ಸುರಪುರ: ಉದ್ಯೋಗ ಖಾತ್ರಿ ಕೆಲಸ ನೀಡುವಂತೆ ಆಗ್ರಹಿಸಿ ತಾಲೂಕಿನ ಸೂಗೂರು ಗ್ರಾಮ ಪಂಚಾಯತಿ ಮುಂದೆ ಕರ್ನಾಟಕ ಯುವ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಅನೇಕ ಜನ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆ ತಾಲೂಕು ಅಧ್ಯಕ್ಷ ಸಂತೊಷ ಭೂಮಶೆಟ್ಟಿ ಮಾತನಾಡಿ,ನಮ್ಮ ಸೂಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಗ್ರಾಮಗಳಲ್ಲಿರುವ ಜಾಬ್ ಕಾರ್ಡ್ ಹೊಂದಿರುವ ಕೂಲಿ ಕಾರ್ಮಿಕರಿಗೆ ಕೆಲಸ ಇಲ್ಲದೆ ಪರದಾಡುವಂತ ಪರಸ್ಥಿತಿ ನಿರ್ಮಾಣವಾಗಿದೆ,ಬರಗಾಲ ದಿಂದ ತತ್ತರಿಸಿರುವ ಜನರು ಈಗ ಕೆಲಸವಿಲ್ಲದೆ ಜೀವನ ನಡೆಸುವುದು ಕೂಡ ಕಷ್ಟವಾಗಿದೆ,ಆದ್ದರಿಂದ ಗ್ರಾಮ ಪಂಚಾಯತಿಯಿಂದ ಉದ್ಯೋಗ ಖಾತ್ರಿ ಕೆಲಸ ನೀಡದೆ ಇರುವುದರಿಂದ ಜನರು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ,ಇದರಿಂದ ಬೇಸತ್ತು ಕೂಲಿ ಕಾರ್ಮಿಕರು ಈಗ ಅನಿವಾರ್ಯವಾಗಿ ಪ್ರತಿಭಟನೆ ನಡೆಸುವ ಸ್ಥಿತಿ ಬಂದಿದೆ,ಅದಕ್ಕಾಗಿ ನಮ್ಮ ಕರ್ನಾಟಕ ಯುವ ರಕ್ಷಣಾ ವೇದಿಕೆ ಕೂಲಿ ಕಾರ್ಮಿಕರ ಸಮಸ್ಯೆಗೆ ನೆರವಾಗಿದ್ದು,ಇಂದು ಸಾಂಕೇತಿಕ ಪ್ರತಿಭಟನೆ ಮೂಲಕ ಸಲ್ಲಿಸಿ ವಿನಂತಿ ಮಾಡುಕೊಳ್ಳುತ್ತಿದ್ದೇವೆ,ಕೂಡಲೇ ಕೆಲಸ ನೀಡದಿದ್ದಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಗ್ರಾಮ ಪಂಚಾಯತಿ ಅಭಿವೃಧ್ಧಿ ಅಧಿಕಾರಿಗೆ ಬರೆದ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ತಾಲೂಕು ಪದಾಧಿಕಾರಿಗಳಾದ ವಿನೋದಕುಮಾರ,ಬಸವರಾಜ ಕಡಿಮನಿ,ಸುನೀಲ್ ಕುಮಾರ,ಭೀಮನಗೌಡ,ಸುರೇಶ ಬಿರಾದಾರ,ತಾಯಮ್ಮ,ಪಾರ್ವತಿ ಹಾಗೂ ಅನೇಕ ಜನ ಕೂಲಿ ಕಾರ್ಮಿಕರು ಭಾಗವಹಿಸಿದ್ದರು.