ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾಗಿ ರವೀಂದ್ರ ಗುರುನಾಥ ಧಾಕಪ್ಪ ನೇಮಕ

ಕಲಬುರಗಿ; ರವೀಂದ್ರ ಗುರುನಾಥ ಧಾಕಪ್ಪ ಇವರನ್ನು ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಕಲಬುರಗಿ ನಗರದಲ್ಲಿ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠಕ್ಕೆ ಸೂಕ್ತವಾದ ಸ್ಥಳಾವಕಾಶದ ಕೊರತೆ ಇದ್ದುದರಿಂದ, ಕಲಬುರಗಿ ಪೀಠವು ಇಲ್ಲಿಯವರೆಗೂ ಕರ್ನಾಟಕ ಮಾಹಿತಿ ಆಯೋಗದ ಬೆಂಗಳೂರು ಕಛೇರಿಯಿಂದಲೇ ಕಾರ್ಯನಿರ್ವಹಿಸುತಿತ್ತು.

ಲೋಕೋಪಯೋಗಿ ಇಲಾಖೆ ಮತ್ತು ಕಲಬುರಗಿ ಜಿಲ್ಲಾಡಳಿತದ ಸಹಕಾರದಿಂದ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠವನ್ನು ತಾತ್ಕಾಲಿಕವಾಗಿ ಕಲಬುರಗಿ ನಗರದ “ಮಹಾಲ್-ಎ-ಶಾಹೀ” ಅತಿಥಿ ಗೃಹ, ಸ್ಟೇಷನ್ ರಸ್ತೆ, ಕಲಬುರಗಿ ಕಟ್ಟಡದಲ್ಲಿ ಜನವರಿ 01 ರಿಂದ ಕಾರ್ಯನಿರ್ವಹಿಸಲು ಮಾನ್ಯ ರಾಜ್ಯ ಮುಖ್ಯ ಮಾಹಿತಿ ಆಯುಕ್ತರು ಆದೇಶ ಹೊರಡಿಸಿರುತ್ತಾರೆ.

ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠವು ಜನವರಿ 1 ರಿಂದ ತಾತ್ಕಾಲಿಕವಾಗಿ ಕಲಬುರಗಿ ನಗರದ “ಮಹಾಲ್-ಎ-ಶಾಹೀ” ಅತಿಥಿ ಗೃಹ, ಸ್ಟೇಷನ್ ರಸ್ತೆ, ಕಲಬುರಗಿ ಕಟ್ಟಡದಿಂದ ಕಾರ್ಯನಿರ್ವಹಿಸುತ್ತದೆ. ಕಲಬುರಗಿ ಪೀಠದ ವಿಚಾರಣೆಗೆ ಹಾಜರಾಗುವ ಎಲ್ಲಾ ಅರ್ಜಿದಾರರು ಮತ್ತು ಪ್ರತಿವಾಧಿಗಳು ಇನ್ನು ಮುಂದೆ ಕಲಬುರಗಿ ನಗರದ ಕಲಬುರಗಿ ಪೀಠದಲ್ಲಿ ಹಾಜರಾಗುವುದು.

ಕಲಬುರಗಿ ವಿಭಾಗದ ವ್ಯಾಪ್ತಿಗೆ ಒಳಪಡುವ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳ ಅರ್ಜಿದಾರರು ಮಾಹಿತಿ ಹಕ್ಕು ಅಧಿನಿಯಮ – 2005 ಕಲಂ 19(3) ರಡಿ ಸಲ್ಲಿಸುವ ದ್ವಿತೀಯ ಮೇಲ್ಮನವಿ ಮತ್ತು ಕಲಂ 18(1) ರಡಿ ಸಲ್ಲಿಸುವ ದೂರು ಅರ್ಜಿಗಳನ್ನು ಇಲ್ಲಿಯವರೆಗೂ ಕರ್ನಾಟಕ ಮಾಹಿತಿ ಆಯೋಗದ ಬೆಂಗಳೂರು ಕಛೇರಿಗೆ ಸಲ್ಲಿಸುತ್ತಿದ್ದು, ಈಗಲೂ ಸಹಾ ತಮ್ಮ ಅರ್ಜಿಗಳನ್ನು ತಾತ್ಕಾಲಿಕವಾಗಿ ಕರ್ನಾಟಕ ಮಾಹಿತಿ ಆಯೋಗದ ಬೆಂಗಳೂರು ಕಛೇರಿಗೆ ಭೌತಿಕವಾಗಿ ಅಥವಾ ಆನ್‍ಲೈನ್ ಮೂಲಕ ಸಲ್ಲಿಸಲು ತಿಳಿಸಿದೆ ಎಂದು ಕನಾಟಕ ಮಾಹಿತಿ ಆಯೋಗದ ಕಾರ್ಯದರ್ಶಿ ಎ.ಬಿ.ಬಸವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

4 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

6 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

6 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

6 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

6 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

6 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420