ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಮಹಿಳೆಯರ ಬ್ಯಾಡ್ಮಿಂಟನ್ ತಂಡವನ್ನು ಆಯ್ಕೆ ಮಾಡಲಾಯಿತು.
ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವಾವಿದ್ಯಾಲಯದಲ್ಲಿ ಜ. 2ರಿಂದ 5 ರವರೆಗೆ ನಡೆಯಲಿರುವ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯದ ಬ್ಯಾಡ್ಮಿಟನ್ ಮಹಿಳಾ ಪಂಧ್ಯಾಟದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯ ತಂಡ ಭಾಗವಹಿಸಲಿದೆ.
ತಂಡದ ನಾಯಕಿ ರೇಣುಕಾ ಹಾಗೂ ಕ್ರೀಡಾಪಟುಗಳಾದ ಭುವನೇಶ್ವರಿ ಹಾಗೂ ಪೂಜಾ ಪಾಲ್ಗೊಳ್ಳಲಿದ್ದು, ತಂಡದ ವ್ಯವಸ್ಥಾಪಕರಾಗಿ ದೈಹಿಕ ಶಿಕ್ಷಣ ವಿಭಾಗದ ತಾಂತ್ರಿಕ ಸಹಾಯಕ (ಜಿಮ್ನಾಸ್ಟಿಕ್) ಪ್ರಶಾಂತ್ ಕುಮಾರ್ ಡಿ. ತೆರಳಲಿದ್ದಾರೆ.
ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯದ ಬ್ಯಾಡ್ಮಿಟನ್ ಮಹಿಳಾ ಪಂಧ್ಯಾಟದಲ್ಲಿ ಭಾಗವಹಿಸುತ್ತಿರುವ ದೈಹಿಕ ಶಿಕ್ಷಣ ವಿಭಾಗದ ಮಹಿಳಾ ಕ್ರೀಡಾಪಟುಗಳಿಗೆ ಕುಲಪತಿ ಪ್ರೊ. ದಯಾನಂದ ಅಗಸರ, ಕುಲಸಚಿವ ಡಾ. ಬಿ. ಶರಣಪ್ಪ, ಮೌಲ್ಯಮಾಪನ ಕುಲಸಚಿವ ಪ್ರೊ. ಜ್ಯೋತಿ ಧಮ್ಮ ಪ್ರಕಾಶ್, ವಿತ್ತಾಧಿಕಾರಿ ಪ್ರೊ. ರಾಜಾನಳ್ಕರ್ ಲಕ್ಷ್ಮಣ, ದೈಹಿಕ ಶಿಕ್ಷಣ ನಿರ್ದೇಶಕ. ಡಾ. ಎನ್. ಜಿ. ಕಣ್ಣೂರು, ಡಾ. ಹನುಮಂತ ಜಂಗೆ, ಡಾ. ಚಂದ್ರಕಾಂತ್ ಬಿರಾದಾರ, ಅರುಣ್ ಕುಮಾರ್ ಹೆಚ್. ಶುಭ ಹಾರೈಸಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…