ವಿಕಲಚೇತನ ಫಲಾನುಭವಿಗಳ ರಿಯಾಯಿತಿ ಬಸ್‍ಪಾಸ್‍ನ್ನು ಫೆಬ್ರವರಿ 29 ರವರೆಗೆ ಬಳಸಿಕೊಳ್ಳಲು ಅವಕಾಶ

ಕಲಬುರಗಿ; ವಿಕಲಚೇತನ ಫಲಾನುಭವಿಗಳಿಗೆ ವಿಕಲಚೇತನರ ರಿಯಾಯಿತಿ ಬಸ್‍ಪಾಸ್‍ನ್ನು ನವೀಕರಿಸಿಕೊಳ್ಳಲು ಸಾಕಷ್ಟು ಕಾಲಾವಕಾಶ ನೀಡುವ ಉದ್ದೇಶದಿಂದ 2023ನೇ ಸಾಲಿನಲ್ಲಿ ವಿತರಿಸಲಾಗಿರುವ ಪಾಸ್‍ಗಳನ್ನು (2023ರ ಡಿಸೆಂಬರ್ 31 ರವರೆಗೆ ಮಾನ್ಯತೆ ಇರುವ) ವಿಕಲಚೇತನರ ಪಾಸ್‍ಗಳನ್ನು 2024ರ ಫೆಬ್ರವರಿ 29 ರವರೆಗೆ ಉಪಯೋಗಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಭಾಗ-2ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ಫಲಾನುಭವಿಗಳು ಸೇವಾ ಸಿಂಧುವಿನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ, 660 ರೂ.ಗಳನ್ನು ನಗದು ರೂಪದಲ್ಲಿ ಪಾವತಿಸಿ 2024ರ ಫೆಬ್ರವರಿ 29 ರೊಳಗಾಗಿ ಬಸ್‍ಪಾಸ್‍ನ್ನು ನವೀಕರಿಸಿಕೊಳ್ಳಬೇಕು.

ಅದೇ ರೀತಿ 2024 ನೇ ವರ್ಷದ ಹೊಸ ಬಸ್‍ಪಾಸ್‍ನ್ನು ದಿನಾಂಕ:01.01.2024 ರಿಂದ 31.12.2024 ರವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಛೇರಿ, ಕಲಬುರಗಿ ವಿಭಾಗ-2 ರಲ್ಲಿ ವಿತರಿಸಲಾಗುತ್ತಿದೆ. ಹಳೆಯ ಪಾಸ್‍ಗಳನ್ನು ಕಲಬುರಗಿ ವಿಭಾಗ-2 ರ ವ್ಯಾಪ್ತಿಯಲ್ಲಿ ಬರುವ ತಾಲೂಕುಗಳಾದ ಕಲಬುರಗಿ, ಆಳಂದ, ಜೇವರ್ಗಿ ಮತ್ತು ಅಫಜಲಪೂರ ಬಸ್ ನಿಲ್ದಾಣಗಳÀಲ್ಲಿ ನವೀಕರಿಸಲಾಗುತ್ತಿದೆ. 2024ರ ಫೆಬ್ರವರಿ 29ರ ನಂತರ ಅಂಗವಿಕಲ ರಿಯಾಯಿತಿ ದರದ ಬಸ್‍ಪಾಸ್‍ಗಳನ್ನು ನವೀಕರಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

4 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

4 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

4 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

4 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

4 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420