ಪ್ರೊ. ಆರ್.ಕೆ. ಹುಡಗಿಗೆ ಅಧಿಕೃತ ಆಹ್ವಾನ

0
85

ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಡಿ. 29 ಮತ್ತು 30ರಂದು ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ರಾಜ್ಯ ಮಟ್ಟದ 3ನೇ ವೈಜ್ಞಾನಿಕ ರಾಜ್ಯ ಸಮ್ಮೇಳನ ನಡೆಯಲಿದೆ.

ರಾಜ್ಯ ಮಟ್ಟದ ಎಚ್.ಎನ್. ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯಿಂದ ಆಯ್ಕೆಯಾಗಿರುವ ಪ್ರೊ. ಆರ್.ಕೆ. ಹುಡಗಿ ಅವರಿಗೆ ಸಮ್ಮೇಳನಕ್ಕೆ ಆಗಮಿಸಿ ಪ್ರಶಸ್ತಿ ಸ್ವೀಕರಿಸುವಂತೆ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್‍ನ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಆಮಂತ್ರಣ ಪತ್ರಿಕೆ ನೀಡಿ ಅಧಿಕೃತ ಆಹ್ವಾನ ನೀಡಲಾಯಿತು.

Contact Your\'s Advertisement; 9902492681

ಆಹ್ವಾನ ಸ್ವೀಕರಿಸಿ ಮಾತನಾಡಿದ ಪ್ರೊ. ಆರ್.ಕೆ. ಹುಡಗಿಯವರು, ಸಮಾಜದಲ್ಲಿ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವನೆ ಬಿತ್ತುವ ಕಾರ್ಯ ಮಾಡುತ್ತಿರುವ ಡಾ. ಹುಲಿಕಲ್ ನಟರಾಜ ನೇತೃತ್ವದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕಾರ್ಯ ಶ್ಲಾಘನೀಯವಾಗಿದೆ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಶಾಬಾದಿ, ಪ್ರಧಾನ ಕಾರ್ಯದರ್ಶಿ ಡಾ. ಶಿವರಂಜನ ಸತ್ಯಂಪೇಟೆ, ರಾಜ್ಯ ಸಮಿತಿ ಸದಸ್ಯ ಶರಣಬಸವ ಕಲ್ಲಾ, ಜಿಲ್ಲಾ ಸಂಚಾಲಕ ಪರಮೇಶ್ವರ ಶೆಟಕಾರ, ಧನರಾಜ ತಾಂದ್ಲೆ, ಶರಣಬಸಪ್ಪ ನಾಗೂರ ಇತರರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here