ಕಲಬುರಗಿ: ಯೇಸು ಕ್ರಿಸ್ತ ಅವರು ತನ್ನನ್ನು ಸಿಲುಬೆಗೇರಿಸಿದವರಿಗೂ ಕೂಡಾ ಕೆಟ್ಟದನ್ನು ಬಯಸದೇ, ಅವರನ್ನು ಕ್ಷಮಿಸುವಂತೆ ದೇವರಲ್ಲಿ ಪ್ರಾರ್ಥಿಸಿದ ಮಹಾತ್ಮ. ಎಂಥ ಸಂದರ್ಭದಲ್ಲಿಯೂ ದ್ವೇಷದಿಂದ ದೂರವಿದ್ದ ಅವರು, ಸದಾ ಪ್ರೀತಿ, ಕರುಣೆ, ವಿಧೇಯತೆ, ಶಾಂತಿ, ತ್ಯಾಗದಿಂದ ಅವರು ಮಾದರಿಯಾಗಿದ್ದಾರೆ. ಎಲ್ಲರು ದೇವರ ಮಕ್ಕಳಾಗಿದ್ದು, ಒಂದೇಯಾಗಿದ್ದು ದ್ವೇಷ, ಅಸೂಯೆ, ಹಿಂಸೆ ರಹಿತ ಸಮಾಜದ ನಿರ್ಮಾಣದ ಸಾಮರಸ್ಯ ಸಂದೇಶ ಸಾರಿದ ಅವರ ಜೀವನಕ್ರಮವೇ ಜಗತ್ತಿಗೆ ಮಾದರಿಯಾಗಿದೆ ಎಂದು ಚಿಂತಕ ಪ್ರೊ.ಎಂ.ರೂಬಿನ್ ಅಭಿಪ್ರಾಯಪಟ್ಟರು.
ಕ್ರಿಸ್ಮಸ್ ಹಬ್ಬದ ಪ್ರಯುಕ್ತ ನಗರದ ವಿಜಯ ವಿದ್ಯಾಲಯ ಕಾಲೇಜಿನ ಹಿದುಗಡೆಯಿರುವ ತಮ್ಮ ಮನೆಯ ಆವರಣದಲ್ಲಿನ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಸೋಮವಾರ ಜರುಗಿದ ‘ಕ್ರಿಸ್ಮಸ್ ಸೌಹಾರ್ಧ ಕಾರ್ಯಕ್ರಮ’ದಲ್ಲಿ ಸತ್ಕಾರ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲಾ ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಡಾ.ಸುನೀಲಕುಮಾರ ಎಚ್.ವಂಟಿ ಮಾತನಾಡಿ, ಕ್ರಿಸ್ಮಸ್ ಹಬ್ಬ ಕೇವಲ ಆಚರಣೆಯಾಗಿರದೆ, ಯೆಸುವಿನ ತತ್ವಗಳನ್ನು ಅಳವಡಿಸಿಕೊಳ್ಳುವುದಾಗಿದೆ. ಬಡವರು, ನಿರ್ಗತಿಕರು, ಶೋಷಿತರಿಗೆ ಕೈಹಿಡಿದು ನಡೆಸಿದವರು. ಮೇಲು-ಕೀಳು ತಾರತಮ್ಯ ನಿವಾರಣೆ ಶ್ರಮಿಸಿದವರು. ರೋಗಿಗಳು, ವಿಧವೆಯರು, ಅಸಹಾಯಕರಿಗೆ ಕರುಣೆ ತೋರಿದವರು. ಇಂಥ ಯಾರೇ ಮಹನೀಯರನ್ನು ಯಾವುದೇ ಒಂದು ಧರ್ಮಕ್ಕೆ ಸೀಮಿತಗೊಳಿಸದೆ, ಅವರ ತತ್ವ, ಸಂದೇಶಗಳನ್ನು ಅನುಸರಿಸುವುದು ಇಂದಿನ ಅಗತ್ಯವಾಗಿದೆ ಎಂದು ಮಾರ್ಮಿಕವಾಗಿ ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಎಚ್.ಬಿ.ಪಾಟೀಲ, ಶಿವಯೋಗೆಪ್ಪಾ ಎಸ್.ಬಿರಾದಾರ, ಹಮೀದ್ ಅಲಿ, ವಿನಿತಾ ಇಸ್ತರ್, ನಿತೀನ್ ಜಾಸ್ಫರ್, ಜರುಶಾ, ಯೋಗೇಶ ಬಿರಾದಾರ, ಮಲ್ಲಪ್ಪ ಭೋತಗಿ, ಶಿವರಾಜ ನೀಲಾ, ಕನಕಪ್ಪ ಬಿಲ್ವಾ, ರವಿ ಓಕಳಿ, ಗೌಡಪ್ಪಗೂಡಡ್ ಪಾಟೀಲ ಸೇರಿದಂತೆ ಇನ್ನಿತರರಿದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…