನೆ ಮುಖಾಂತರ ತಮ್ಮದೇ ಅಭಿವೃದ್ಧಿ ಎಂದು ಕೆಲವರು ತಮ್ಮ ಬೆಳೆ ಬೇಯಿಸಿ ಕೋಳ್ಳುತ್ತಿದ್ದಾರೆ,ವಿಶ್ವದ ಪ್ರಭಾವಿ ರಾಷ್ಟ್ರಗಳ ವಿರೋಧಕ್ಕೆ ಮಣಿಯದೇ ಪೋಕ್ರಾನಿನಲ್ಲಿ ಅಣು ಪರೀಕ್ಷೆ ನಡೆಸಿದ ಅವರ ದಿಟ್ಟತನ ಭಾರತದ ಪ್ರತಿ ನಾಗರಿಕನ ಸ್ವಾಭಿಮಾನ ಮೆರೆದಿದ್ದು ಎಂದು ಮರೆಯದಂತಾಗಿದೆ. ಮಕ್ಕಳು ಶಾಲೆಯತ್ತ ತೆರಳಲಾಗದೆ ಇದ್ದರೆ ಶಾಲೆಯೇ ಮಕ್ಕಳ ಬಳಿ ತೆರಳಬೇಕು ಎನ್ನುವ ಸ್ವಾಮಿ ವಿವೇಕಾನಂದರ ವಾಣಿಯನ್ನು ಸಾಧಿಸಿದ್ದು ಅಟಲ್ ಜಿ ಸರ್ಕಾರ ಜಾರಿಗೆ ತಂದ ಸರ್ವಶಿಕ್ಷಾ ಅಭಿಯಾನ.

ಪಾಕಿಸ್ತಾನದೊಂದಿಗೆ ರಾಜತಾಂತ್ರಿಕ ಸಂಬಂಧಗಳ ಸುಧಾರಣೆ ಗಾಗಿ ಯತ್ನ ಮತ್ತು ಅವರಿಗೆ ಬುದ್ದಿ ಕಲಿಸಿದ್ದು,ಕಾರ್ಗಿಲ್ ವಿಜಯ ಇತ್ಯಾದಿ ಮಹತ್ವದ ನಿರ್ಧಾರ ಅಟಲ್ ‌ಜೀ‌ ಆಡಳಿತದ ಸಾಧನೆಯಾಗಿದೆ ಆದ್ದರಿಂದ ಇವರ ಜನ್ಮದಿನಾಚರಣೆಯನ್ನು 2014 ರಲ್ಲಿ ಮೋದಿ ಜೀ ಅವರು ಉತ್ತಮ ಆಡಳಿತ ದಿನವಾಗಿ ಘೋಷಿಸಿದ್ದಾರೆ ಅದರಂತೆ ನಾವು ಆಚರಣೆ ಮಾಡುತ್ತಾ ಬರುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಶಕ್ತಿ ಕೇಂದ್ರದ ಉಪಾಧ್ಯಕ್ಷ ಅಶೋಕ ಪವಾರ,ಪ್ರಧಾನ ಕಾರ್ಯದರ್ಶಿ ರವಿ ನಾಯಕ,ಎಸ್ ಸಿ ಮೂರ್ಚಾ ಅಧ್ಯಕ್ಷ ದೌಲತರಾವ ಚಿತ್ತಾಪುರಕರ ಮುಖಂಡರಾದ ರಾಮಚಂದ್ರ ರೆಡ್ಡಿ,ಅಶೋಕ‌ ಹರನಾಳ,ಭೀಮರಾವ ದೊರೆ,ಶರಣಗೌಡ ಚಾಮನೂರ, ಶಿವಶಂಕರ ಕಾಶೆಟ್ಟಿ,ಕಿಶನ ಜಾದವ, ಸುಬಾಷ ವರ್ಮ,ರಾಜು ಕೋಲಿ,ಅಯ್ಯಣ್ಣ ದಂಡೋತಿ,ಜಯಂತ ಪವಾರ,ಮಹೇಂದ್ರ ಕುಮಾರ,ಯಂಕಮ್ಮ ಗೌಡಗಾಂವ,ನಿರ್ಮಲಾ ಇಂಡಿ,ಶರಣಮ್ಮ ಯಾದಗಿರಿ,ಉಮಾದೇವಿ ಗೌಳಿ,ಹೀರಾ ನಾಯಕ,ಮಲ್ಲಿಕಾರ್ಜುನ ಸಾತಖೇಡ,ಪ್ರೇಮ ರಾಠೋಡ,ಬನಶಂಕರ ಮುಸ್ತುರ,ಅಜಯ ಸೂಗುರ ಸೇರಿದಂತೆ ಇತರರು ಇದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

2 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

3 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

3 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

3 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

4 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

5 hours ago