ಬಿಸಿ ಬಿಸಿ ಸುದ್ದಿ

ಕರ್ನಾಟಕ ಸಂಭ್ರಮ ರಥಯಾತ್ರೆಗೆ ಭವ್ಯ ಸ್ವಾಗತ: ಅದ್ಧೂರಿ ಮೆರವಣಿಗೆ

ಸುರಪುರ: ಕರ್ನಾಟಕ ನಾಮಕರಣಗೊಂಡು 50 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಕರ್ನಾಟಕ ಸಂಭ್ರಮ ರಥಯಾತ್ರೆ ನಗರಕ್ಕೆ ಆಗಮಿಸಿದ್ದು ತಾಲೂಕು ಆಡಳಿತ ದಿಂದ ಭವ್ಯ ಸ್ವಾಗತ ಕೋರಿ,ಅದ್ಧೂರಿ ಮೆರವಣಿಗೆ ನಡೆಸಲಾಯಿತು.

ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ರಥ ಯಾತ್ರೆಗೆ ತಾಲೂಕು ಆಡಳಿತ ದಿಂದ ಸ್ವಾಗತಿಸಿ ಕನ್ನಡ ಭುವನೇಶ್ವರಿಗೆ ಪೂಜೆ ಸಲ್ಲಿಸಿ ನಂತರ ಮಹಾತ್ಮ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.ನಂತರ ನಗರದ ಪ್ರಮುಖ ಬೀದಿಗಳ ಮೂಲಕ ಮೆರವಣಿಗೆ ನಡೆಸಲಾಯಿತು.

ರಂಗಂಪೇಟೆಯ ದೊಡ್ಡ ಬಜಾರ ಮೂಲಕ ಪ್ರಮುಖ ಬೀದಿಗಳ ಮೂಲಕ ತಿಮ್ಮಾಪುರ ಮಾರ್ಗವಾಗಿ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದ ವರೆಗೆ ಅದ್ಧೂರಿ ಮೆರವಣಿಗೆ ನಡೆಯಿತು.

ಮೆರವಣಿಗೆಯಲ್ಲಿ ಡೊಳ್ಳು ಕುಣಿತ,ಛದ್ಮ ವೇಷ ಸೇರಿದಂತೆ ವಿವಿಧ ಕಲಾ ತಂಡಗಳು ಹಾಗೂ ಶಾಲಾ ಕಾಲೇಜುಗಳ ನೂರಾರು ಮಕ್ಕಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.ಅಲ್ಲದೆ ಕರವೇ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ಅನೇಕ ಮುಖಂಡರು ನೂರಾರು ಕಾರ್ಯಕರ್ತರು ಕನ್ನಡ ಧ್ವಜ ಹಿಡಿದು ಮೆರವಣಿಗೆಯಲ್ಲಿ ಪಾಲ್ಗೊಂಡು ಕನ್ನಡ ಅಭಿಮಾನ ಮೆರೆದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಕೆ.ವಿಜಯಕುಮಾರ,ತಾ.ಪಂ ಇಓ ಬಸವರಾಜ ಸಜ್ಜನ್,ಕನ್ನಡ ಮತ್ತು ಸಂಸ್ಕøತಿ ಇಲಾಖೆ ಜಿಲ್ಲಾ ಉಪ ನಿರ್ದೇಶಕಿ ಉತ್ತರದೇವಿ ಮಠಪತಿ,ಕಸಾಪ ತಾಲೂಕು ಅಧ್ಯಕ್ಷ ಶರಣಬಸಪ್ಪ ಯಾಳವಾರ,ನಗರಸಭೆ ಪೌರಾಯುಕ್ತ ಜೀವನಕುಮಾರ್ ಕಟ್ಟಿಮನಿ,ನಿವೃತ್ತ ಉಪನ್ಯಾಸಕ ವೇಣುಗೋಪಾಲ ನಾಯಕ ಜೇವರ್ಗಿ,ಶೀಕ್ಷಣ ಕ್ಷೇತ್ರದ ಪಂಡಿತ ನಿಂಬೂರ,ಯಲ್ಲಪ್ಪ ಕಾಡ್ಲೂರ,ನಗರಸಭೆ ವ್ಯವಸ್ಥಾಪಕ ಯಲ್ಲಪ್ಪ ನಾಯಕ,ಕಸಾಪ ನಿಕಟಪೂರ್ವ ಅಧ್ಯಕ್ಷ ಶ್ರೀನಿವಾಸ ಜಾಲವಾದಿ,ಮುಖಂಡರಾದ ರಮೇಶ ದೊರೆ ಆಲ್ದಾಳ,ವೆಂಕಟೇಶ ಬೇಟೆಗಾರ,ಮಹಿಳಾ ಮತ್ತು ಮಕ್ಕಳ ಅಭಿವೃಧ್ಧಿ ಇಲಾಖೆ ಮಹಿಳಾ ಮೇಲ್ವಿಚಾರಕಿ ಜಯುಶ್ರೀ ಬಿರಾದಾರ,ರಿಕ್ರಿಯೇಷನ್ ಕ್ಲಬ್ ಅಧ್ಯಕ್ಷ ರಾಜಾ ಕುಮುಂದ ನಾಯಕ, ಕರವೇ ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ,ಹೋರಾಟಗಾರರಾದ ನಿಂಗಪ್ಪ ನಾಯಕ ಬಿಜಾಸಪುರ,ಯಲ್ಲಪ್ಪ ನಾಯಕ,ಕಮಲಾಕರ ಅರಳಿಗಿಡ,ಕಲ್ಯಾಣಕುಮಾರ ಸಜ್ಜನಶೆಟ್ಟಿ, ರವಿನಾಯಕ ಬೈರಿಮಡ್ಡಿ,ಯಲ್ಲಪ್ಪ ನಾಯಕ,ಶ್ರೀಶೈಲ ಯಂಕಂಚಿ,ದೇವಿಂದ್ರಪ್ಪ ಕರಡಕಲ್,ರಾಘವೇಂದ್ರ ಭಕ್ರಿ,ಮಲ್ಲು ವಿಷ್ಣು ಸೇನಾ,ಹಣಮೆಗೌಡ ಶಖಾಪುರ ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

8 hours ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

8 hours ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

8 hours ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

9 hours ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

9 hours ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

9 hours ago