“ಕೌನ ಬನೇಗಾ ಜ್ಞಾನಪತಿ” ವಿಶಿಷ್ಠ ರಸಪ್ರಶ್ನೆ ಕಾರ್ಯಕ್ರಮಕ್ಕೆ ಸ್ಪರ್ಧಾರ್ಥಿಗಳಿಗೆ ಆಹ್ವಾನ

0
40

ಕಲಬುರಗಿ: ಕರ್ನಾಟಕದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸ್ಪರ್ಧಾರ್ಥಿಗಳಿಗೆ ಪ್ರೋತ್ಸಾಹಿಸುವ ಸಲುವಾಗಿ ಕಲಬುರಗಿ ಜಿಲ್ಲೆಯ ಪ್ರಜ್ಞಾ ದಿ ಇನ್ಸ್‍ಟ್ಯೂಟ್ ಆಫ್ ಇನ್ನೋವೇಟೀವ್ ಲರ್ನಿಂಗ್ ಹಾಗೂ ಕನ್ನಡ ರತ್ನ ಡಿ ಕರಿಯರ್ ಅಕಾಡೆಮಿ ವತಿಯಿಂದ “ಕೌನ ಬನೇಗಾ ಜ್ಞಾನಪತಿ” ವಿಶಿಷ್ಠ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ದಿನಾಂಕ 01-01-2024 ರಂದು ಕಲಬುರಗಿ ನಗರದ ಕನ್ನಡ ರತ್ನ ಡಿ ಕರಿಯರ್ ಅಕಾಡೆಮಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು ಇಂದಿನಿಂದ ನೊಂದಣಿ ಪ್ರಕ್ರಿಯೆ ಆರಂಭವಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ನೊಂದಣಿ ಕಡ್ಡಾಯಗೊಳಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಗಂಭೀರವಾಗಿ ತಯಾರಿ ನಡೆಸುತ್ತಿರುವವರಿಗೆ ಇದೊಂದು ವರದಾನವಾಗಲಿದೆ.

Contact Your\'s Advertisement; 9902492681

ಆಸಕ್ತ ಸ್ಪರ್ಧಾರ್ಥಿಗಳು ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ನೊಂದಾಯಿಸಿ ಭಾಗವಹಿಸಿ, ಇದರ ಸದೂಪಯೋಗ ಪಡೆಯುವಂತೆ ನಿರೂಪಕ ಹಾಗೂ ಶಿಕ್ಷಣ ತಜ್ಞ ಕೆ.ಎಂ.ವಿಶ್ವನಾಥ ಮರತೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ನೊಂದಾಯಿಸಲು 9686714046/9741129944/9611119256 ಗೆ ಸಂಪರ್ಕಿಸಿರಿ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here